ಅಡಿಕೆ ಬೆಲೆ ಏರಿಳಿತ : ಅಧ್ಯಯನಕ್ಕೆ ಮಂಡಳಿ ರಚನೆ - ಸಚಿವ
ಮಂಗಳೂರು : ರೈತರ ಅಡಮಾನ ಸಾಲವನ್ನು ದೀರ್ಘಾವಧಿ ಸಾಲವನ್ನಾಗಿ ಪರಿವರ್ತಿಸುವ ಅಧಿಕಾರ ಜಿಲ್ಲಾ ಸಹಕಾರಿ ಬ್ಯಾಂಕ್ಗಳಿಗೆ ಇಲ್ಲ. ಬಡ್ಡಿಯನ್ನು ಮನ್ನಾ ಮಾಡುವ ಅಧಿಕಾರವೂ ಇಲ್ಲ. ಆದರೆ, ಅದಕ್ಕೆ ಸಬ್ಸಿಡಿ ನೀಡುವ ಬಗ್ಗೆ ರಾಜ್ಯ ಸರಕಾರ ಯೋಚಿಸುವುದು ಎಂದು ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಆರ್.ಬಿ. ತಿಮ್ಮಾಪೂರ್ ಹೇಳಿದ್ದಾರೆ.
ಮಂಗಳೂರಿನ ನೂತನ ಎ.ಪಿ.ಎಂ.ಸಿ. ಯಾರ್ಡ್ನಲ್ಲಿ ಅಡಿಕೆ ಬೆಳೆಗಾರರು ಮತ್ತು ಬೆಳೆಗಾರರ ಸಂಘಟನೆಗಳ ಪ್ರತಿನಿಧಿಗಳ ಜತೆ ನಡೆದ ಸಮಾಲೋಚನಾ ಸಭೆಯಲ್ಲಿ ಈ ವಿಷಯ ತಿಳಿಸಿದರು. ಅಡಿಕೆ ಮಾರುಕಟ್ಟೆಯ ಏರಿಳಿತಕ್ಕೆ ಸಂಬಂಧಿಸಿದಂತೆ ಸಮಗ್ರ ಮಾರುಕಟ್ಟೆ ಅಧ್ಯಯನಕ್ಕೆ ಮಂಡಳಿಯನ್ನು ರಚಿಸಲಾಗುವುದು ಎಂಬ ಭರವಸೆಯನ್ನೂ ಅವರು ನೀಡಿದರು.
ಅಡಿಕೆ ಮೇಲೆ ವಿವಿಧ ಹಂತಗಳ ತೆರಿಗೆಯನ್ನು ಕೈಬಿಟ್ಟು, ಬೇರೆ ರೂಪದಲ್ಲಿ ತೆರಿಗೆ ಸಂಗ್ರಹಿಸುವ ಬಗ್ಗೆ ಚಿಂತಿಸಲಾಗುತ್ತಿದೆ. ಈ ಬಗ್ಗೆ ವಿಧಾನ ಮಂಡಳದ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದೂ ಸಚಿವರು ಹೇಳಿದರು. ಅಡಿಕೆ ಮೇಲಿನ ಮಾರುಕಟ್ಟೆ ತೆರಿಗೆಯೂ ಸೇರಿದಂತೆ ಒಟ್ಟು ಶೇಕಡಾ 6ರಷ್ಟು ತೆರಿಗೆಯನ್ನು ಕೈಬಿಡಬೇಕೆಂಬ ಅಡಿಕೆ ಬೆಳೆಗಾರರ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದರು.
ಪ್ರಸ್ತುತ ಮಂಗಳೂರು ಬಂದರು ಪ್ರದೇಶದಲ್ಲಿ ಕಾರ್ಯಾನಿರ್ವಹಿಸುತ್ತಿರುವ ಮಂಗಳೂರು ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಇನ್ನೊಂದು ತಿಂಗಳೊಳಗೆ ಬೈಕಂಪಾಡಿಯ ನೂತನ ಮಾರುಕಟ್ಟೆ ಯಾರ್ಡ್ಗೆ ಸ್ಥಳಾಂತರಿಸಲಾಗುವುದು ಎಂದೂ ಅವರು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ರಂಗಮೂರ್ತಿ, ಶಾಸಕರಾದ ಪ್ರಭಾಕರ ಬಂಗೇರ, ವಿಜಯಕುಮಾರ್ ಶೆಟ್ಟಿ, ಡಿ.ವಿ. ಸದಾನಂದಗೌಡ, ಯೋಗೀಶ್ ಭಟ್, ಜಿಲ್ಲಾ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಎಂ.ಬಿ. ಸದಾಶಿವ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
(ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications