ಬಿಸಿಸಿಐ ಮಾಜಿ ಅಧ್ಯಕ್ಷ ಐ.ಎಸ್.ಬಿಂದ್ರಾ ಸೀಟಿಗೇ ಕುತ್ತು?
ಚೆನ್ನೈ: ಕಳೆದ ವಷ ರ್ ಮೇ ತಿಂಗಳಲ್ಲಿ ಕ್ರಿಕೆಟ್ ಮೋಸದಾಟದ ಬಗೆಗೆ 400 ಪುಟಗಳ ಇತಿ ವೃತ್ತಾಂತ ಬರೆದು, ಆಗಿನ ಐಸಿಸಿ ಅಧ್ಯಕ್ಷ ಜಗನ್ಮೋಹನ ದಾಲ್ಮಿಯಾ ಕೂಡ ಭ್ರಷ್ಟ ಎಂದು ಆರೋಪಿಸಿ, ಬೆದರಿಕೆ ಕರೆಗಳಿಗೂ ಗುರಿಯಾಗಿದ್ದ ಪಂಜಾಬ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಐ.ಎಸ್.ಬಿಂದ್ರಾ ಅವರ ಕುರ್ಚಿಗೇ ಈಗ ಕುತ್ತು ಬಂದಿದೆ.
ಶುಕ್ರವಾರ ನಗರದಲ್ಲಿ ಬಿಸಿಸಿಐ ಒಂದು ಸಭೆ ನಡೆಸಲಿದ್ದು, ಬಿಸಿಸಿಐನ ಮಾಜಿ ಅಧ್ಯಕ್ಷ ಬಿಂದ್ರಾ ಭವಿತವ್ಯ ನಿರ್ಧಾರವಾಗಲಿದೆ. ಕಳ್ಳಾಟ, ಕ್ರಿಕೆಟ್ಟಿನ ಜೊತೆಗೇ ಬೆಸೆದುಕೊಂಡು ಬಂದಿದೆ. ಆಟಗಾರರಷ್ಟೇ ಅಲ್ಲ, ಮಂಡಳಿಯ ಅನೇಕ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಬಿಸಿಸಿಐಗೆ ಸಲ್ಲಿಸಿದ್ದ ವರದಿಯಲ್ಲಿ ಬಿಂದ್ರಾ ಉಲ್ಲೇಖಿಸಿದ್ದರು. ಪಂಜಾಬ್ ಕ್ರಿಕೆಟ್ ಮಂಡಳಿಯಲ್ಲಿ ಸರ್ವಾಧಿಕಾರ ಮೆರೆಯುತ್ತಿದ್ದಾರೆಂಬ ಆರೋಪ ಹೊತ್ತಿರುವ ಬಿಂದ್ರಾ ಹಾಗೂ ಆತನ ಸಹ ಅಧಿಕಾರಿಯಾಬ್ಬರನ್ನು ಬಿಸಿಸಿಐ ಶಿಸ್ತು ಸಮಿತಿ ಇತ್ತೀಚೆಗೆ ವಿಚಾರಣೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಎ.ಸಿ.ಮುತ್ತಯ್ಯ ದೆಹಲಿಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ನಿರ್ಣಯಗಳನ್ನೂ ಸಭೆಯಲ್ಲಿ ಕೈಗೊಳ್ಳಲಾಗುವುದು. ತಮ್ಮ ಎನ್ಸಿಎಯ ಹುದ್ದೆಗೆ ಸುನಿಲ್ ಗವಾಸ್ಕರ್ ನೀಡಿರುವ ರಾಜೀನಾಮೆಯನ್ನು ಸ್ವೀಕರಿಸುವುದೋ, ಬೇಡವೋ ಎಂಬ ಮಹತ್ವವಾದ ತೀರ್ಮಾನವನ್ನೂ ಸಭೆಯಲ್ಲಿ ಕೈಗೊಳ್ಳಲಾಗುವುದು. ಸರಣಿ ವಿಚಾರ ಸಂಕಿರಣ ಹಾಗೂ ತರಪೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಕ್ಕಾಗಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ 1.74 ಕೋಟಿ ರುಪಾಯಿ ವೆಚ್ಚ ಮಾಡಲಾಗುತ್ತಿದೆ.
ಐಸಿಸಿಯ ಮಾಜಿ ಅಧ್ಯಕ್ಷ ಜಗನ್ಮೋಹನ್ ದಾಲ್ಮಿಯಾ ಹಾಗೂ ಬಿಸಿಸಿಐನ ಮಾಜಿ ಅಧ್ಯಕ್ಷರೊಬ್ಬರು ಈಗಾಗಲೇ ನಗರಕ್ಕೆ ಬಂದಿಳಿದಿದ್ದಾರೆ. ಬಿಂದ್ರಾ ವರದಿಯಲ್ಲಿನ ಆರೋಪಿಗಳ ಹೆಸರುಗಳ ಪೈಕಿ ದಾಲ್ಮಿಯಾ ಹೆಸರೂ ಇತ್ತು. ಆಗ ಇದಕ್ಕೆ ಕೆಂಡಾಮಂಡಲಾಗಿ ಪ್ರತಿಕ್ರಿಯಿಸಿದ್ದ ದಾಲ್ಮಿಯಾ, ಬಿಂದ್ರಾಗೆ ಹುಚ್ಚು ಹಿಡಿದಿದೆ. ಆಸ್ಪತ್ರೆಗೆ ಸೇರಿಸೋದು ಒಳಿತು ಎಂದು ಹೇಳಿದ್ದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications