ದೇವೇಗೌಡರ ಪತ್ನಿಯ ಮೇಲೆ ಆ್ಯಸಿಡ್ ದಾಳಿ : ತನಿಖೆಗೆ ಆದೇಶ
ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಹಾಗೂ ಸೊಸೆಯ ಮೇಲೆ ಆ್ಯಸಿಡ್ ದಾಳಿ ಮಾಡಿ ಕೊಲೆ ಯತ್ನ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆದೇಶಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಆದೇಶಿಸಿದ್ದಾರೆ.
ಶಿವರಾತ್ರಿಯ ಪೂಜೆಗೆಂದು ತವರೂರಿಗೆ ತೆರಳಿದ್ದ ದೇವೇಗೌಡರ ಪತ್ನಿ ಚೆನ್ನಮ್ಮ ಹಾಗೂ ಸೊಸೆ ಭವಾನಿ ಅವರ ಮೇಲೆ ಬುಧವಾರ ರಾತ್ರಿ ಹರದನಹಳ್ಳಿಯ ದೇವಾಲಯದಲ್ಲಿ ಆ್ಯಸಿಡ್ ದಾಳಿ ನಡೆದಿತ್ತು. ಈ ಸಂಬಂಧ ಸಮಗ್ರ ತನಿಖೆ ನಡೆಸುವಂತೆ ಮಾಜಿ ಪ್ರಧಾನಿ ದೇವೇಗೌಡರು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಗ್ರಹಿಸಿದ್ದರು.
ಪೂರ್ವ ಯೋಜಿತ ಸಂಚು : ಇದೊಂದು ಪೂರ್ವ ಯೋಜಿತ ಸಂಚು ಎಂದು ದೇವೇಗೌಡರ ಪುತ್ರ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ. ತಮ್ಮ ತಾಯಿ ಹಾಗೂ ಪತ್ನಿಯನ್ನು ಕೊಲ್ಲಲು, ಹಾಸನದ ಹಾಲು ಉತ್ಪಾದಕರ ಮಹಾ ಮಂಡಳಿಯ ಮಾಜಿ ಅಧ್ಯಕ್ಷ ಶ್ರೀನಿವಾಸ್ ನಡೆಸಿದ ಪೂರ್ವ ಯೋಜಿತ ಸಂಚಿದು ಎಂದಿರುವ ರೇವಣ್ಣ, ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಮೊದಲೇ ತಿಳಿಸಿದ್ದರೂ ಅವರು ಸೂಕ್ತ ರಕ್ಷಣೆ ನೀಡಲಿಲ್ಲ ಎಂದೂ ಆರೋಪಿಸಿದ್ದಾರೆ.
ನಾಲ್ವರ ಬಂಧನ : ದೇವೇಗೌಡರ ಪತ್ನಿ ಚೆನ್ನಮ್ಮ ಹಾಗೂ ರೇವಣ್ಣ ಅವರ ಪತ್ನಿ ಭವಾನಿ ಅವರ ಮೇಲೆ ಆ್ಯಸಿಡ್ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವೇಗೌಡರ ಸಹೋದರ ಬಸವೇಗೌಡರ ಪುತ್ರ ಲೋಕೇಶ್, ಆತನ ಬೆಂಬಲಿಗರಾದ ಶ್ರೀನಿವಾಸ್, ಜ್ಞಾನೇಶ್ ಹಾಗೂ ಮತ್ತೊಬ್ಬನನ್ನು ಬಂಧಿಸಲಾಗಿದೆ.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications