ಬೆಂಗಳೂರಿನಲ್ಲಿ ಕಾರ್ಯಾರಂಭ ಮಾಡಿತು, ನಾಸ್ಡಾಕ್ ಕಚೇರಿ
ಬೆಂಗಳೂರು : ಅಮೆರಿಕಾ ಮೂಲದ ನಾಸ್ಡಾಕ್ನ ಭಾರತೀಯ ಕಚೇರಿ ಬೆಂಗಳೂರಿನ ಯು.ಎನ್.ಐ. ಸಮುಚ್ಚಯದ ಆವರಣದಲ್ಲಿ ಸೋಮವಾರ ಕಾರ್ಯಾರಂಭ ಮಾಡಿತು. ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ನಾಸ್ಡಾಕ್ನ ಉಪಾಧ್ಯಕ್ಷ ಆಲ್ಫ್ರೆಡ್ ಬರ್ಕ್ಲಿ ಅವರು ದೀಪ ಬೆಳಗಿಸುವ ಮೂಲಕ ಭಾರತೀಯ ಶಾಖೆಯನ್ನು ಉದ್ಘಾಟಿಸಿದರು.
ನಾಸ್ಡಾಕ್ನಲ್ಲಿ ತಮ್ಮ ವಹಿವಾಟು ದಾಖಲಿಸಲು ತುದಿಗಾಲಿನಲ್ಲಿ ನಿಂತಿರುವ ಹಲವು ಕಂಪನಿಗಳಿಗೆ ಹಾಗೂ ಹಾಲಿ ನಾಸ್ಡಾಕ್ ಪಟ್ಟಿಯಲ್ಲಿರುವ ಕಂಪನಿಗಳಿಗೆ ಬೆಂಗಳೂರಿನಲ್ಲಿ ಪ್ರಾರಂಭವಾಗಿರುವ ಕಚೇರಿ ಹೆಚ್ಚಿನ ಸೇವೆಯನ್ನು ಒದಗಿಸಲಿದೆ ಎಂದು ಬರ್ಕ್ಲಿ ತಿಳಿಸಿದರು.
ನಮ್ಮ ಆಗಮನದ ಬಗ್ಗೆ ಭಾರತೀಯರು ಮಹತ್ವದ ಆಶಯಗಳನ್ನು ಹೊಂದಿದ್ದಾರೆ, ಅವರ ಆಶಯಗಳಿಗೆ ತಕ್ಕಂತೆ ನಾವು ಕಾರ್ಯನಿರ್ವಹಿಸುತ್ತೇವೆ ಎಂದು ಬರ್ಕ್ಲಿ ತಿಳಿಸಿದರು. ಅಮೆರಿಕದಲ್ಲಿ ಹೆಸರುಗಳಿಸುವಲ್ಲಿ ಹೆಚ್ಚಿನ ಶ್ರಮ ವಹಿಸುವಂತೆ ಅವರು ಭಾರತೀಯ ಕಂಪನಿಗಳಿಗೆ ಈ ಸಂದರ್ಭದಲ್ಲಿ ಕರೆ ನೀಡಿದರು.
ಧನ್ಯವಾದ : ಬೆಂಗಳೂರಿನಲ್ಲಿ ಕಚೇರಿ ಆರಂಭಿಸಿದ ನಾಸ್ಡಾಕ್ ಸಂಸ್ಥೆಗೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಧನ್ಯವಾದ ಅರ್ಪಿಸಿದರು. ಕರ್ನಾಟಕ ವಿಶ್ವ ವ್ಯಾಪಾರಕ್ಕೆ ಮುಕ್ತ ಅವಕಾಶ ನೀಡಿದ್ದು, ಬಂಡವಾಳ ಮಾರುಕಟ್ಟೆಗೆ ಹೆಚ್ಚಿನ ಚಾಲನೆ ನೀಡುವುದಾಗಿ ಅವರು ತಿಳಿಸಿದರು.
ಬಯೋ ಟೆಕ್ನಾಲಜಿ ಇತ್ತೀಚಿನ ದಿನಗಳಲ್ಲಿ ಹೊಸ ಆಯಾಮ ಪಡೆದಿದ್ದು, ಸರಕಾರವು ತತ್ಸಂಬಂಧವಾಗಿ ಪರಿಶೀಲನಾ ಸಮಿತಿಗಳನ್ನು ರಚಿಸಿದೆ ಎಂದೂ ಹೇಳಿದರು. ನಾಸ್ಡಾಕ್ ವಿಶ್ವಾದ್ಯಂತ ಒಟ್ಟು 4700 ಕಂಪನಿಗಳ ಬೃಹತ್ ಪಟ್ಟಿಯನ್ನೇ ಹೊಂದಿದ್ದು, ದಿನವಹಿ ಎರಡು ಬಿಲಿಯನ್ ಷೇರು ವಹಿವಾಟು ನಡೆಸುವ ಏಕೈಕ ಸಂಸ್ಥೆಯಾಗಿದೆ. ಸಂಸ್ಥೆಯು ದಕ್ಷಿಣ ಏಷ್ಯಾ ಚಟುವಟಿಕೆಗಳನ್ನು ನಿರ್ವಹಿಸಲು ಘನಶ್ಯಾಮ್ ದಾಸ್ ಅವರನ್ನು ನಿರ್ದೇಶಕರನ್ನಾಗಿ ನೇಮಿಸಿದೆ.
(ಯು.ಎನ್.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications