ಜೋಶಿ ಬದಲು ಹಿರ್ವಾನಿಗೆ ಬುಲಾವು : ಮುಟ್ಠಾಳತನದ ನಿರ್ಧಾರ
ಬೆಂಗಳೂರು : ತರಬೇತುದಾರರಿಗೆ ತರಬೇತಿ ನೀಡುವ ವಿಚಾರ ಸಂಕಿರಣದಲ್ಲಿ ಮಂಗಳವಾರ ಚರ್ಚೆಯ ದಿಕ್ಕೇ ಬದಲಾಯಿತು. ಫೆಬ್ರವರಿ 27ರಿಂದ ಆಸ್ಟ್ರೇಲಿಯಾ ವಿರುದ್ಧ ಪ್ರಾರಂಭವಾಗಲಿರುವ ಮೊದಲ ಟೆಸ್ಟ್ಗೆ ಆರಿಸಿದ ತಂಡದ ಬಗೆಗೇ ಮಾತುಗಳು. ಭಾರತದ ಮಾಜಿ ಸ್ಪಿನ್ ದ್ವಯರಾದ ಬಿಷನ್ ಸಿಂಗ್ ಬೇಡಿ ಮತ್ತು ಇ.ಎ.ಎಸ್.ಪ್ರಸನ್ನ, ಆಯ್ಕೆದಾರರು ಜೋಶಿ ಕೈಬಿಟ್ಟಿರುವುದನ್ನು ತೀವ್ರವಾಗಿ ವಿರೋಧಿಸಿದ್ದಾರೆ.
ಪತ್ರಿಕೆಯಾಂದಕ್ಕೆ ಹೇಳಿಕೆಗಳನ್ನು ಕೊಟ್ಟಿರುವ ಈ ಮಾಜಿ ಸ್ಪಿನ್ದ್ವಯರು ಇದೊಂದು ಕ್ರಿಕೆಟ್ ಆಯ್ಕೆ ಮಂಡಳಿಯ ಮೂರ್ಖ ನಿರ್ಧಾರ ಎಂದಿದ್ದಾರೆ. ಆರು ವರ್ಷಗಳಿಂದ ಯಾವ ಟೆಸ್ಟ್ ಕ್ರಿಕೆಟ್ಟನ್ನೂ ಆಡದ ಹಿರ್ವಾನಿಗೆ ದಿಢೀರ್ ಬುಲಾವು ಕೊಟ್ಟು, ಫಾರ್ಮ್ನಲ್ಲಿರುವ ಜೋಶಿಗೆ ಕೊಕ್ ಕೊಟ್ಟಿರುವುದು ಆಶ್ಚರ್ಯ ಅಷ್ಟೇ ಅಲ್ಲ , ಮುಟ್ಠಾಳತನದ ನಿರ್ಧಾರ ಎಂಬುದು ಬೇಡಿ ಆರೋಪ.
ನಾನೇನಾದರೂ ಆಯ್ಕೆ ಸಮಿತಿಯಲ್ಲಿದ್ದಿದ್ದರೆ ಇಬ್ಬರು ಆಫ್ ಸ್ಪಿನ್ನರ್ಗಳನ್ನು ಆರಿಸುತ್ತಿದ್ದೆ. ಜಿಂಬಾಬ್ವೆ ಸರಣಿಯಲ್ಲಿ ಯಶಸ್ವಿಯಾದ ಆಫ್ ಸ್ಪಿನ್ನರ್ ಶರಣ್ ದೀಪ್ ಈಗೆಲ್ಲಿ ? 1996ರಲ್ಲಿ ದಕ್ಷಿಣ ಆಫ್ರಿಕ ವಿರುದ್ಧದ ಟೆಸ್ಟ್ ನಂತರ ಹಿರ್ವಾನಿ ಅಡ್ರಸ್ಗೇ ಇರಲಿಲ್ಲ. ಈಗ ದಿಢೀರ್ ಬುಲಾವು ಯಾಕೆ ? 1988-89ರಲ್ಲಿ ವಿಂಡೀಸ್ ವಿರುದ್ಧದ ಟೆಸ್ಟ್ನಲ್ಲಿ ಮಿಂಚಿದ್ದು ಬಿಟ್ಟರೆ ಹಿರ್ವಾನಿ ಆಡಿದ್ದು ಅಷ್ಟಕ್ಕಷ್ಟೇ ಇದೆ. ಜೋಶಿಯಂಥ ಫಾರ್ಮ್ನಲ್ಲಿರುವ ಆಟಗಾರನನ್ನು ಕೈಬಿಟ್ಟಿರುವುದು ಶುದ್ಧ ಮೂರ್ಖತನ ಎಂದು ಇ.ಎ.ಎಸ್ ಪ್ರಸನ್ನ ಹೇಳುವಾಗ ಕೋಪ ಉಕ್ಕಿಬರುತ್ತಿತ್ತು.
ಇದಷ್ಟೇ ಅಲ್ಲ. ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಉತ್ತಮ ವಿಕೆಟ್ ಕೀಪಿಂಗ್ ಮಾಡಿದ್ದರ ಜೊತೆಗೆ ಬಾಲಂಗೋಚಿ ಬ್ಯಾಟಿಂಗ್ ಸಾಮರ್ಥ್ಯ ಹೆಚ್ಚಿಸಿದ್ದ ವಿಜಯ್ ದಾಹಿಯಾ ಕೈಬಿಟ್ಟಿರುವ ಬಗೆಗೂ ಚಕಾರಗಳು ಕೇಳಿಬರುತ್ತಿವೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications