ರಾಜ್ಯಾದ್ಯಂತ ಅನುದಾನಿತ ಪದವಿ ಕಾಲೇಜುಗಳ ಯಶಸ್ವಿ ಬಂದ್
ಬೆಂಗಳೂರು : ಅನುದಾನಿತ ಖಾಸಗಿ ಕಾಲೇಜುಗಳ ಅನುದಾನದಲ್ಲಿ ಶೇ. 15 ರಷ್ಟನ್ನು ಕಡಿತ ಮಾಡುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಹಾಗೂ ಕಾಲೇಜು ಅಧ್ಯಾಪಕರ ಸಂಘಗಳ ಒಕ್ಕೂಟ ನೀಡಿದ ಅನುದಾನಿತ ಪದವಿ ಕಾಲೇಜುಗಳ ಒಂದು ದಿನದ ಮುಷ್ಕರದ ಕರೆಗೆ ರಾಜ್ಯಾದ್ಯಂತ ಸಂಪೂರ್ಣ ಬೆಂಬಲ ವ್ಯಕ್ತವಾಯಿತು.
ರಾಜ್ಯಾದ್ಯಂತ ಇರುವ 292 ಅನುದಾನಿತ ಪದವಿ ಕಾಲೇಜುಗಳು ಗುರುವಾರ ಬಂದ್ನಲ್ಲಿ ಪಾಲ್ಗೊಂಡವು. ಕಾಲೇಜುಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಕಾಲೇಜುಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಸರ್ಕಾರಿ ಕಾಲೇಜು ಉಪನ್ಯಾಸಕರು ಬಂದ್ನಲ್ಲಿ ಭಾಗಿಯಾಗಲಿಲ್ಲ . ಆದರೆ, ಮುಷ್ಕರಕ್ಕೆ ಅವರು ತಮ್ಮ ನೈತಿಕ ಬೆಂಬಲ ವ್ಯಕ್ತ ಪಡಿಸಿದರು.
ಅನುದಾನ ಕಡಿತ ನಿರ್ಧಾರ ಕೈಬಿಡಿ : ನಗರದ ಶೇಷಾದ್ರಿಪುರಂ ಕಾಲೇಜು, ಎಂಇಎಸ್ ಕಾಲೇಜು, ವಿಜಯ ಕಾಲೇಜು, ಸೆಂಟ್ ಜೋಸೆಫ್ ಕಾಲೇಜು, ನಿಜಲಿಂಗಪ್ಪ ಕಾಲೇಜು ಸೇರಿದಂತೆ ಅನೇಕ ಅನುದಾನಿತ ಕಾಲೇಜುಗಳ ಸಿಬ್ಬಂದಿ ತರಗತಿಗಳನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದರು. ನಗರದ ಎಂಇಎಸ್ ಕಾಲೇಜು ಮುಂಭಾಗ ನಡೆದ ಪ್ರತಿಭಟನಾಕಾರರ ಸಭೆಯ ನೇತೃತ್ವವನ್ನು ಕಾಲೇಜು ಅಧ್ಯಾಪಕರುಗಳ ಸಂಘದ ಅಧ್ಯಕ್ಷ ರವೀಂದ್ರ ರೇಷ್ಮೆ ವಹಿಸಿದ್ದರು. ಖಾಸಗಿ ಕಾಲೇಜುಗಳ ಅನುದಾನದಲ್ಲಿ ಶೇ. 15 ರಷ್ಟನ್ನು ಕಡಿತಗೊಳಿಸುವ ನಿರ್ಧಾರವನ್ನು ಕೈ ಬಿಡಬೇಕೆಂದು ಸಭೆ ಸರ್ಕಾರವನ್ನು ಒತ್ತಾಯಿಸಿತು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರವೀಂದ್ರ ರೇಷ್ಮೆ, ರಾಜ್ಯಾದ್ಯಂತ ಮುಷ್ಕರಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಇನ್ನು 10 ದಿನಗಳೊಳಗಾಗಿ ಸರ್ಕಾರ ಎಚ್ಚತ್ತು ನಮ್ಮ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಫೆ. 26 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಹೇಳಿದರು.
ಮುಷ್ಕರ ಯಶಸ್ವಿ : ಖಾಸಗಿ ಕಾಲೇಜುಗಳ ಮುಷ್ಕರಕ್ಕೆ ರಾಜ್ಯದ ವಿವಿಧ ಸಂಘಟನೆಗಳು ತಮ್ಮ ಬೆಂಬಲ ವ್ಯಕ್ತಪಡಿಸಿದ್ದವು. ಮಂಗಳೂರಿನಲ್ಲಿಯೂ ಮುಷ್ಕರ ಸಂಪೂರ್ಣ ಯಶಸ್ವಿ ಎಂದು ನಮ್ಮ ಮಂಗಳೂರು ಬಾತ್ಮೀದಾರರು ನಡೆಸಿದ್ದಾರೆ. ಈ ನಡುವೆ, ಉಪನ್ಯಾಸಕರು ಮುಷ್ಕರ ನಿರತರಾದರೆ, ಪರೀಕ್ಷಾ ಕಾರ್ಯಗಳಿಗೆ ತೊಂದರೆಯಾಗುತ್ತದೆ ಎಂದು ಮಂಗಳೂರು ವಿವಿ ಮೂಲಗಳು ತಿಳಿಸಿವೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications