ಧಾರವಾಡದಲ್ಲಿ ರಾಜ್ಯ ನೀರಾವರಿ ನಿಗಮ ಕೇಂದ್ರ ಕಚೇರಿ ಉದ್ಘಾಟನೆ
ಧಾರವಾಡ : ಕಳೆದ ಸಾಲಿನ ಮುಂಗಡ ಪತ್ರದಲ್ಲಿ ಸರಕಾರ ನೀಡಿದ್ದ ಆಶ್ವಾಸನೆಯಂತೆ ಹಲವು ನಿಗಮ, ಮಂಡಳಿಗಳ ಕೇಂದ್ರ ಕಚೇರಿಯನ್ನು ಸ್ಥಳಾಂತರಿಸುವ ಕಾರ್ಯವನ್ನು ಶೀಘ್ರವೇ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಗುರುವಾರ ಇಲ್ಲಿ ತಿಳಿಸಿದರು.
ಬೆಂಗಳೂರಿನಿಂದ ಧಾರವಾಡಕ್ಕೆ ಸ್ಥಳಾಂತರಗೊಂಡ ಕರ್ನಾಟಕ ರಾಜ್ಯ ನೀರಾವರಿ ನಿಗಮದ ಕೇಂದ್ರ ಕಚೇರಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಪ್ರಾದೇಶಿಕ ಅಸಮತೋಲನವನ್ನು ನಿವಾರಿಸಲು ರಾಜ್ಯ ಸರಕಾರ ನೇಮಿಸಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಡಿ.ಎಂ. ನಂಜುಂಡಪ್ಪ ಅವರ ಸಮಿತಿಯ ವರದಿಯನ್ನು ಜಾರಿ ಮಾಡಲು ಸರಕಾರ ಬದ್ಧವಾಗಿದೆ ಎಂದರು.
ರೈತರಿಗೆ ನೆರವಾಗಲು ಕೇಂದ್ರ ಸರಕಾರ ಬೆಂಬಲ ಬೆಲೆ ಖರೀದಿಯ ಕೊನೆಯ ದಿನಾಂಕವನ್ನು ಏರ್ಪಿಲ್ವರೆಗೆ ವಿಸ್ತರಿಸುವುದನ್ನು ಸ್ವಾಗತಿಸಿದರು. ನೀರಾವರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಗಂಭೀರವಾಗಿ ಚಿಂತಿಸಲಿದೆ ಎಂದೂ ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮಗದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯದ ನೀರಾವರಿ ಸಚಿವ ಎಚ್.ಕೆ. ಪಾಟೀಲ್ ಅವರು, ಧಾರವಾಡದಲ್ಲಿ ಇಂದು ವಿಧ್ಯುಕ್ತವಾಗಿ ಕಾರ್ಯಾರಂಭಿಸಿರುವ ಈ ನೀರಾವರಿ ಕೇಂದ್ರ ಕಚೇರಿಯ ವ್ಯಾಪ್ತಿಯಲ್ಲಿ ಘಟಪ್ರಭಾ, ಮಲಪ್ರಭಾ, ತುಂಗಾ ಮೇಲ್ದಂಡೆ, ಸಿಂಗಟಾಲೂರು ಏತ ನೀರಾವರಿ, ತುಂಗಾ ಏತ ನೀರಾವರಿ, ಮಾರ್ಕಂಡೇಯ, ಹರಿನಾಳ ಮತ್ತು ಕೃಷ್ಣ ಕಣಿವೆಯ ಯೋಜನೆಗಳು ಬರಲಿದ್ದು, ವಿಳಂಬವಾಗಿರುವ ನೀರಾವರಿ ಯೋಜನೆಗಳಿಗೆ ತೀವ್ರ ಚಾಲನೆ ದೊರಕಲಿದೆ ಎಂದರು.
ಧಾರವಾಡದ ವಾಲ್ಮೀಕಿ ಕಟ್ಟಡದಲ್ಲಿ ಕಾರ್ಯಾರಂಭ ಮಾಡಿದ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಲವು ಸಚಿವರು, ಶಾಸಕರು, ಸಂಸದರು, ಗಣ್ಯರು ಪಾಲ್ಗೊಂಡಿದ್ದರು.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications