ರಾಜ್ಯದ ರೇಷ್ಮೆ ಯೋಜನೆಗೆ ಜಪಾನ್ನಿಂದ ಸಾವಿರ ಕೋಟಿ ನೆರವು
ಸಿಎನ್ನಾರ್ ವಿಜಯಕುಮಾರ್
ಬೆಂಗಳೂರು : ಮುಂದಿನ ಐದು ವರ್ಷಗಳಲ್ಲಿ ಅತ್ಯುಚ್ಛ ಗುಣಮಟ್ಟದ 15 ಸಾವಿರ ಟನ್ ಕಚ್ಚಾ ರೇಷ್ಮೆಯನ್ನು ಉತ್ಪಾದಿಸುವ ರಾಜ್ಯದ ಯೋಜನೆಗೆ ಒಂದು ಸಾವಿರ ಕೋಟಿ ರುಪಾಯಿಗಳನ್ನು ಒದಗಿಸಲು ಜಪಾನ್ ಮುಂದೆ ಬಂದಿದೆ.
ಜಪಾನಿನ ಅಂತರರಾಷ್ಟ್ರೀಯ ವಾಣಿಜ್ಯ ಬ್ಯಾಂಕ್, ರಾಜ್ಯದ ಈ ಯೋಜನೆಯಲ್ಲಿ ಭಾಗಿಯಾಗಲು ಆಸಕ್ತಿ ತೋರಿಸಿರುವುದಾಗಿ ಕೇಂದ್ರ ಜವಳಿ ಖಾತೆ ಸಚಿವಾಲಯ ರಾಜ್ಯಕ್ಕೆ ಪತ್ರ ಬರೆದಿದೆ ಎಂದು ಕರ್ನಾಟಕ ಸಿರಿಕಲ್ಚರ್ ಕಮೀಷನರ್ ವಿ. ಉಮೇಶ್ ಯುಎನ್ಐ ಪ್ರತಿನಿಧಿಗೆ ತಿಳಿಸಿದ್ದಾರೆ. ಮುಂದಿನ ಎರಡು ಮೂರು ತಿಂಗಳಲ್ಲಿ 500 ಕೋಟಿ ರುಪಾಯಿಗಳು ಜಪಾನಿನಿಂದ ರಾಜ್ಯಕ್ಕೆ ಹರಿದುಬರಬಹುದೆಂದು ಅವರು ಹೇಳಿದ್ದಾರೆ.
ಕೇಂದ್ರ ಕೃಷಿ ಮಂಡಳಿಯಾಂದಿಗೆ ರಾಜ್ಯ ಸರ್ಕಾರ ಈಗಾಗಲೇ ಸಮಗ್ರ ರೇಷ್ಮೆ ಅಭಿವೃದ್ಧಿ ಯೋಜನೆಯಾಂದನ್ನು 500 ಕೋಟಿ ರು. ಅಂದಾಜಿನಲ್ಲಿ ರೂಪಿಸಿದ್ದು , ಈ ಯೋಜನೆಯನ್ನು ರೇಷ್ಮೆ ಸಂಪತ್ತು ಎಂದು ಹೆಸರಿಸಲಾಗಿದೆ. ದೇಶದ ಒಟ್ಟು ರೇಷ್ಮೆ ಉತ್ಪಾದನೆಯಲ್ಲಿ ಶೇ. 65 ರಷ್ಟು ಪಾಲನ್ನು ಹೊಂದಿರುವ ಕರ್ನಾಟಕ, ದೇಶದಲ್ಲಿ ರೇಷ್ಮೆ ಉತ್ಪಾದನೆಯ ದೊಡ್ಡಣ್ಣ ಎನಿಸಿದೆ. ಪ್ರಸ್ತುತ ದೇಶದಲ್ಲಿ 14, 018 ಟನ್ ರೇಷ್ಮೆ ಉತ್ಪಾದನೆಯಾಗುತ್ತಿದೆ.
ಜಪಾನಿ ನೆರವಿನ ಯೋಜನೆಯನ್ನು ಪ್ರಸಕ್ತ ವರ್ಷವೇ ಕೇಂದ್ರ ರೇಷ್ಮೆ ಮಂಡಳಿಯಾಂದಿಗೆ ಕೈಗೆತ್ತಿಕೊಂಡಿದ್ದು , ತುಂತುರು ನೀರಾವರಿ ಹಾಗೂ ರೇಷ್ಮೆ ಉತ್ಪಾದನೆ ಪರಿಸರವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ದೊಡ್ಡ ದೊಡ್ಡ ರೇಷ್ಮೆಗೂಡು ಮಾರುಕಟ್ಟೆಗಳ ನಿರ್ಮಾಣದಂಥದ ದೊಡ್ಡ ಕಾಮಗಾರಿಗಳನ್ನು ಮುಂದಿನ ವರ್ಷದಿಂದ ಕೈಗೊಳ್ಳಲಾಗುವುದು. ಅದೇರೀತಿ ಸಿಲ್ಕ್ ಫಿಲೇಚರ್ ಹಾಗೂ ರೇಷ್ಮೆ ತಳಿ ಕುರಿತ ಅಭಿವೃದ್ಧಿ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು.
ಪ್ರಸ್ತುತ 1 ಲಕ್ಷ 20 ಸಾವಿರ ಹೆಕ್ಟೇರ್ ಎಕರೆ ಪ್ರದೇಶದಲ್ಲಿ ರೇಷ್ಮೆ ಕೃಷಿ ಕೈಗೊಳ್ಳಲಾಗಿದ್ದು , ಈ ಚಟುವಟಿಕೆಯನ್ನು ಮತ್ತೂ 35 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ. ಪ್ರಸಕ್ತ ವರ್ಷ 250 ಟನ್ ಬೈವೋಲ್ಟಿನ್ ರೇಷ್ಮೆಯನ್ನು ರಾಜ್ಯದಲ್ಲಿ ಉತ್ಪಾದಿಸಲಾಗಿದ್ದು , ಈ ಪ್ರಮಾಣವನ್ನು ನಂತರದ ಸಾಲಿನಲ್ಲಿ ದ್ವಿಗುಣಗೊಳಿಸಲು ಉದ್ದೇಶಿಸಲಾಗಿದೆ. ಅಂತೆಯೇ ಅಂತರರಾಷ್ಟ್ರೀಯ ಗುಣಮಟ್ಟದ ರೇಷ್ಮೆಯನ್ನು ಉತ್ಪಾದಿಸಲು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಲೂ ಉದ್ದೇಶಿಸಲಾಗಿದೆ.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications