ಹೊಸಗಾಳಿಯ ಸಹಸ್ರಮಾನದ ಜೈವಿಕ ತಂತ್ರಜ್ಞಾನ ನೀತಿ
ಬೆಂಗಳೂರು : ಸಹಸ್ರಮಾನದ ಜೈವಿಕ ತಂತ್ರಜ್ಞಾನ ನೀತಿಯನ್ನು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಘೋಷಿಸಿದ್ದಾರೆ.
ರಾಜ್ಯದ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಇರುವ ಅವಕಾಶಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಜೈವಿಕ ತಂತ್ರಜ್ಞಾನಕ್ಕೆ ಸಂಬಂಧಿಸಿದ ಇತರ ಕ್ಷೇತ್ರಗಳ ಕುರಿತ ಅಧ್ಯಯನಕ್ಕೆ ಮೂಲಭೂತ ಸೌಕರ್ಯಗಳನ್ನು ಮತ್ತು ಮಾನವ ಸಂಪನ್ಮೂಲಗಳನ್ನು ಕಲ್ಪಿಸಿ ಪ್ರೋತ್ಸಾಹಿಸುವುದು ಶನಿವಾರ ಕೃಷ್ಣ ಪ್ರಕಟಿಸಿರುವ ಜೈವಿಕ ತಂತ್ರಜ್ಞಾನ ನೀತಿಯಲ್ಲಿರುವ ಮುಖ್ಯ ಅಂಶಗಳು.
ರಾಜ್ಯದ ಮೊದಲ ಅಂತರ ರಾಷ್ಟ್ರೀಯ ಜೈವಿಕ ಪಾರ್ಕನ್ನು ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪಿಸಲಾಗುವುದು. ಕಾರವಾರದ ಮೀನುಗಾರಿಕಾ ಇಲಾಖೆ ಮತ್ತು ಧಾರವಾಡ ಕೃಷಿ ವಿವಿ ಸಹಯೋಗದಲ್ಲಿ ಕಾರವಾರದಲ್ಲಿ ಮತ್ತು ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದ ಸಹಯೋಗದಲ್ಲಿ ಇನ್ನೆರಡು ಜೈವಿಕ ಪಾರ್ಕ್ಗಳನ್ನು ಸ್ಥಾಪಿಸಲಾಗುವುದು ಎಂದು ಕೃಷ್ಣ ಹೇಳಿದ್ದಾರೆ. ಅಲ್ಲದೆ ಮಾಹಿತಿ ತಂತ್ರಜ್ಞಾನ ಕಾರಿಡಾರ್ ಮಾದರಿಯಲ್ಲಿಯೇ ನಗರದ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಹೆಬ್ಬಾಳದ ಕೃಷಿ ವಿವಿ ವರೆಗೆ ಜೈವಿಕ ತಂತ್ರಜ್ಞಾನ ಪಾರ್ಕ್ ಆರಂಭಿಸುವುದು ಕೂಡ ನೀತಿಯಲ್ಲಿ ಸೇರಿದೆ.
ನೀತಿಯಲ್ಲಿ ಉಲ್ಲೇಖಿಸಿರುವ ಇತರ ಮುಖ್ಯ ಅಂಶಗಳು :
- ರಾಜ್ಯದಲ್ಲಿ ಬಯೋ ಇನ್ಫೋರ್ಮಾಟಿಕ್ಸ್ನ ಅಭಿವೃದ್ಧಿ ಗೆ ಸಂಸ್ಥೆಯ ಚೌಕಟ್ಟು ನೀಡುವುದು.
- ಬಯೋ ಟೆಕ್ನಾಲಜಿ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಅನ್ವೇಷಣೆಗಳಿಗೆ ಆದ್ಯತೆ, ನಗರದಲ್ಲಿ ಜೀವಕೋಶಗಳ ಅಧ್ಯಯನ ಕೇಂದ್ರ ಸ್ಥಾಪನೆ
- ಇಂಧನ ಕ್ಷೇತ್ರಕ್ಕೆ ಬದಲಿ ವ್ಯವಸ್ಥೆ , ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳಲ್ಲಿ ಸಿಗುವ ಕಬ್ಬಿನ ಸಿಪ್ಪೆಯನ್ನು ಇಂಧನವನ್ನಾಗಿ ಬಳಸುವುದು.
- ಈ ಎಲ್ಲ ಬೆಳವಣಿಗೆಗಳಿಗೆ ಅನುಕೂಲವಾಗುವಂತೆ ಐಟಿ ಕ್ಷೇತ್ರದಲ್ಲಿ ನೀಡಿರುವ ರಿಯಾಯಿತಿಗಳನ್ನು ಜೈವಿಕ ತಂತ್ರಜ್ಞಾನ ಕ್ಷೇತ್ರಕ್ಕೂ ನೀಡುವುದು.
- ಕಡಿಮೆ ಭೂಮಿಯಲ್ಲಿ ಹೆಚ್ಚು ಕೃಷಿ ಬೆಳೆಯನ್ನು ಪಡೆಯುವ ಕುರಿತ ಅಧ್ಯಯನಕ್ಕೆ ಒತ್ತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications