ದೇವೇಗೌಡರ ಪತ್ನಿ- ಸೊಸೆಗೆ ಆಸಿಡ್:ನ್ಯಾಯಾಂಗ ತನಿಖೆಗೆ ಆದೇಶ
ಬೆಂಗಳೂರು : ಮಾಜಿ ಪ್ರಧಾನಿ ದೇವಗೌಡರ ಪತ್ನಿ ಚೆನ್ನಮ್ಮ ಹಾಗೂ ಸೊಸೆ ಭವಾನಿ ಅವರ ಮೇಲೆ ಆಸಿಡ್ ಎರಚಿದ ಪ್ರಕರಣದ ನ್ಯಾಯಾಂಗ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರ ಗುರುವಾರ ಆದೇಶಿಸಿದೆ.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ, ಪ್ರಕರಣದ ಕೂಲಂಕಷ ತನಿಖೆ ನಡೆಸುವಂತೆ ಸಿಓಡಿಗೂ ತಿಳಿಸಲಾಗಿದೆ ಎಂದರು. ಹೈಕೋರ್ಟಿನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಬ್ಬರನ್ನು ತನಿಖೆಗೆ ನೇಮಿಸಲಾಗುವುದು. ಸರ್ಕಾರ ಈ ನೇಮಕಾತಿ ಕೋರಿ ಹೈಕೋರ್ಟಿಗೆ ಸದ್ಯದಲ್ಲೇ ಪತ್ರ ಬರೆಯಲಿದೆ ಎದು ಪ್ರಶ್ನೆಗಳಿಗೆ ಉತ್ತರಿಸುತ್ತಾ ಖರ್ಗೆ ಹೇಳಿದರು.
ಭದ್ರತೆಯಲ್ಲಿ ಏನಾದರೂ ಲೋಪವಾಗಿದೆಯೇ ಎಂಬುದರ ಬಗೆಗೆ ಸಚಿವ ಸಂಪುಟ ಅಂತಿಮ ನಿರ್ಧಾರ ಕೈಗೊಳ್ಳುವುದು. ಈ ಪ್ರಕರಣದ ಹಿಂದಿನ ಅಪರಾಧಿ ಪಿತೂರಿ ಸೇರಿದಂತೆ ಇತರೆ ಮಗ್ಗಲುಗಳನ್ನು ಪತ್ತೆ ಹಕ್ಷಿಚ್ಚುವ ಕೆಲಸವನ್ನು ತಕ್ಷಣವೇ ಸಿಓಡಿಗೆ ವಹಿಸಲು ಸರ್ಕಾರ ನಿರ್ಧರಿಸಿದೆ. ಸ್ಥಳೀಯ ಪೊಲೀಸರು ವಿವಿಧ ಒತ್ತಡಗಳನ್ನು ಎದುರಿಸಬೇಕಾದ ಸಂದರ್ಭ ಒದಗಿಬರುವ ಸಾಧ್ಯತೆಗಳಿರುವುದರಿಂದ ಈ ಜವಾಬ್ದಾರಿಯನ್ನು ಸಿಓಡಿಗೆ ವಹಿಸಿ, ಯಾವುದೇ ಕಿರಿಪಿರಿಗೆ ಅವಕಾಶ ನೀಡದಿರಲು ಸರ್ಕಾರ ತೀರ್ಮಾನಿಸಿದೆ ಎಂದು ಸಚಿವರು ತಿಳಿಸಿದರು.
ಚೆನ್ನಮ್ಮ ಅವರ ದೇಹಸ್ಥಿತಿಯ ಬಗೆಗೆ ಪ್ರಶ್ನಿಸಿದಾಗ, ಅವರು ನಗರದ ಖಾಸಗಿ ಆಸ್ಪತ್ರೆಯಾಂದರ ತೀವ್ರ ನಿಗಾ ಘಟಕದಲ್ಲಿದ್ದಾರೆ. ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆಕೆಯನ್ನು ಭೇಟಿ ಮಾಡಲು ಬಯಸಿದರು. ಆದರೆ ವೈದ್ಯರು ಸದ್ಯಕ್ಕೆ ಯಾರೂ ಆಕೆಯನ್ನು ಭೇಟಿಯಾಗಲು ಬಿಡುತ್ತಿಲ್ಲ ಎಂದು ಉತ್ತರಿಸಿದರು.
(ಯುಎನ್ಐ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications