ಪತ್ರಕರ್ತ ವಿ.ಎನ್.ಸುಬ್ಬರಾವ್ಗೆ ಟಿಳಕ-ಮೊಹರೆ ಪ್ರಶಸ್ತಿ ಪ್ರದಾನ
ಹುಬ್ಬಳ್ಳಿ : ‘ಇಲೆಕ್ಟ್ರಾನಿಕ್ ಹಾಗೂ ಇಂಟರ್ನೆಟ್ ಮಾಧ್ಯಮಗಳ ಜತೆ ಪೈಪೋಟಿ ನಡೆಸಿರುವ ಮುದ್ರಣ ಮಾಧ್ಯಮಕ್ಕೆ ತನ್ನದೇ ಆದ ಛಾಪು ಇದ್ದು, ಅದು ಎಂದಿಗೂ ಸಾಯುವುದಿಲ್ಲ. ಈ ಬಗ್ಗೆ ಯಾವುದೇ ಆತಂಕ ಬೇಡ’- ಸಿನಿಮಾ ಪತ್ರಕರ್ತರಾಗಿ ಗುರ್ತಿಸಿಕೊಂಡು ರಾಜಕೀಯ ಬರಹಗಳ ಮೂಲಕವೂ ಹೆಸರು ಮಾಡಿದ ಹಿರಿಯ ಪತ್ರಕರ್ತ ವಿ.ಎನ್.ಸುಬ್ಬರಾವ್, ‘ಟಿಳಕ- ಮೊಹರೆ’ ಪ್ರಶಸ್ತಿ ಸ್ವೀಕರಿಸಿದ ನಂತರ ಭಾನುವಾರ ಆಡಿದ ಮಾತುಗಳಿವು.
ತಮ್ಮನ್ನು ರಾಜ್ಯದ ಜನತೆಗೆ ಪರಿಚಯಿಸಿದ ಸಂಯುಕ್ತ ಕರ್ನಾಟಕ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಕೆ.ಶಾಮರಾಯರು ಹಾಗೂ ಸಿನಿಮಾ ಪತ್ರಕರ್ತನೆಂಬ ಹಣೆಪಟ್ಟಿಯ ನಡುವೆಯೂ ರಾಜಕೀಯ ಬರಹಗಳನ್ನು ಬರೆಯಲು ಪ್ರೇರೇಪಿಸಿದ ಟಿ.ಎಸ್.ರಾಮಚಂದ್ರರಾಯರನ್ನು ಸುಬ್ಬರಾವ್ ಸ್ಮರಿಸಿಕೊಂಡರು. ಅವರು ಪಡೆದ ಈ ಪ್ರಶಸ್ತಿಗೆ ಕಾರಣವಾಗಿರುವ ಇಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.
ಮುಖ್ಯ ಅತಿಥಿ ಭಾಷಣ ಮಾಡಿದ ಮಂಗಳೂರು ವಿವಿ ನಿವೃತ್ತ ಕುಲಪತಿ ಡಾ.ಎಂ.ಐ.ಸವದತ್ತಿ, ಸಮಾಜದಲ್ಲಿ ಒಳಿತನ್ನು ಹೆಕ್ಕುವ ಪ್ರಯತ್ನಗಳು ಕಡಿಮೆಯಾಗುತ್ತಿರುವ ಈವತ್ತಿನ ಸಂದರ್ಭದಲ್ಲೂ ಒಳ್ಳೆಯದನ್ನು ಗುರ್ತಿಸುವ ಕೆಲವರಾದರೂ ಇದ್ದಾರಲ್ಲ ಎಂಬುದೇ ಸಮಾಧಾನ. ಪತ್ರಕರ್ತರು ಹಾಗೂ ನ್ಯಾಯಾಂಗ ಜನತಂತ್ರದ ವ್ಯವಸ್ಥೆಯನ್ನು ಉಳಿಸಲು ಹೋರಾಡುತ್ತಿವೆ ಎಂದರು.
ನ್ಯಾಯಾಲಯ ಕೊಡುವ ತೀರ್ಪನ್ನು ವಿಮರ್ಶಿಸಿ, ಜನರಿಗೆ ತಲುಪಿಸುವ ಮತ್ತೊಬ್ಬ ನ್ಯಾಯಾಧೀಶನಾಗಿ ಪತ್ರಿಕೆ ಕಾರ್ಯ ನಿರ್ವಹಿಸುತ್ತಿದೆ. ಜನರ ಅಭಿಪ್ರಾಯಗಳಿಗೆ ಹಿಡಿದ ಕನ್ನಡಿ ಮಾಧ್ಯಮ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಕೆ.ಶ್ರೀಧರ್ ರಾವ್ ಹೇಳಿದರು.
ಡಾ.ಪಾಟೀಲ ಪುಟ್ಟಪ್ಪ, ಎಂ.ಎಚ್.ಕೌಜಲಗಿ, ಹಿರಿಯ ನ್ಯಾಯವಾದಿ ಜಿ.ಎಂ.ಪಾಟೀಲ ಮೊದಲಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications