ಬೇಸಿಗೆ : ಹಳ್ಳಿಗಳಲ್ಲಿ ಲೋಡ್ಶೆಡ್ಡಿಂಗ್, ಬೆಂಗಳೂರಿಗೆ ವಿನಾಯಿತಿ
ಬೆಂಗಳೂರು : ಮುಂಬರುವ ಬೇಸಿಗೆಯಲ್ಲಿ ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಅನಿಯಮಿತ ಲೋಡ್ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ, ಬೆಂಗಳೂರೂ ಸೇರಿದಂತೆ ಇತರ ಪ್ರಮುಖ ಪಟ್ಟಣಗಳಿಗೆ ಜೂನ್ ತಿಂಗಳವರೆಗೆ ವಿದ್ಯುತ್ ಕಡಿತದಿಂದ ವಿನಾಯಿತಿ ನೀಡಲಾಗಿದೆ. ಈ ವಿಷಯವನ್ನು ಕೆಪಿಟಿಸಿಎಲ್ ಅಧ್ಯಕ್ಷ ವಿ.ಪಿ. ಬಾಳಿಗಾರ್ ತಿಳಿಸಿದ್ದಾರೆ.
ಅನಿವಾರ್ಯವಾದರೆ, ನಗರ ಪ್ರದೇಶಗಳಲ್ಲಿ ಕೂಡ ಜೂನ್ ನಂತರ ವಿದ್ಯುತ್ ಕಡಿತ ಜಾರಿಗೆ ತರುವ ಇಂಗಿತವನ್ನು ವ್ಯಕ್ತಪಡಿಸಿದ ಬಾಳಿಗಾರ್, ಗ್ರಾಮಾಂತರ ಪ್ರದೇಶಗಳಿಗೆ ಲೋಡ್ಶೆಡ್ಡಿಂಗ್ ಬಿಸಿ ತಟ್ಟೇ ತಟ್ಟಲಿದೆ ಎಂಬುದನ್ನು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಒಟ್ಟು 93 ದಶಲಕ್ಷ ಯುನಿಟ್ಗಳಷ್ಟು ವಿದ್ಯುತ್ ಬಳಕೆಯಾಗುತ್ತಿದೆ. ರಾಜ್ಯದ ಬೇಡಿಕೆ ಇನ್ನೂ ಅಧಿಕವಾಗಿದೆ. ಕಳೆದ ವರ್ಷಕ್ಕಿಂತಲೂ ಈ ವರ್ಷದ ವಿದ್ಯುತ್ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಕಡಿತ ಅನಿವಾರ್ಯ ಎಂದು ಸ್ಪಷ್ಟಪಡಿಸಿದರು.
ಆದರೆ ರೈತರಿಗೆ ತೊಂದರೆ ಆಗದಂತೆ ಪಂಪ್ಸೆಟ್ಗಳಿಗೆ ವಿದ್ಯುತ್ ಒದಗಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು. ಶರಾವತಿ ಟೇಲ್ರೇಸ್ ಯೋಜನೆ ಮೊದಲ ಘಟಕ ಸದ್ಯದಲ್ಲೇ 60 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಿದೆ. ಈ ಘಟಕದ ವಿದ್ಯುತ್ ಮಾರ್ಗ ನಿರ್ಮಾಣ ಕಾರ್ಯವೂ ಪೂರ್ಣಗೊಂಡಿದೆ. ರಾಷ್ಟ್ರೀಯ ವಿದ್ಯುತ್ ಜಾಲದಿಂದ 20 ದಶಲಕ್ಷ ಯೂನಿಟ್ ವಿದ್ಯುತ್ ಪಡೆಯಲಾಗುತ್ತಿದೆ ಎಂಬ ವಿವರಗಳನ್ನೂ ಅವರು ಸುದ್ದಿಗೋಷ್ಠಿಯಲ್ಲಿ ನೀಡಿದರು.
ಮಳೆಯ ವರ : ಕಳೆದ ವರ್ಷ ಸೂಕ್ತ ಸಮಯದಲ್ಲಿ ಸಾಕಷ್ಟು ಮಳೆ ಆದ ಹಿನ್ನೆಲೆಯಲ್ಲಿ ವಿದ್ಯುತ್ ಉತ್ಪಾದನೆ ಸಮರ್ಪಕವಾಗಿದೆ, ಹೀಗಾಗಿ ವಿದ್ಯುತ್ ಕೊರತೆಯ ತೀವ್ರತೆ ಕಡಿಮೆ ಆಗಿದೆ ಎಂದ ಅವರು, ಎಲ್ಲವೂ ಲೆಕ್ಕಾಚಾರದಂತೆ ನಡೆದರೆ, ಬರುವ ಜೂನ್ವರೆಗೆ ವಿದ್ಯುತ್ ಕೊರತೆ ಬಾರದಂತೆ ನಿಭಾಯಿಸಬಹುದು ಎಂದರು.
ತುರವನೂರು ವಿದ್ಯುತ್ ಕೇಂದ್ರ : ಚಿತ್ರದುರ್ಗ ಜಿಲ್ಲೆಯ ತುರುವನೂರಿನಲ್ಲಿ ಇನ್ನೊಂದು ಹೊಸ ವಿದ್ಯುತ್ ಕೇಂದ್ರ ಆರಂಭಿಸಲಾಗುವುದು. ಇದು ಮುಂದಿನ ವರ್ಷದೊಳಗೆ ಪ್ರಾರಂಭವಾಗಲಿದೆ ಎಂದೂ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಅವರು ಮಾರ್ಗ್ ಸಂಸ್ಥೆ ಬೆಂಗಳೂರು ನಗರದ ವಿದ್ಯುತ್ ಪರಿಸ್ಥಿತಿ ಬಗ್ಗೆ ನಡೆಸಿದ ಅಧ್ಯಯನ ವರದಿಯನ್ನೂ ಬಿಡುಗಡೆ ಮಾಡಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications