ಚಿಕ್ಕಮಗಳೂರಲ್ಲಿ 3 ದಿನಗಳ ಬಸವ ತತ್ತ್ವ ಸಮಾವೇಶ ಪ್ರಾರಂಭ
ಚಿಕ್ಕಮಗಳೂರು : ಫೆಬ್ರವರಿ 10 ರಿಂದ 12ರವರೆಗೆ ಹತ್ತಿರದ ಶ್ರೀ ಚಂದ್ರಶೇಖರ ಸ್ವಾಮಿಗಳ ಜಯಂತಿ ಮಹೋತ್ಸವ ಹಾಗೂ ಶ್ರೀಗಳ ಗದ್ದುಗೆ, ಬಸವೇಶ್ವರಮೂರ್ತಿ ಅನಾವರಣ ಹಾಗೂ ಬಸವ ತತ್ತ್ವ ಸಮಾವೇಶ ನಡೆಯಲಿದೆ.
ಬಸವ ತತ್ತ್ವ ಪೀಠದ ಶ್ರೀ ಜಯ ಬಸವಾನಂದ ಸ್ವಾಮಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಲು ಸ್ವಾಗತ ಸಮಿತಿಯಾಂದನ್ನು ರಚಿಸಲಾಗಿದೆ ಎಂದರು.
ಕಾರ್ಯಕ್ರಮಗಳ ವಿವರ
- ಫೆಬ್ರವರಿ 10- ಬೆಳಗ್ಗೆ 6.30ಕ್ಕೆ ಸಾಮೂಹಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ. ಸಾನಿಧ್ಯ : ವಿರಕ್ತ ಮಠಾಧೀಶ ಶ್ರೀ ಚನ್ನಬಸವ ಶಿವಯೋಗಿ .
11 ಗಂಟೆಗೆ ಪ್ರೋ. ವಿ.ವಿ. ಸಂಗಮದ ಅವರಿಂದ ಶೂನ್ಯ ಸಂಪಾದನೆ ವಿಷಯದ ಬಗ್ಗೆ ಉಪನ್ಯಾಸ.
ಸಂಜೆ 6 ಗಂಟೆಯ ನಂತರ ಸಾಂಸ್ಕೃತಿಕ ಕಾರ್ಯಕ್ರಮ. - ಫೆಬ್ರವರಿ 11- ಬೆಳಗ್ಗೆ 10 ಗಂಟೆಗೆ ಬಸವ ತತ್ತ್ವ ಸಮಾವೇಶ ಮತ್ತು ಚಂದ್ರಶೇಖರ ಜಯಂತಿ ಮಹೋತ್ಸವ. ಸಾನಿಧ್ಯ : ಚಿತ್ರದುರ್ಗದ ಬೃಹನ್ಮಠದ ಶ್ರೀ ಶಿವಮೂರ್ತಿ ಮುರುಘ ರಾಜೇಂದ್ರ ಸ್ವಾಮಿ, ಅರಸೀಕೆರೆ ಯಳನಡು ಮಠದ ಶ್ರೀ ಜ್ಞಾನ ಪ್ರಭು ಸಿದ್ಧರಾಮ ದೇಶೀಕೇಂದ್ರ ಮಹಾಸ್ವಾಮಿ.
5 ಲಕ್ಷ ರುಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ದಾಸೋಹ ಮಹಾಮನೆಗೆ ಸಂಸದ ಡಿ.ಸಿ.ಶ್ರೀಕಂಠಪ್ಪನವರಿಂದ ಶಂಕು ಸ್ಥಾಪನೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ.ಚಂದ್ರೇಗೌಡ ಹಾಗೂ ಸಾರಿಗೆ ಸಚಿವ ಸಗೀರ್ ಅಹ್ಮದ್ ಕೂಡ ಭಾಗವಹಿಸುತ್ತಾರೆ.
ಸಂಜೆ 6 ಗಂಟೆಗೆ ಸರ್ವ ಧರ್ಮ ಚಿಂತನಗೋಷ್ಠಿ. - ಫೆಬ್ರವರಿ 12- ಬೆಳಗ್ಗೆ 10 ಗಂಟೆಗೆ ದಿ. ಅಂದ್ರಶೇಖರ ಮಹಾಸ್ವಾಮಿಗಳ ಬಯಲು ಸಮಾಧಿಯ ಐಕ್ಯಮಂಟಪದಲ್ಲಿ ಬಸವೇಶ್ವರ ಮೂರ್ತಿ ಅನಾವರಣ ಕಾರ್ಯಕ್ರಮ. ಅಧ್ಯಕ್ಷರು : ತುಮಕೂರು ಸಿದ್ಧಗಂಗಾ ಕ್ಷೇತ್ರದ ಶ್ರೀ ಶಿವಕುಮಾರ ಮಹಾಸ್ವಾಮಿ. ಇದೇ ಸಂದರ್ಭದಲ್ಲಿ ಶ್ರೀ ಜಯಚಂದ್ರಶೇಖರ ಸ್ವಾಮೀಜಿಗಳ ಬದುಕು ಮತ್ತು ಚಿಂತನೆ ಕುರಿತ ಗ್ರಂಥ ಹೊರತರಲಾಗುವುದು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications