ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟಿ.ಜಾನ್‌ ಬಂಧನಕ್ಕೆ ಆಗ್ರಹಿಸಿ ಹೋರಾಟ : ಬಿ.ಜಿ.ಪಿ. ನಿರ್ಣಯ

By Staff
|
Google Oneindia Kannada News

ಬೆಂಗಳೂರು : ಭೂಕಂಪಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಜಾನ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಾಗಿದೆ. ಈ ವಿಷಯವನ್ನು ರಾಜಕೀಯಗೊಳಿಸಬೇಡಿ, ಇದು ಮುಗಿದ ಅಧ್ಯಾಯ ಎಂಬ ಮನವಿಗಳ ನಡುವೆಯೂ ಜಾನ್‌ ಬಂಧನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟ ನಡೆಸಲು ಬಿ.ಜೆ.ಪಿ. ನಿರ್ಣಯ ಕೈಗೊಂಡಿದೆ.

ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿ ಪದಾಧಿಕಾರಿಗಳ, ಶಾಸಕರ, ಸಂಸತ್‌ ಸದಸ್ಯರ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದೆ. ಈ ವಿಷಯವನ್ನು ರಾಜ್ಯ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಹಾಗೂ ಬಿ.ಜೆ.ಪಿ. ಮುಖಂಡ ಜಗದೀಶ್‌ ಶೆಟ್ಟರ್‌ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

ಜಾನ್‌ ರಾಜೀನಾಮೆ ನೀಡಿದ ಬಳಿಕ ಮುಖ್ಯಮಂತ್ರಿಗಳೇ ಸಚಿವರ ಮನೆಗೆ ತೆರಳಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂಬ ಆಶ್ವಾಸನೆ ನೀಡಿರುವುದು ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದಂತೆಯೇ ಆಗಿದೆ. ಜಾನ್‌ ಪ್ರಕರಣ ಮುಗಿದ ಅಧ್ಯಾಯ ಅಲ್ಲ. ನಾವು ಜಾನ್‌ ವಿರುದ್ಧ ನೀಡಿದ ದೂರು 13 ಗಂಟೆಗಳಾದರೂ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಾನ್‌ ಅವರನ್ನು ಬಂಧಿಸದಿದ್ದರೆ ಹೋರಾಟ ನಡೆಸೇ ತೀರುತ್ತೇವೆ ಎಂದು ಅವರು ಹೇಳಿದರು.

ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X