ಗೋಕಾಕದಲ್ಲಿ ಅಶ್ವಾರೂಢ ಬಸವೇಶ್ವರರ ಪ್ರತಿಮೆ ಪ್ರತಿಷ್ಠಾಪನೆ
ಗೋಕಾಕ್ : ನಗರದ ಹೃದಯ ಭಾಗವಾದ ನ್ಯಾಯಾಲಯದ ಬಳಿಯ ಬಸವೇಶ್ವರ ವೃತ್ತದಲ್ಲಿ ಅಶ್ವಾರೂಢ ಬಸವೇಶ್ವರರ ಕಂಚಿನ ಪ್ರತಿಮೆಯ ಪ್ರತಿಷ್ಠಾಪನೆ ವೈಭವದಿಂದ ಜರುಗಿತು. ಇದಕ್ಕೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಹೂವಿನಿಂದ ಅಲಂಕರಿಸಲಾಗಿದ್ದ ಬಸವೇಶ್ವರರ ಮೂರ್ತಿಯ ಭವ್ಯ ಮೆರವಣಿಗೆಯೂ ನಡೆಯಿತು.
ಶ್ರೀ ಕೊಳವಿ ದೇವಾಲಯದಲ್ಲಿ ಪೂಜೆಯ ಬಳಿಕ ಸಕಲ ವಾದ್ಯ ಮೇಳದೊಂದಿಗೆ ಆರಂಭವಾದ ಬಸವೇಶ್ವರರ ಸಾಲಂಕೃತ ಪುತ್ಥಳಿಯ ಮೆರವಣಿಗೆ ನಗರದ ಭಾಪನಾ ಚೌಕ, ಬಣಗಾರರ ಗಲ್ಲಿ, ಬಸವನಗರದ ಮೂಲಕ ಬಸವೇಶ್ವರ ವೃತ್ತದತ್ತ ಸಾಗಿತು. ಅಲ್ಲಿ ವಿಧ್ಯುಕ್ತವಾಗಿ ಪ್ರತಿಮೆಯ ಪ್ರತಿಷ್ಠಾಪನೆ ನಡೆಯಿತು.
ಶ್ರೀ ಶೂನ್ಯ ಸಂಪಾದನೆ ಮಠದ ಮುರುಘೕಂದ್ರ ಮಹಾಸ್ವಾಮಿಗಳು, ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು, ಬಸವೇಶ್ವರ ಪುತ್ಥಳಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳೇ ಅಲ್ಲದೆ ಪೂರ್ಣ ಕುಂಭಗಳನ್ನು ಹೊತ್ತ ಹೆಂಗಸರು ಮತ್ತು ಶಾಲಾ ಮಕ್ಕಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಬಾಗಲಕೋಟೆ ವರದಿ : ಬಿಜಾಪುರ ಜಿಲ್ಲೆಯ ಯಲಗೂರು ಶ್ರೀ ಯಲಗೂರೇಶ್ವರ ಕಾರ್ತಿಕೋತ್ಸವ ಶನಿವಾರ ಹಾಗೂ ಭಾನುವಾರ ನಡೆಯಲಿದೆ. ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ ವಿಧಿಗಳು ಜರುಗಲಿವೆ.
ಶನಿವಾರ ಯಲಗೂರೇಶ್ವರ ಮಹಾಸ್ವಾಮಿಯವರಿಗೆ ಪಂಚಾಮೃತ ಅಭಿಷೇಕ, ಪವಮಾನ ಹೋಮ ನಡೆಯಲಿದ್ದು, ಭಾನುವಾರ ಪಲ್ಲಕ್ಕಿ ಸೇವೆ, ದಾಸೋಹ ಹಾಗೂ ರಥೋತ್ಸವವನ್ನು ಏರ್ಪಡಿಸಲಾಗಿದೆ ಎಂದು ಕಾರ್ತಿಕೋತ್ಸವ ಸಮಿತಿ ಪ್ರಕಟಣೆ ತಿಳಿಸಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications