ಕಾರವಾರದಲ್ಲಿ 25ರಂದು ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರದಾನ
ಕಾರವಾರ : ಕನ್ನಡ ಸಾಹಿತ್ಯ ಅಕಾಡಮಿಯ ಪ್ರಶಸ್ತಿ ಪ್ರದಾನ ಸಮಾರಂಭ ಫೆಬ್ರವರಿ 25ರಂದು ಕಾರವಾರದಲ್ಲಿ ಜರುಗಲಿದೆ. ಈ ವಿಷಯವನ್ನು ಅಕಾಡಮಿ ಅಧ್ಯಕ್ಷ ಗಿರೆಡ್ಡಿ ಗೋವಿಂದರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 1999ರ ಸಾಲಿನ ಕೃತಿಗಳಿಗೆ ಪ್ರಶಸ್ತಿ ಪಡೆದಿರುವ 20 ಲೇಖಕರಿಗೆ ಹಾಗೂ 2000ದ ಸಾಲಿನ ಗೌರವ ಆಯ್ಕೆಯಾಗಿರುವ ಐವರಿಗೆ 25ರಂದು ಇಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ಹೇಳಿದರು.
ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್, ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ಮೊದಲಾದವರು ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದ ಜತೆಗೆ ಕಾರವಾರದಲ್ಲಿ ಅಕಾಡಮಿಯ ಸರ್ವ ಸದಸ್ಯರ ಸಭೆಯೂ ನಡೆಯುತ್ತಿದೆ.
ಪ್ರಶಸ್ತಿ ಪುರಸ್ಕೃತರಿವರು : ಗೌರವ ಪ್ರಶಸ್ತಿ - ಬಿ.ಆರ್. ವಾಡಪ್ಪಿ, ಡಾ. ರಾಮೇಗೌಡ, ಡಾ.ಸಿ.ಎನ್. ರಾಮಚಂದ್ರನ್, ಕುಂ. ವೀರಭದ್ರಪ್ಪ, ಮಾಲತಿ ಪಟ್ಟಣಶೆಟ್ಟಿ.
ಪುಸ್ತಕ ಪ್ರಶಸ್ತಿ - ದೇಶ ಕುಲಕರ್ಣಿ, ಎಚ್. ನಾಗವೇಣಿ, ಬಾನು ಮುಷ್ತಾಕ್, ಎಲ್.ಎನ್. ಮುಕುಂದರಾಜ್, ಆರ್.ವಿ. ಕುಲಕರ್ಣಿ, ಎಂ. ರಾಜಗೋಪಾಲ್, ಬಿ.ಪಿ. ರಾಧಾಕೃಷ್ಣ, ಬಸವರಾಜ ಕಲ್ಗುಡಿ, ಶಿವಾನಂದ ಎಸ್. ವಿರಕ್ತಮಠ, ಪಳಕಳ ಸೀತಾರಾಮ ಭಟ್ಟ, ಕೆ. ಪುಟ್ಟಸ್ವಾಮಿ, ಕೃಪಾಕರ ಸೇನಾನಿ, ಶೈಲಜ ಹಿರೇಮಠ, ಎಚ್.ಎಸ್. ಶ್ರೀಮತಿ, ಕರೀಗೌಡ ಬೀಚನಹಳ್ಳಿ, ಎಲ್.ಜಿ. ಮೀರಾ, ಸಿದ್ಧಗಂಗಯ್ಯ ಕಂಬಾಳು, ಕಾರ್ಗಲ್ ಭೋಗರಾಜ್, ಓ.ಎಲ್ ನಾಗಭೂಷಣ ಸ್ವಾಮಿ, ಪ್ರಣವ ಮಂಜರಿ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications