ಭೀಮೆಗೆ ಮತ್ತೆರಡು ಟಿ.ಎಂ.ಸಿ. ನೀರು ಬಿಡಲು ಕರ್ನಾಟಕ ಮನವಿ
ಗುಲ್ಬರ್ಗಾ : ಕುಡಿಯುವ ನೀರಿಗೂ ತೊಂದರೆ ಪಡುತ್ತಿದ್ದ ಬಿಜಾಪುರ ಹಾಗೂ ಸುತ್ತಮುತ್ತಲ ಪ್ರದೇಶಗಳ ಜನರ ಅನುಕೂಲಕ್ಕಾಗಿ ಭೀಮಾ ನದಿಗೆ ನೀರು ಬಿಟ್ಟ ಮಹಾರಾಷ್ಟ್ರ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿರುವ ರಾಜ್ಯದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು, ಬೇಸಿಗೆಯಲ್ಲಿ ನೀರಿನ ತೊಂದರೆ ಎದುರಿಸಲು ಮತ್ತೆರಡು ಟಿ.ಎಂ.ಸಿ. ನೀರು ಬಿಡುವಂತೆ ಕೋರಿದ್ದಾರೆ.
ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ನಾರಾಯಣ ಪುರ ಅಣೆಕಟ್ಟೆಯ ಮೂಲಕ ನೀರು ಈಗ ಹರಿದು ಬರುತ್ತಿದ್ದು, ಮಹಾರಾಷ್ಟ್ರದಿಂದ ಬಂದಿರುವ ನೀರನ್ನು ಸೂಕ್ತವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮತ್ತೆ ಬೇಸಿಗೆಯಲ್ಲಿ ಈ ಪ್ರದೇಶದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ತಲೆ ದೋರುವ ಕಾರಣ ಕನಿಷ್ಠ ಮತ್ತೆರಡು ಟಿ.ಎಂ.ಸಿ ನೀರನ್ನು ಉಜ್ಜಿನಿಯಿಂದ ಬಿಡುಗಡೆ ಮಾಡುವಂತೆ ಕೋರಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಮಹಾರಾಷ್ಟ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಬೇಸಿಗೆಯಲ್ಲಿ ತಲೆದೋರುವ ನೀರಿನ ಸಮಸ್ಯೆ ಎದುರಿಸಲು ಸರ್ಕಾರ ಸಜ್ಜಾಗುತ್ತಿದೆ ಎಂದು ಖರ್ಗೆ ಹೇಳಿದರು.
(ಗುಲ್ಬರ್ಗಾ ಪ್ರತಿನಿಧಿಯಿಂದ)