ಪ್ರೇಮಿಗಳ ದಿನಾಚರಣೆ ಕೈ ಬಿಡಿ, ಸಂತ್ರಸ್ತರಿಗೆ ದೇಣಿಗೆ ನೀಡಿ
ಮುಂಬಯಿ : ಗುಜರಾತ್ ಭೂಕಂಪ ದುರಂತದ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಸಹೃದಯರು ಪ್ರೇಮಿಗಳ ದಿನ (ಫೆ.14) ಆಚರಣೆಯನ್ನು ಕೈ ಬಿಟ್ಟು , ಆ ಹಣವನ್ನು ಸಂತ್ರಸ್ತರ ನಿಧಿಗೆ ದೇಣಿಗೆ ನೀಡುವಂತೆ ಭಾರತೀಯ ರೆಡ್ ಕ್ರೆಸೆಂಟ್ ಸೊಸೈಟಿ ಮನವಿ ಮಾಡಿದೆ.
ಮುಂಬಯಿಯಲ್ಲಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಈ ವಿಷಯವನ್ನು ತಿಳಿಸಿರುವ ಸೊಸೈಟಿ- ಭೂಕಂಪಕ್ಕೀಡಾದ ಕೆಲವು ಪ್ರದೇಶಗಳನ್ನು ದತ್ತು ಪಡೆಯುವುದಾಗಿ ಹಾಗೂ ಪುನನರ್ವಸತಿ ಕುರಿತಂತೆ ಸವಿವರವಾದ ಯೋಜನೆಯನ್ನು ತಯಾರಿಸಿ ದತ್ತು ಪಡೆದ ಪ್ರದೇಶಗಳಲ್ಲಿ ಜಾರಿಗೊಳಿಸುವುದಾಗಿ ತಿಳಿಸಿದೆ. ಇದಕ್ಕೆ ಮುನ್ನ ವಿವಿಧ ವೈದ್ಯಕೀಯ ವಿಭಾಗಗಳ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ತಜ್ಞರನ್ನೊಳಗೊಂಡ ಸೊಸೈಟಿಯ ಸಮಿತಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಕೊಡುವುದು.
ಗುಜರಾತ್ ಭೂಕಂಪದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಮುಂಬಯಿಯ ಬಾಂದ್ರಾ, ಬೊರಿವಲಿಗಳಲ್ಲಿ ವಿಶೇಷ ಕೇಂದ್ರಗಳನ್ನು ಸೊಸೈಟಿ ತೆರೆದಿದೆ. ಅಖಿಲ ಭಾರತ ಮಿಲ್ಲಿ ಕೌನ್ಸಿಲ್, ಮುಂಬಯಿ ಅಮಾನ್ ಕಮಿಟಿ, ನಾಗರಿಕ ಹಿತಾಸಕ್ತಿ ಸಮಿತಿ, ಹಿಂದೂ ಮುಸ್ಲಿಂ ಏಕತಾ ವೇದಿಕೆ, ಅಭ್ಯಾಸ ನಿರತ ಭಾರತೀಯ ವೈದ್ಯರ ಒಕ್ಕೂಟ, ಬಾಜ್ಮಿ - ಸಿದ್ಧಿಕ್, ಏಕತಾ ವೆಲ್ಫೇರ್ ಅಸೋಸಿಯೇಷನ್, ಇಸ್ಲಾಮಿಕ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ಮಹಾರಾಷ್ಟ್ರ ವೆಲ್ಫೇರ್ ಅಂಡ್ ಎಜುಕೇಷನ್ ಸೊಸೈಟಿಗಳು ಪರಿಹಾರ ಕಾರ್ಯದಲ್ಲಿ ರೆಡ್ ಕ್ರೆಸೆಂಟ್ ಸೊಸೈಟಿಯಾಂದಿಗೆ ಕೈ ಜೋಡಿಸಿವೆ.
ವಾಷಿಂಗ್ಟನ್ ವರದಿ : ಭೂಕಂಪ ಪೀಡಿತ ಗುಜರಾತ್ಗೆ ದೀರ್ಘಕಾಲದ ನೆರವನ್ನು ನೀಡುವಂತೆ ಅಮೆರಿಕದ ಅಧ್ಯಕ್ಷ ಜಾರ್ಜ್ ಡಬ್ಲ್ಯೂ. ಬುಷ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಜೆಸ್ಸಿ ಹೆಮ್ಸ್ ಸೇರಿದಂತೆ 12 ಯುಎಸ್ ಸೆನೆಟರ್ಗಳು ಒತ್ತಾಯಿಸಿದ್ದಾರೆ.
ಮಾನವೀಯತೆಯ ಆಧಾರದ ಮೇಲೆ ಗುಜರಾತ್ಗೆ ತಾಂತ್ರಿಕ ಬೆಂಬಲ ಹಾಗೂ ಹಣಕಾಸಿನ ದೀರ್ಘಕಾಲೀನ ನೆರವನ್ನು ಒದಗಿಸಬೇಕು. ಪುನರ್ವಸತಿ ಕಾರ್ಯಗಳಲ್ಲಿ ಅಮೆರಿಕ ಮುಖ್ಯಪಾತ್ರ ವಹಿಸಬೇಕು ಎಂದು ಸೆನೆಟರ್ಗಳ ಗುಂಪು ಹೇಳಿದೆ.
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications