‘ಮುಖವಾಡಗಳಿಲ್ಲದ ಮನುಷ್ಯ ಸುಂಕದಕಟ್ಟೆ ನಿರಂಜನ ಸ್ವಾಮೀಜಿ’
ಮಂಗಳೂರು : ಮನುಷ್ಯ ತನ್ನ ವಿವಿಧ ಮುಖವಾಡಗಳನ್ನು ಕಳಚುತ್ತಾ ಹೋದಂತೆ ಸರಳ ವ್ಯಕ್ತಿತ್ವವನ್ನು ಪಡೆಯುತ್ತಾನೆ ಎಂಬುದಕ್ಕೆ ನಿರಂಜನ ಸ್ವಾಮಿಗಳು ಉತ್ತಮ ಉದಾಹರಣೆ ಎಂದು ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಅವರು ಮಂಗಳವಾರ ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿಯವರ ಸಪ್ತತಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಸ್ವಾಮೀಜಿಗಳನ್ನು ಸನ್ಮಾನಿಸಿ ಮಾತನಾಡುತ್ತಿದ್ದರು. ಸರಳ ವ್ಯಕ್ತಿಗೆ ಮಾತ್ರ ಧರ್ಮವನ್ನು ಪರಿಪಾಲಿಸುವುದು ಸಾಧ್ಯವಾಗುತ್ತದೆ ಎಂದು ಹೆಗ್ಗಡೆಯವರು ನಿರಂಜನ ಸ್ವಾಮಿಗಳ ಧಾರ್ಮಿಕತೆಯನ್ನು ಶ್ಲಾಘಿಸಿದರು.
ಸಪ್ತತಿ ಉತ್ಸವವನ್ನು ಎಪ್ಪತ್ತು ದಿನಗಳ ಕಾಲ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡದ ವಿವಿಧ ಪ್ರದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಮತ್ತು ಧಾರ್ಮಿಕ ಪ್ರವಚನಗಳನ್ನು ನಡೆಸಲಾಯಿತು. ಇದೇ ಸಂದರ್ಭದಲ್ಲಿ ನಿರಂಜನ ಸ್ವಾಮೀಜಿಯವರ ಕುರಿತು, ದೇಜಪ್ಪ ಅವರು ಬರೆದ ಕರ್ಮಯೋಗಿ ಪುಸ್ತಕವನ್ನು ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಹರಿಕೃಷ್ಣ ಪುನರೂರು ಬಿಡುಗಡೆ ಮಾಡಿದರು. ಸಪ್ತತಿ ಉತ್ಸವದ ಸ್ಮರಣ ಸಂಚಿಕೆಯನ್ನು ಆಳ್ವಾಸ್ ಎಜುಕೇಷನ್ ಫೌಂಡೇಷನ್ನ ಡಾ. ಮೋಹನ್ ಆಳ್ವ ಬಿಡುಗಡೆ ಮಾಡಿದರು. ದೇವಸ್ಥಾನದ ಆವರಣದಲ್ಲಿ ನಿರ್ಮಿಸಿರುವ ನೂತನ ಸಭಾಂಗಣವನ್ನು ಇದೇ ಸಂದರ್ಭದಲ್ಲಿ ಉದ್ಘಾಟಿಸಲಾಯಿತು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications