ಏಪ್ರಿಲ್ ಒಂದರಿಂದ 715 ವಸ್ತುಗಳ ಮುಕ್ತ ಆಮದಿಗೆ ಅವಕಾಶ
ನುಂಗುನೇರಿ : ರಾಜ್ಯದ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ, ಕೇಂದ್ರದ ಆಮದು ನೀತಿ ಮತ್ತು ಡಬ್ಲ್ಯೂಟಿಒ ಒಪ್ಪಂದಗಳ ವಿರುದ್ಧ ಹೋರಾಡುತ್ತಿರುವಾಗಲೇ ಕೇಂದ್ರ ಸರಕಾರವು 715 ವಸ್ತುಗಳ ಆಮದಿನ ಮೇಲಿರುವ ನಿರ್ಬಂಧಗಳನ್ನು ಏಪ್ರಿಲ್ ಒಂದರ ವೇಳೆಗೆ ಸಂಪೂರ್ಣವಾಗಿ ತೆಗೆದು ಹಾಕಲು ನಿರ್ಧರಿಸಿದೆ.
ಈ ವಿಷಯವನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಮುರಸೋಳಿ ಮಾರನ್ ತಿಳಿಸಿದ್ದಾರೆ. ಅವರು ಭಾನುವಾರ ತಮಿಳುನಾಡಿನ ನುಂಗನೇರಿಯಲ್ಲಿ ಭಾರತದ ಪ್ರಥಮ ವಿಶೇಷ ಆರ್ಥಿಕ ವಲಯದ ಕಚೇರಿಗೆ ಶಂಕು ಸ್ಥಾಪನೆ ಮಾಡಿದ ನಂತರ ಸುದ್ದಿಗಾರರರೊಂದಿಗೆ ಮಾತನಾಡುತ್ತಿದ್ದರು.
ಕೇಂದ್ರ ಸರಕಾರವು ಹತ್ತು ಬಿಲಿಯನ್ ಡಾಲರ್ ವಿದೇಶೀ ನೇರ ಬಂಡವಾಳ ಆಕರ್ಷಿಸಲು ರಕ್ಷಣಾ ವಲಯವನ್ನು ಹೊರತು ಪಡಿಸಿ, ಇತರ ಬಂಡವಾಳ ಹೂಡಿಕೆ ಕ್ಷೇತ್ರಗಳ ಮೇಲೆ ಇರುವ ನಿರ್ಬಂಧವನ್ನೂ ತೆಗೆದು ಹಾಕಲಿದೆ ಎಂದು ಅವರು ಹೇಳಿದರು.
ಕುಸಿಯುತ್ತಿರುವ ರಫ್ತು ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಆರ್ಥಿಕ ವರ್ಷದಲ್ಲಿ ಶೇ 18ರ ಬೆಳವಣಿಗೆಯನ್ನು ನಿಗದಿಪಡಿಸಲಾಗುವುದು. ವಿಶೇಷ ಆರ್ಥಿಕ ವಲಯಗಳಿಗೆ ವಿಶೇಷ ಕಾರ್ಯನೀತಿ (ಪ್ಯಾಕೇಜ್) ಘೋಷಿಸಲಾಗುವುದು ಎಂದು ಸಚಿವರು ವಿವರಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications