ಬಳ್ಳಾರಿಯಲ್ಲಿ ಪರಭಾಷಾ ಚಿತ್ರಗಳ ವಿರುದ್ಧ ಡೊಳ್ಳು ತಮಟೆ
ಹೇಮಂತ ಕುಲಕರ್ಣಿ
ಕರ್ನಾಟಕ ರಾಜ್ಯದ ಸಿನಿಮಾ ಮಂದಿರಗಳಲ್ಲಿ ವರ್ಷದಲ್ಲಿ ಕನಿಷ್ಠ 3 ತಿಂಗಳಾದರೂ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಲೇ ಬೇಕು ಎಂದು ಕರ್ನಾಟಕ ಸರಕಾರ ಬಹು ಹಿಂದೆಯೇ ನಿಯಮವೊಂದನ್ನು ಮಾಡಿದೆ. ಆದರೆ, ಈ ನಿಯಮವನ್ನು ಗಾಳಿಗೆ ತೂರಿದವರು ಅದೆಷ್ಟೋ ಮಂದಿ.
ಈಗ ಬಳ್ಳಾರಿಯ ಕನ್ನಡ ಸಂಘಟನೆಗಳು ಬಳ್ಳಾರಿ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಚಿತ್ರ ಪ್ರದರ್ಶಿಸಲೇಬೇಕು ಎಂದು ಆಗ್ರಹಿಸಿ ಪರಭಾಷೆಯ ಚಿತ್ರ ಪ್ರದರ್ಶಿಸುವ ಚಿತ್ರಮಂದಿರಗಳ ಮುಂದೆ ಗಂಟೆಗಟ್ಟಲೆ ಡೊಳ್ಳು, ತಮಟೆ ಬಾರಿಸುವ ಮೂಲಕ ಪ್ರತಿಭಟಿಸಲಾಗುವುದು ಎಂಬ ಎಚ್ಚರಿಕೆ ನೀಡಿದ್ದಾರೆ.
ಚಿತ್ರಪ್ರದರ್ಶನದ ಸಮಯದಲ್ಲಿ ಬೆಳಗ್ಗೆ 11ರಿಂದ 11.45 ಹಾಗೂ ಮಧ್ಯಾಹ್ನ 2ರಿಂದ 2.45ರ ತನಕ ಡೊಳ್ಳು ಬಾರಿಸುವ ಕನ್ನಡ ಕಾರ್ಯಕರ್ತರು, ಕನ್ನಡೇತರ ಚಿತ್ರಗಳಿಗೆ ಹೋಗದಂತೆ ಪ್ರೇಕ್ಷಕರ ಮನವೊಲಿಸುವ ನಿರ್ಧಾರವನ್ನೂ ಮಾಡಿದ್ದಾರೆ.
ಸಾಮಾನ್ಯವಾಗಿ ನವೆಂಬರ್ ತಿಂಗಳಿನಲ್ಲಿ ಮಾತ್ರವೇ ಕನ್ನಡಾಭಿಮಾನ ಹೊರಹೊಮ್ಮುತ್ತದೆ. ಆದರೆ, ಬಳ್ಳಾರಿಯ ಕನ್ನಡಿಗರಲ್ಲಿ ವರ್ಷಾರಂಭದಲ್ಲೇ ಕನ್ನಡದ ಕಳಕಳಿ ಮೂಡಿದೆ. ಯಜಮಾನ, ಸ್ಪರ್ಶ ಮುಂತಾದ ಚಿತ್ರಗಳು ತುಂಬಿದ ಗೃಹಗಳಿಗೆ ಪ್ರದರ್ಶಿತವಾಗುತ್ತಿದ್ದರೂ, ಚಿತ್ರಮಂದಿರ ಮಾಲಿಕರು ತೆಲುಗು, ಹಿಂದಿ ಹಾಗೂ ಇಂಗ್ಲಿಷ್ ಚಿತ್ರ ಪ್ರದರ್ಶಿಸುತ್ತಿರುವುದು ಚಳವಳಿಗೆ ಪ್ರೇರೇಪಿಸಿದೆ.
ಕನ್ನಡ ಚಿತ್ರ ಪ್ರದರ್ಶಿಸಿದರೆ, ಲಾಸ್ ಆಗುತ್ತದೆ ಎಂಬ ಮಾಲಿಕರ ವಾದವನ್ನು ಕನ್ನಡ ಕ್ರಿಯಾ ಸಮಿತಿ ಪಲಾಯನ ವಾದ ಎಂದು ಬಣ್ಣಿಸಿದೆ. ಇದು ಕನ್ನಡ ದ್ರೋಹ ಎಂದೂ ಹೇಳಿದೆ. ಜಿಲ್ಲಾಧಿಕಾರಿಗಳು, ನಗರಸಭೆ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಚಿತ್ರಮಂದಿರ ಮಾಲಿಕರೊಂದಿಗೆ ಮಾತುಕತೆ ನಡೆಸಿ, ಕನ್ನಡ ಚಿತ್ರ ಪ್ರದರ್ಶಿಸುವಂತೆ ಅವರ ಮನವೊಲಿಸುವಂತೆಯೂ ಕ್ರಿಯಾ ಸಮಿತಿ ಆಗ್ರಹಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications