ಸಕ್ಕರೆ ಕಾರ್ಖಾನೆಯ ಆಲ್ಕೋಹಾಲ್ ಇಂಧನವೂ ಆದೀತು !
ಬೆಳಗಾವಿ : ಸಕಲ ರೋಗಾನಿಕಿ ಸಾರಾಯಿ ಮದ್ದು ಎಂದು ಯಾರೋ ಎಲ್ಲೋ ಹೇಳಿದ ನೆನಪು. ಆಲ್ಕೋಹಾಲ್ ಮಹಿಮೆಯನ್ನು ಏನೆಂದು ವರ್ಣಿಸುವುದು. ಬಚ್ಚಿಟ್ಟ ಸತ್ಯವನ್ನು ಪಟ್ಟನೆ ಹೊರಹಾಕುವ ಸಾಮರ್ಥ್ಯ ಇರುವ ಆಲ್ಕೋಹಾಲ್ ಮತ್ತೇರಿಸುವ ಸಾಧನವಷ್ಟೇ ಅಲ್ಲ. ಇಂಧನವಾಗಿಯೂ ಬಳಕೆಯಾದೀತು.
ನಿಶೆಯಲ್ಲಿ ನಶೆ ಏರಿಸುವ ಆಲ್ಕೋಹಾಲನ್ನೇ ಪರ್ಯಾಯ ಇಂಧನವಾಗಿ ಬಳಸಿದರೆ, ಭಾರತ ಪ್ರತಿವರ್ಷ ಸುಮಾರು 500 ಕೋಟಿ ರುಪಾಯಿ ವಿದೇಶಿ ವಿನಿಮಯ ಉಳಿಸಲೂ ಸಾಧ್ಯ. ಸಕ್ಕರೆ ಕಾರ್ಖಾನೆಗಳಲ್ಲಿ ಉತ್ಪಾದಿಸುವ ಆಲ್ಕೋಹಾಲ್ ಅನ್ನು ಇಂಧನದ ರೂಪದಲ್ಲಿ ಬಳಸ ಬಹುದು ಎಂದು ಅಖಿಲ ಭಾರತ ಸಕ್ಕರೆ ಕಾರ್ಖಾನೆಗಳ ಮಹಾಮಂಡಳದ ಅಧ್ಯಕ್ಷ ಎಂ.ಆರ್. ದೇಸಾಯಿ ಹೇಳಿದ್ದಾರೆ.
ಬುಧವಾರ ಬೆಳಗಾವಿಯಲ್ಲಿ ನಡೆದ ಉತ್ತರ ಕರ್ನಾಟಕ ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳ ಚರ್ಚೆಗೆ ಕರೆಯಲಾಗಿದ್ದ ಸಭೆಯಲ್ಲಿ ಈ ವಿಷಯವನ್ನು ಅವರು ತಿಳಿಸಿದರು. ಇದೇನು ಹೊಸ ವಿಚಾರವಲ್ಲ. ಎರಡನೇ ಮಹಾಯುದ್ಧದ ಕಾಲದಲ್ಲೇ ಮಂಡ್ಯದ ಸಕ್ಕರೆ ಕಾರ್ಖಾನೆ ಇದನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿತ್ತು ಎಂಬುದನ್ನು ಅವರು ಸ್ಮರಿಸಿದರು.
ಬ್ರೆಜಿಲ್, ಆಸ್ಟ್ರೇಲಿಯಾ ದೇಶಗಳಲ್ಲಿ ಈಗಾಗಲೇ ಸಕ್ಕರೆ ಕಾರ್ಖಾನೆಯಲ್ಲಿ ಉತ್ಪಾದಿಸುವ ಆಲ್ಕೋಹಾಲ್ ಅನ್ನು ಇಂಧನವಾಗಿ ಬಳಸಲಾಗುತ್ತಿದೆ ಎಂದೂ ಅವರು ಹೇಳಿದರು. ಭಾರತದಲ್ಲಿ ಪ್ರತಿವರ್ಷ 1.8 ಮಿಲಿಯನ್ ಟನ್ ಆಲ್ಕೋಹಾಲ್ ಉತ್ಪಾದಿಸಲಾಗುತ್ತದೆ. ಅದರಲ್ಲಿ ಕೆಲ ಭಾಗವನ್ನು ಮಾತ್ರ ಮದ್ಯ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಉಳಿದ ಆಲ್ಕೋಹಾಲನ್ನು ಬದಲಿ ಇಂಧನ ಮೂಲವಾಗಿ ಪರಿವರ್ತಿಸಿದರೆ, ಇಂಧನ ಸಮಸ್ಯೆ ಬಗೆಹರಿಯುವುದೇ ಅಲ್ಲದೆ, ದೇಶ 500 ಕೋಟಿ ರುಪಾಯಿ ವಿದೇಶಿ ವಿನಿಮಯ ಉಳಿಸಲು ಸಾಧ್ಯ ಎಂದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications