ಫೆ 25: ಮೊೖಲಿ ಅವರ ರಾಮಾಯಣ ಮಹಾನ್ವೇಶಣಂ ಕೃತಿ ಬಿಡುಗಡೆ
ಬೆಂಗಳೂರು : ಸಾಹಿತಿಯೂ ಆಗಿರುವ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರ ಶ್ರೀ ರಾಮಾಯಣ ಮಹಾನ್ವೇಶಣಂ ಕೃತಿಯ ಮೊದಲ ಸಂಪುಟ ಫೆಬ್ರವರಿ 25ರಂದು ಬಿಡುಗಡೆಯಾಗಲಿದೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮೊಯಿಲಿ ಅವರು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಪುಸ್ತಕವನ್ನು ಬಿಡುಗಡೆ ಮಾಡಲಿದ್ದು, ಸಮಾರಂಭವು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದೆ ಎಂದರು. ಶ್ರೀ ರಾಮಾಯಣ ಮಹಾನ್ವೇಶಣಂ ಕೃತಿಯ ಮೊದಲ ಸಂಪುಟ 500 ಪುಟಗಳನ್ನು ಹೊಂದಿದ್ದು, 45 ಅಧ್ಯಾಯಗಳಿವೆ. ಇನ್ನೂ ಐದು ಸಂಪುಟಗಳನ್ನು ಸದ್ಯದಲ್ಲಿಯೇ ಹೊರತರಲಾಗುವುದು. ಪ್ರಸ್ತುತ ಕೃತಿ ವಿವಿಧ ದೇಶಗಳ ಸುಮಾರು 160 ರಾಮಾಯಣಗಳನ್ನು ಅಧ್ಯಯನ ಮಾಡಿದ ನಂತರ ಬರೆದಿರುವಂತಹುದು ಎಂದು ಮೊಯಿಲಿ ಪುಸ್ತಕದ ಬಗ್ಗೆ ವಿವರಿಸಿದರು.
ಕೃತಿಯಲ್ಲಿ ಲಕ್ಷ್ಮಣ ನಾಯಕನಾಗಿರುತ್ತಾನೆ. ಸುಮೇಧ, ಕಾಳಿಕಾಚಾರ್ಯ, ವನಜ, ಮುಂತಾದ ಹೊಸ ಪಾತ್ರಗಳನ್ನು ಪರಿಚಯಿಸಲಾಗಿದೆ ಎಂದು ವೀರಪ್ಪ ಮೊಯಿಲಿ ಅವರು ತಮ್ಮ ಕೃತಿಯ ಬಗ್ಗೆ ವಿವರಿಸಿದರು. ಕೃತಿಯು ಮಹಾ ಛಂದಸ್ಸು ಮತ್ತು ಪುಷ್ಪ ರಗಳೆಯಲ್ಲಿದೆ. ಆದರೆ ಸರಳ ಕನ್ನಡದಲ್ಲಿ ಬರೆದಿರುವುದರಿಂದ ಓದುಗರಿಗೆ ತೊಂದರೆಯಾಗಲಾರದು ಎಂದು ಅವರು ಅಭಿಪ್ರಾಯ ಪಟ್ಟರು.
ಮೊಯಿಲಿ ಅವರ ಕೊಟ್ಟ ಕಾದಂಬರಿ ಎರಡನೇ ಮುದ್ರಣಕ್ಕೆ ಸಿದ್ಧವಾಗಿದೆ. ಶ್ರೀ ರಾಮಾಯಣ ಮಹಾನ್ವೇಶಣಂ ಕೃತಿಯನ್ನು ಸಂಸ್ಕೃತ ಮತ್ತು ಹಿಂದಿಗೆ ಅನುವಾದಿಸಿ ಪ್ರಕಟಿಸುವ ಯೋಜನೆಯೂ ಇದೆ ಎಂದು ಮೊಯಿಲಿ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications