ಭೂಕಂಪದಿಂದ ಅನಾಥರಾದ ಮಕ್ಕಳ ಸಲಹಲು ವಿಎಚ್ಪಿ ನಿರ್ಧಾರ
ಉಡುಪಿ : ಜನವರಿ 26ರಂದು ಸಂಭವಿಸಿದ ಭೀಕರ ಭೂಕಂಪದಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡು ಅನಾಥರಾದ ಸುಮಾರು 1500 ಮಕ್ಕಳಿಗೆ ಆಸರೆಯಾಗಿ ನಿಲ್ಲಲು ನಿರ್ಧರಿಸಿರುವ ವಿಶ್ವಹಿಂದು ಪರಿಷತ್ ವಾತ್ಸಲ್ಯ ಮಂದಿರಗಳನ್ನು ನಿರ್ಮಿಸಲು ಯೋಜಿಸಿದೆ.
ಈ ಅನಾಥ ಮಕ್ಕಳಿಗೆ ಸ್ಲೇಟು, ಬಳಪ, ಪುಸ್ತಕಗಳನ್ನು ನೀಡುವುದಲ್ಲದೆ , ಉಚಿತ ಶಿಕ್ಷಣ ಸೌಲಭ್ಯ ಕಲ್ಪಿಸಲೂ ಪರಿಷತ್ ತೀರ್ಮಾನಿಸಿದೆ. ಈ ವಿಷಯವನ್ನು ಮಂಗಳವಾರ ಸುದ್ದಿ ಗೋಷ್ಠಿಯಲ್ಲಿ ವಿಎಚ್ಪಿಯ ಕರ್ನಾಟಕ ಘಟಕದ ವಲಯ ಕಾರ್ಯದರ್ಶಿ ಬಿ.ಎನ್. ಮೂರ್ತಿ ತಿಳಿಸಿದರು.
ಗುಜರಾತ್ನಲ್ಲಿ ಬಲವಾದ ಸಂಘಟನೆಯನ್ನು ಹೊಂದಿರುವ ಪರಿಷತ್ ಭೂಕಂಪ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಿತು. ಸುಮಾರು 15 ಸಾವಿರ ವಿಎಚ್ಪಿ ಕಾರ್ಯಕರ್ತರು ಪರಿಹಾರ ಕಾಮಗಾರಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದೂ ಅವರು ಹೇಳಿದರು.
ಉದ್ದೇಶಿತ ವಾತ್ಸಲ್ಯ ಧಾಮದಡಿಯಲ್ಲಿ ಮನೆಗಳನ್ನು ನಿರ್ಮಿಸುವ ಯೋಜನೆಯೂ ಇದೆ ಎಂದು ಅವರು ತಿಳಿಸಿದರು. ಇದಲ್ಲದೆ ಭೂಕಂಪದಿಂದ ಸಂಪೂರ್ಣ ನಾಶವಾಗಿರುವ ಗುಜರಾತ್ನ ದೇವಾಲಯಗಳು, ಕೆಲವು ಹಳ್ಳಿಗಳು ಹಾಗೂ ಕುಟುಂಬಗಳನ್ನು ದತ್ತು ಪಡೆದು ಪುನರ್ವಸತಿ ಕಲ್ಪಿಸಲೂ ಚಿಂತಿಸಲಾಗುತ್ತಿದೆ ಎಂದರು.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ












Click it and Unblock the Notifications