ಅನುದಾನ: ಶಿಕ್ಷಕರ ಸಂಬಳಕ್ಕೆ ಅಡ್ಡಿ ಇಲ್ಲ, 3000 ಹುದ್ದೆಗಳು ರದ್ದು
ಬೆಂಗಳೂರು : ಖಾಸಗಿ ಕಾಲೇಜುಗಳ ಅನುದಾನದಲ್ಲಿ ಶೇ.15ರಷ್ಟು ಕಡಿತ ಮಾಡಿದ ನಿರ್ಧಾರ ಪ್ರತಿಭಟಿಸಿ ರಾಜ್ಯಾದ್ಯಂತ ಕಾಲೇಜು ಅಧ್ಯಾಪಕರು ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಅನುದಾನ ಕಡಿತ ತೀರ್ಮಾನವನ್ನು ಪರಿಷ್ಕರಿಸಿದೆ. ಅನುದಾನಕ್ಕೆ ಹಾಕಿದ್ದ ಕತ್ತರಿಯನ್ನು , ಈಗಾಗಲೇ ಮಂಜೂರಾಗಿದ್ದ ಖಾಲಿ ಹುದ್ದೆಗಳತ್ತ ಹರಿಸಿದೆ.
ಶುಕ್ರವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್ ಈ ವಿಷಯವನ್ನು ಪ್ರಕಟಿಸಿದರು. ಅನುದಾನ ನೀತಿ ಮಾರ್ಪಾಡು ಮಾಡಿರುವ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಖಾಲಿ ಇರುವ 3000ಕ್ಕೂ ಹೆಚ್ಚು ಭೋದಕ - ಭೋದಕೇತರ ಹುದ್ದೇಗಳ ನೇಮಕಾತಿಯನ್ನು ತಾತ್ಕಾಲಿಕವಾಗಿ ಕೈಬಿಟ್ಟಿರುವುದಾಗಿಯೂ ಹೇಳಿದ್ದಾರೆ.
ಖಾಲಿ ಹುದ್ದೆಗಳ ಭರ್ತಿ ಕಾರ್ಯ ಕೈಬಿಡುವ ಮೂಲಕ 30 ಕೋಟಿ ರುಪಾಯಿ ಉಳಿಸಲಾಗುತ್ತಿದೆ. ಇದರಿಂದ ಶಿಕ್ಷಕರಿಗೆ ಸರಿಯಾಗಿ ಸಂಬಳ ಹಾಗೂ ಭತ್ಯೆ ನೀಡಲು ಅನುವಾಗುತ್ತದೆ ಎಂದೂ ಅವರು ಹೇಳಿದರು. 162 ಸಂಯುಕ್ತ ಪದವಿಪೂರ್ವ ಕಾಲೇಜುಗಳನ್ನು ಪದವಿ ಕಾಲೇಜು ಮತ್ತು ಪದವಿ ಪೂರ್ವ ಕಾಲೇಜು ಎಂದು ವಿಭಜಿಸಲಾಗುವುದು. ಸುಮಾರು 1400 ಸಿಬ್ಬಂದಿ ಪದವಿಪೂರ್ವ ಕಾಲೇಜಿಗೆ ವರ್ಗಾವಣೆ ಹೊಂದುವರು ಎಂದೂ ಅವರು ವಿವರಿಸಿದರು.
ಮುಷ್ಕರ ಮುಂದುವರಿಕೆ : ಈ ಪರಿಷ್ಕರಣೆಯಿಂದ ಮತ್ತಷ್ಟು ಹೊಸ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ ಎಂದು ಕಾಲೇಜು ಅಧ್ಯಾಪಕರ ಸಂಘ ಪ್ರತಿಕ್ರಿಯೆ ನೀಡಿದೆ. ಏಕಪಕ್ಷೀಯವಾಗಿ ಕೈಗೊಂಡಿರುವ ಈ ನಿರ್ಧಾರದಿಂದ ಸರಕಾರ ಶಿಕ್ಷಕ ಸಮುದಾಯಕ್ಕೆ ಘೋರ ಅನ್ಯಾಯ ಎಸಗಿದೆ ಎಂದು ಸಂಘದ ಅಧ್ಯಕ್ಷ ರವೀಂದ್ರ ರೇಷ್ಮೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾವು ಮುಷ್ಕರ ಮುಂದುವರಿಸುವುದಾಗಿಯೂ ಹೇಳಿದ್ದಾರೆ.
ಅನುದಾನ ನೀತಿ ಪರೀಕ್ಷರಣೆಯಿಂದ ಪದವಿ ಪೂರ್ವ ಕಾಲೇಜುಗಳನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ವ್ಯಾಪ್ತಿಗೆ ತರಲಾಗಿದ್ದು, ಪದವಿಪೂರ್ವ ಕಾಲೇಜುಗಳ ಅಧ್ಯಾಪಕರು - ಉಪನ್ಯಾಸಕರ ಸ್ಥಾನಮಾನವನ್ನೇ ಕಳೆದುಕೊಳ್ಳುತ್ತಾರೆ ಎಂದೂ ಅವರು ಹೇಳಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications