ಮಣಿಪುರದ ಪೊಲೀಸ್ ಮಹಾ ನಿರ್ದೇಶಕರಾಗಿ ಸಾಂಗ್ಲಿಯಾನ ?
ಬೆಂಗಳೂರು : ವೀರಪ್ಪನ್ ಶಿಕಾರಿಯಲ್ಲಿ ತೊಡಗಿರುವ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಎಚ್.ಟಿ. ಸಾಂಗ್ಲಿಯಾನ, ಮಣಿಪುರದ ಪೊಲೀಸ್ ಮಹಾನಿರ್ದೇಶಕರಾಗಿ ನಿಯೋಜನೆಗೊಳ್ಳುವ ಸಾಧ್ಯತೆಯಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಸಾಂಗ್ಲಿಯಾನ ಅವರು ತವರಿಗೆ ತೆರಳುವುದು ನಿಶ್ಚಯವಾದಲ್ಲಿ ಅವರ ವನವಾಸ ಕಾಲ ಸದ್ಯದಲ್ಲಿಯೇ ಕೊನೆಗೊಳ್ಳಲಿದೆ.
ಸಾಂಗ್ಲಿಯಾನ ಅವರ ಸೇವೆಯನ್ನು ತಮ್ಮ ರಾಜ್ಯಕ್ಕೆ ಒದಗಿಸವಂತೆ ಕೆಲವು ದಿನಗಳ ಹಿಂದೆ ಮಣಿಪುರ ಸರ್ಕಾರ ಕೇಂದ್ರದ ಮೂಲಕ ಕರ್ನಾಟಕಕ್ಕೆ ಮನವಿ ಸಲ್ಲಿಸಿತ್ತು . ಈ ಮನವಿಗೆ ರಾಜ್ಯ ಸರ್ಕಾರ ಕೂಡ ಧನಾತ್ಮಕವಾಗಿ ಸ್ಪಂದಿಸಿದೆ ಎಂದು ಮೂಲಗಳು ತಿಳಿಸಿವೆ.
ಸೇವಾವಧಿಗೆ ದಿನಕರ್ ಮನವಿ : ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸಾಂಗ್ಲಿಯಾನ ಅವರನ್ನು ತವರಿಗೆ ಕರೆಸಿಕೊಳ್ಳುತ್ತಿರುವ ಚಟುವಟಿಕೆಗಳು ನಡೆಯುತ್ತಿರುವ ಬೆನ್ನಿಗೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸಿ.ದಿನಕರ್ ಅವರ ನಿವೃತ್ತಿಯ ದಿನ (ಫೆ.28) ಹತ್ತಿರವಾಗುತ್ತಿದೆ. ಈ ನಡುವೆ ದಿನಕರ್ ಅವರು ತಮ್ಮ ಸೇವಾವಧಿಯನ್ನು ಇನ್ನೂ ನಾಲ್ಕು ತಿಂಗಳು ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೇವಾವಧಿಯನ್ನು ವಿಸ್ತರಿಸುವಂತೆ ಪತ್ರ ಬರೆದಿರುವ ದಿನಕರ್, ಯಾವುದೇ ಆಸೆ ಅಥವಾ ಅಗತ್ಯದಿಂದಾಗಿ ತಾವು ಸೇವಾ ವಿಸ್ತರಣೆ ಬಯಸುತ್ತಿಲ್ಲ . ವಿಶೇಷ ಸಂದರ್ಭಗಳಲ್ಲಿ ಸೇವಾ ವಿಸ್ತರಣೆಗೆ ರಾಜ್ಯ ಸರ್ಕಾರವನ್ನು ಕೋರಬಹುದೆಂದು ರಾಜ್ಯ ಸರ್ಕಾರ ಸೂಚಿಸಿರುವುದರಿಂದ ಮನವಿ ಸಲ್ಲಿಸಿರುವುದಾಗಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಸಿಬಿಐ ನಿರ್ದೇಶಕರ ನೇಮಕ ಪ್ರಕ್ರಿಯೆಗೆ ಸಂಬಂಧಿಸಿದ ವಿವಾದ ಪ್ರಸ್ತುತ ರಾಜ್ಯ ಹೈಕೋರ್ಟ್ನಲ್ಲಿದ್ದು , ಜೂನ್ ಅಂತ್ಯದ ವೇಳೆಗೆ ನ್ಯಾಯಾಲಯ ತೀರ್ಪು ನೀಡುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ದಿನಕರ್ ಪತ್ರ ಬರೆದಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications