23 ಪ್ರಶ್ನೆಗಳ ಸಹಸ್ರಮಾನದ ಮೊದಲ ಜನಗಣತಿ ಪ್ರಾರಂಭ
ಬೆಂಗಳೂರು : ಒಂದು ಲಕ್ಷ 16 ಸಾವಿರ ಸರ್ಕಾರಿ ನೌಕರರು ಹೊಸ ಸಹಸ್ರಮಾನದ ಮೊದಲ ಜನಗಣತಿ ಕಾರ್ಯಕ್ಕೆ ಶುಕ್ರವಾರ ರಸ್ತೆಗಿಳಿದರು. ಮುಖ್ಯಮಂತ್ರಿ ಎಸ್. ಎಂ.ಕೃಷ್ಣ ಹಾಗೂ ರಾಜ್ಯಪಾಲರಾದ ವಿ.ಎಸ್.ರಮಾದೇವಿ ಕುಟುಂಬ ವರ್ಗದವರಿಂದಲೂ ಮಾಹಿತಿ ಸಂಗ್ರಹಿಸಲಾಯಿತು.
ಶುಕ್ರವಾರ ಮುಂಜಾನೆ ಪ್ರಾರಂಭವಾಗಿರುವ ಜನಗಣತಿ ಕಾರ್ಯ ಯಾವುದೇ ಹಿಚಿಕಿಚಿಯಿಲ್ಲದೆ ಮುಂದುವರೆದಿದೆ. ನಗರಸಭಾ ಆಯುಕ್ತ ಶಂತನು ಕನ್ಸಲ್ ಹಾಗೂ ಜನಗಣತಿ ನಿರ್ದೇಶನಾಲಯ ನಿರ್ದೇಶಕ ಎಚ್.ಶಶಿಧರ್ ಮುಖ್ಯಮಂತ್ರಿ ಕೃಷ್ಣ ಅವರ ನಿವಾಸ ಅನುಗ್ರಹಕ್ಕೆ ಭೇಟಿ ನೀಡಿ, 23 ಪ್ರಶ್ನೆಗಳನ್ನು ಕುಟಿುಂಬದ ಎಲ್ಲಾ ಸದಸ್ಯರಿಗೆ ಕೇಳಿ ಮಾಹಿತಿ ದಾಖಲಿಸಿದರು. ನಂತರ ರಾಜ್ಯಪಾಲರ ಮನೆಗೆ ಭೇಟಿ ಕೊಟ್ಟು ಅವರ ಹಾಗೂ ಕುಟುಂಬ ವರ್ಗದ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ಎರಡನೇ ಹಂತದ ಈ ಜನಗಣತಿ ಪ್ರಕ್ರಿಯೆ ರಾಜ್ಯದಲ್ಲಿ ಫೆಬ್ರವರಿ 28ರವರೆಗೆ ನಡೆಯಲಿದೆ. ಅಂಗವಿಕಲರ ಬಗ್ಗೆ ಇದೇ ಪ್ರಥಮ ಬಾರಿಗೆ ಹೆಚ್ಚು ಮಾಹಿತಿಯನ್ನು ಕಲೆಹಾಕಲಾಗುತ್ತಿದೆ. ವೀರಶೈವ ಎಂಬ ಹೊಸ ಜಾತಿ ಕಾಲಂನ್ನು ಜನಗಣತಿ ಪಟ್ಟಿಯಲ್ಲಿ ಸೇರಿಸಬೇಕೆಂಬ ಕೆಲವರ ಒತ್ತಾಯಕ್ಕೆ ಸರ್ಕಾರ ಸೊಪ್ಪು ಹಾಕಲಿಲ್ಲ.
ಜನಗಣತಿ ಕಾರ್ಯದಲ್ಲಿ ತೊಡಗಿರುವವರ ಪೈಕಿ ಶೇ. 40ರಷ್ಟು ಮಹಿಳೆಯರಿದ್ದಾರೆ. ಆರ್ಥಿಕ, ಸಾಮಾಜಿಕ ಹಾಗೂ ಆರೋಗ್ಯದ ಒಟ್ಟಾರೆ ಚಿತ್ರಣವನ್ನು ಈ ಜನಗಣತಿ ನೀಡಲಿದೆ.
ಫೆಬ್ರವರಿ 9, ಜನಗಣತಿ ದಿನ : ಈ ಸಹಸ್ರಮಾನದ ಮೊದಲ ಜನಗಣತಿ ಪ್ರಾರಂಭವಾಗಿರುವ ಫೆಬ್ರವರಿ 9ನ್ನು ಜನಗಣತಿ ದಿನ ಎಂದು ಆಚರಿಸುವಂತೆ ಕೇಂದ್ರ ಸರ್ಕಾರ ಕರೆ ನೀಡಿದ್ದು, ಇದು ಶುಕ್ರವಾರದಿಂದಲೇ ಜಾರಿಗೆ ಬಂದಿದೆ ಎಂದು ಎಚ್.ಶಶಿಧರ್ ತಿಳಿಸಿದ್ದಾರೆ.
(ಯುಎನ್ಐ/ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications