Get Updates
Get notified of breaking news, exclusive insights, and must-see stories!

ಮೈಸೂರು ವಿವಿಯಲ್ಲಿ ಕೃಷ್ಣರಾಜ ಒಡೆಯರ್‌ ಪೀಠ ಸ್ಥಾಪನೆ : ಕೃಷ್ಣ

ಮೈಸೂರು : ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯದಲ್ಲಿ ಮೈಸೂರಿನ ಹೆಮ್ಮೆಯ ಅರಸು ಹಾಗೂ ಕವಿ ಸಾರ್ವಭೌಮ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಪ್ರಕಟಿಸಿದ್ದಾರೆ.

ಅರಮನೆಗಳ ನಗರಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಕೃಷ್ಣ, ನಾಲ್ವಡಿ ಕೃಷ್ಣರಾಜ ಒಡೆಯರ ವಿಚಾರಧಾರೆ - ಚಿಂತನೆ ದೇಶಕ್ಕೇ ಮಾದರಿಯಾಗಿದೆ. ಹಿಂದೆ ಬಹು ಹಿಂದೆಯೇ ಅವರು ಅಧಿಕಾರ ವಿಕೇಂದ್ರೀಕರಣಕ್ಕೆ ನಾಂದಿ ಹಾಡಿದ್ದರು. ಜನಪ್ರತಿನಿಧಿಗಳ ಸಭೆ ರಚಿಸಿ, ಜಿಲ್ಲಾಡಳಿತವನ್ನು ಸ್ವಯಂ ಸ್ಫೂರ್ತಿಯಿಂದ ಜನರಿಗೇ ವಹಿಸಿಕೊಟ್ಟಿದ್ದರು ಎಂದರು.

ಇಂತಹ ಮಹಾನ್‌ ಆಡಳಿತ ತಜ್ಞರ ಹೆಸರಿನಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪಿಸುತ್ತಿರುವುದು ಹೆಮ್ಮೆಯ ಸಂಗತಿ. ಈ ಕಾರ್ಯಕ್ಕೆ ರಾಜ್ಯ ಸರಕಾರ ತನ್ನ ಸಂಪೂರ್ಣ ಸಹಕಾರ ನೀಡುವುದು ಎಂದೂ ಅವರು ಪ್ರಕಟಿಸಿದರು.

ಅಧುನಿಕ ಬದುಕಿನ ಅಗತ್ಯಗಳನ್ನು ಅರಿತಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಕರ್ನಾಟಕದಲ್ಲಿ ಕೈಗಾರಿಕಾ ಕ್ರಾಂತಿಯನ್ನೇ ಮಾಡಿದರು. ಮೈಸೂರು ಅರಮನೆ, ಕೃಷ್ಣರಾಜ ಸಾಗರ ಜಲಾಶಯ (ಕೆ.ಆರ್‌.ಎಸ್‌), ಭದ್ರಾವತಿಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಮೈಸೂರು ಕಾಗದ ಕಾರ್ಖಾನೆ, ಮಂಡ್ಯದ ಸಕ್ಕರೆ ಕಾರ್ಖಾನೆ, ಆಕಾಶವಾಣಿ ಕೇಂದ್ರ, ಶಿಂಷಾ ಜಲವಿದ್ಯುತ್‌ ಉತ್ಪಾದನಾ ಕೇಂದ್ರಕ್ಕೆ ನೀಡಿದ ಚಾಲನೆ ಒಡೆಯರ ಸಾಧನೆಗಳಿಗೆ ಸಾಕ್ಷಿಯಾಗಿವೆ ಎಂದರು.

ಮೈಸೂರು ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನಗರಾಭಿವೃದ್ಧಿ ಕಚೇರಿ ಆವರಣದಲ್ಲಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಪುತ್ಥಳಿ ಹಾಗೂ ಗನ್‌ಹೌಸ್‌ ಎದುರು ಇರುವ ಉದ್ಯಾನವನದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಯ ಅನಾವರಣ ಮಾಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+