ದೇವೇಗೌಡರ ಪತ್ನಿ, ಸೊಸೆ ಮೇಲೆ ಆ್ಯಸಿಡ್, ಆರೋಪಿ ಬಂಧನ
ಹಾಸನ : ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಪತ್ನಿ ಮತ್ತು ಅವರ ಸೊಸೆಯ ಮೇಲೆ ಆ್ಯಸಿಡ್ ಎರಚಿ ಕೊಲೆಗೆ ಪ್ರಯತ್ನಿಸಿದ ಘಟನೆ ಬುಧವಾರ ರಾತ್ರಿ ವರದಿಯಾಗಿದ್ದು ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಮತ್ತು ಮಗ ಎಚ್.ಡಿ. ರೇವಣ್ಣ ಅವರ ಪತ್ನಿ ಭವಾನಿ, ಪ್ರತಿ ವರ್ಷದಂತೆ ಶಿವರಾತ್ರಿ ಸಂದರ್ಭದಲ್ಲಿ ಪೂಜೆ ಸಲ್ಲಿಸಲು ಹುಟ್ಟೂರಾದ ಹೊಳೆ ನರಸೀಪುರ ತಾಲ್ಲೂಕಿನ ಹರದನ ಹಳ್ಳಿಯ ದೇವಸ್ಥಾನಕ್ಕೆ ಆಗಮಿಸಿದ್ದಾಗ ಈ ಘಟನೆ ನಡೆದಿದೆ. ಗಾಯಗೊಂಡಿರುವ ಚೆನ್ನ ಮ್ಮ ಮತ್ತು ಭವಾನಿ ಅವರಿಗೆ ಹಾಸನದ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಇಬ್ಬರನ್ನೂ ಅಂಬ್ಯುಲೆನ್ಸ್ನಲ್ಲಿ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ಸಾಗಿಸಲಾಯಿತು. ಚೆನ್ನಮ್ಮ ಅವರಿಗೆ ಶೇ 30ರಷ್ಟು ಮತ್ತು ಭವಾನಿಯವರಿಗೆ ಶೇ 25ರಷ್ಟು ಸುಟ್ಟ ಗಾಯಗಳಾಗಿವೆ.
ದೇವೇಗೌಡರ ಸೋದರ ಬಸವೇಗೌಡರ ಮಗ ಲೋಕೇಶ್ ಈ ಕೃತ್ಯವೆಸಗಿರುವುದಾಗಿ ಪೊಲೀಸರು ಹೇಳಿದ್ದಾರೆ. ಆ್ಯಸಿಡ್ ಎರಚುತ್ತಿರುವಾಗ ಆರೋಪಿ ಲೋಕೇಶ್ನ್ನು ಸ್ಥಳದಲ್ಲಿಯೇ ಪೊಲೀಸರು ಬಂಧಿಸಿದ್ದು, ಜ್ಞಾನೇಶ್ ಮತ್ತು ಶ್ರೀನಿವಾಸ್ ಎಂಬವರನ್ನೂ ಬಂಧಿಸಲಾಗಿದೆ. ಚೆನ್ನಮ್ಮ ಮತ್ತು ಭವಾನಿ ಅವರ ಜೊತೆಗಿದ್ದ ಎಸ್ಐ ಪಾಟೀಲ್ , ಒಬ್ಬ ಎಸ್.ಪಿ. ಜಿ. ಸಿಬ್ಬಂದಿ ಮತ್ತು ಇಬ್ಬರು ಪೇದೆಗಳಿಗೂ ಗಾಯಗಳಾಗಿವೆ.
ದೇವೇಗೌಡರ ಪ್ರತಿಕ್ರಿಯೆ : 35 ವರ್ಷಗಳ ತಮ್ಮ ರಾಜಕೀಯ ಅನುಭವದಲ್ಲಿ ಇಂತಹ ಘಟನೆ ನಡೆದಿಲ್ಲ. ರಾಜಕೀಯ ದ್ವೇಷ ಸಾಧಿಸಲು ಸಂಚು ನಡೆಸಿರುವ ವೈರಿಗಳು ಈ ಕುಕೃತ್ಯಕ್ಕೆ ನನ್ನ ತಮ್ಮನನ್ನು ಸಾಧನವಾಗಿ ಬಳಸಿಕೊಂಡಿದ್ದಾರೆ ಎಂದು ದೇವೇಗೌಡರು ಹೇಳಿದ್ದಾರೆ. ಈ ಕೊಲೆ ಯತ್ನದ ಹಿಂದಿರುವ ದುಷ್ಟ ಶಕ್ತಿಗಳ ಕೈವಾಡವನ್ನು ಬಯಲಿಗೆಳೆಯುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications