ಮುಖ್ಯಮಂತ್ರಿ ತವರು ಜಿಲ್ಲೆಯ ಕೆಸ್ತೂರು ಶಾಲೆಗೆ ಬಂತು ಕಂಪ್ಯೂಟರ್
ಕೆಸ್ತೂರು : ಹಳ್ಳಿಗಳಿಗೆ ಕಂಪ್ಯೂಟರ್ ಸಾಕ್ಷರತೆ ಒಯ್ಯುವ ಸರ್ಕಾರದ ಮಾಹಿತಿ ಸಿಂಧು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ತವರು ಜಿಲ್ಲೆ ಕೆಸ್ತೂರಿನಲ್ಲಿ ಸೋಮವಾರ ಚಾಲನೆ ದೊರೆಯಿತು.
ಕೆಸ್ತೂರಿನ ಶಾಲೆಯಲ್ಲಿ ಕಂಪ್ಯೂಟರ್ ಕಲಿಕಾ ಕೇಂದ್ರವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ - ಗ್ರಾಮೀಣ ಜನತೆಯನ್ನು ಕಂಪ್ಯೂಟರ್ ಸಾಕ್ಷರರನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.
ಮಾರ್ಚ್ ತಿಂಗಳ ಕೊನೆಯ ವೇಳೆಗೆ ಮಾಹಿತಿ ಸಿಂಧು ಕಾರ್ಯಕ್ರಮದಡಿ ರಾಜ್ಯದ 1000 ಗ್ರಾಮೀಣ ಪ್ರದೇಶದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಕಲಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ವಿಶ್ವದಲ್ಲಿ ಬಳಸಲಾಗುತ್ತಿರುವ ಸಾಫ್ಟ್ವೇರ್ನಲ್ಲಿ ಶೇ.40 ರಷ್ಟು ಸಾಫ್ಟ್ವೇರ್ ಭಾರತದಲ್ಲಿಯೇ ತಯಾರಾಗುತ್ತಿದೆ. ಆ 40 ರಲ್ಲಿ ರಾಜ್ಯದ ಪಾಲು 30 ರಷ್ಟಿದೆ ಎಂದು ರಾಜ್ಯದಲ್ಲಿನ ಐಟಿ ಅಗ್ಗಳಿಕೆಯನ್ನು ಕೃಷ್ಣ ಬಣ್ಣಿಸಿದರು. ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೀರಾವರಿ ಸಚಿವ ಎಚ್.ಕೆ. ಪಾಟೀಲ್ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಮಕ್ಕಳ ಸಂಭ್ರಮ : ಒಂದೆಡೆ ಬ್ರಹ್ಮಾಂಡವನ್ನೊಳಗೊಂಡ ಬಾಲಕೃಷ್ಣನ ಬಾಯಿಯಂಥಾ ಕಂಪ್ಯೂಟರ್, ಮತ್ತೊಂದೆಡೆ ಜಿಲ್ಲೆಯವರೇ ಆದ ಮುಖ್ಯಮಂತ್ರಿಗಳು- ಕೆಸ್ತೂರು ಶಾಲೆಯ ಮಕ್ಕಳಿಗೆ ಇಬ್ಬಗೆಯ ರೋಮಾಂಚನ. ಮಕ್ಕಳೊಂದಿಗೆ ಗ್ರಾಮದ ದೊಡ್ಡವರೂ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಊರಿಗೆ ಕಂಪ್ಯೂಟರ್ ಬಂದದ್ದು , ತಮ್ಮ ಮಕ್ಕಳೂ ಮೌಸ್ ಹಿಡಿದು ಕಂಪ್ಯೂಟರ್ ಚಲಾಯಿಸುತ್ತಾರೆಂಬ ಖುಷಿ ಪೋಷಕರದ್ದು .
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ ಇಬ್ಬರು ಸಚಿವರೂ ಭಾಗವಹಿಸಿದ್ದರು. ಇದರಿಂದಾಗಿ ಕಾರ್ಯಕ್ರಮಕ್ಕೆ ಸಹಜವಾಗಿಯೇ ಹೈಟೆಕ್ ಟಚ್ ಲಭ್ಯವಾಗಿತ್ತು .
ಗುಲ್ಬರ್ಗಾದಲ್ಲಿ ಕಂಪ್ಯೂಟರ್ ಕಲಿಕಾ ಕೇಂದ್ರ : ಗುಲ್ಬರ್ಗಾದ ಸರ್ಕಾರಿ ಬಾಲಕಿಯರ ಮಹಾ ವಿದ್ಯಾಲಯದಲ್ಲಿ ಮಾಹಿತಿ ಸಿಂಧು ಕಾರ್ಯಕ್ರಮದಡಿ ಕಂಪ್ಯೂಟರ್ ಕಲಿಕಾ ಕೇಂದ್ರವನ್ನು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಉದ್ಘಾಟಿಸಿದರು. ಸರ್ಕಾರ ಸ್ಥಾಪಿಸುತ್ತಿರುವ ಈ ಕಲಿಕಾ ಕೇಂದ್ರಗಳ ಪ್ರಯೋಜನವನ್ನು ಗ್ರಾಮೀಣರು ಉಪಯೋಗಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications