ನೀರು ಬಿಡುವವರೆಗೆ ಅನ್ನ ಮುಟ್ಟೆವು- ಬಿಆರ್ಡಬ್ಲ್ಯೂಪಿಸಿ
ಬಿಜಾಪುರ : ನೀರು ಬಿಡುವವರೆಗೆ ಅನ್ನ ಮುಟ್ಟೆವು ಎಂದು ಕುಡಿಯುವ ನೀರಿಗಾಗಿ ಆಮರಣಾಂತ ನಿರಶನ ನಡೆಸುತ್ತಿರುವ ಭೀಮಾ ನದಿ ನೀರು ರಕ್ಷಣಾ ಸಮಿತಿಯ (ಬಿಆರ್ಡಬ್ಲ್ಯೂಪಿಸಿ) ಸದಸ್ಯರು, ನಿರಶನ ಕೈ ಬಿಡುವಂತೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಸಚಿವರು ಮಾಡಿರುವ ಮನವಿಯನ್ನು ತಿರಸ್ಕರಿಸಿದ್ದಾರೆ.
ಕರ್ನಾಟಕದ ಸಚಿವ ಎಸ್.ಆರ್. ಕಾಶಪ್ಪನವರ್ ಹಾಗೂ ಮಹಾರಾಷ್ಟ್ರ ಸರ್ಕಾರದ ಸಚಿವ ಆನಂದರಾವ್ ದೇವಕಾಟೆ, ಸೋಮವಾರ ತೆಕ್ಕಾಳಿಯಲ್ಲಿ ನಿರಶನ ನಿರತರನ್ನು ಭೇಟಿ ಮಾಡಿ ಅನ್ನ ಸತ್ಯಾಗ್ರಹ ಕೈ ಬಿಡುವಂತೆ ಮನವಿ ಮಾಡಿದ್ದರು. ಫೆಬ್ರವರಿ 9ರಂದೇ ಉಜನಿ ಅಣೆಕಟ್ಟೆಯಿಂದ 1.3 ಟಿಎಂಸಿ ನೀರನ್ನು ಹರಿಸಲಾಗಿದ್ದು, ಫೆಬ್ರವರಿ 15ರ ಹೊತ್ತಿಗೆ ರೈತರ ನೆಲವನ್ನು ನೀರು ನೆನೆಸಲಿದೆ ಎಂದರು.
ನಿರಶನ ನಿಲ್ಲಿಸೆವು : ಕುಡಿಯುವ ನೀರಿನ ಕೊರತೆಯನ್ನು 36 ಹಳ್ಳಿಗಳು ಎದುರಿಸುತ್ತಿವೆ. ಕೆಲವು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ ಎಂದು ತಿಳಿಸಿರುವ ಬಿಆರ್ಡಬ್ಲ್ಯೂಪಿಸಿ ಸಮನ್ವಯಕ ಪಂಚಪ್ಪ ಕಲಬುರ್ಗಿ, ಸಮಸ್ಯೆ ಬಗೆಹರಿವವರೆಗೆ ನಿರಶನ ನಿಲ್ಲಿಸಲು ಸಾಧ್ಯವೇ ಇಲ್ಲ ಎಂದು ಮಂತ್ರಿಗಳಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ ಭೀಮಾ ಬೆಲ್ಟ್ನಲ್ಲಿ ಬ್ಯಾರೇಜುಗಳನ್ನು ನಿರ್ಮಿಸದಿರುವುದೇ ಭೀಮ ಬತ್ತಲಿಕ್ಕೆ ಕಾರಣ ಎಂದು ಮಹಾರಾಷ್ಟ್ರ ಸಚಿವ ದೇವಕಾಟೆ ಹೇಳಿದ್ದಾರೆ. ಆದರೆ, ಮಾನವೀಯತೆಯ ದೃಷ್ಟಿಯಿಂದ ಮಹಾರಾಷ್ಟ್ರ ನೀರನ್ನು ಬಿಡುಗಡೆ ಮಾಡುವುದು ಎಂದು ಅವರು ಸ್ಪಷ್ಟಪಡಿಸಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications