ಕೊರಳ ಕನ್ನಡವ ಕರುಳ ಕನ್ನಡವಾಗಿಸಲು ಬರಗೂರು ಕರೆ
ಬೆಂಗಳೂರು : ಕನ್ನಡಾಭಿಮಾನ ಮರುಳು ಘೋಷಣೆಗಳ ಕೊರಳಿನ ಕನ್ನಡವಾಗಬಾರದು. ಅದು ಕರುಳಿನ ಕನ್ನಡವಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಆಶಿಸಿದ್ದಾರೆ.
ಕನ್ನಡ ಒಂದು ಜಾತ್ಯತೀತ ಭಾಷೆ . ಯಾವ ಭಾಷೆಯೂ ಧರ್ಮ, ಜಾತಿಗಳ ಸಂಬಂಧವನ್ನು ಹೊಂದಿರುವುದಿಲ್ಲ . ಆದ್ದರಿಂದ ಕರ್ನಾಟಕದಲ್ಲಿ ವಾಸ ಮಾಡುವ ವಿವಿಧ ಧರ್ಮೀಯರು ಕನ್ನಡ ಕಲಿಯಬೇಕು. ಪ್ರಜಾಪ್ರಭುತ್ವದಲ್ಲಿ ಗೌರವ ಇರುವವರೆಲ್ಲ ಕನ್ನಡ ಹಾಗೂ ಕನ್ನಡ ಸಂಸ್ಕೃತಿಯನ್ನು ಗೌರವಿಸಬೇಕು. ಎಂದು ಬರಗೂರು ಅಭಿಪ್ರಾಯಪಟ್ಟರು. ಸಂತ ಜೋಸೆಫರ ಕಾಲೇಜಿನ ಕನ್ನಡ ಸಂಘದ ವಾರ್ಷಿಕೋತ್ಸವ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ನಮಗೆ ಆದರ್ಶ ಅಮೇರಿಕವಲ್ಲ , ಜಪಾನ್ : ನಾವಿಂದು ಕಾಣುತ್ತಿರುವುದು ಜಾಗತೀಕರಣವನ್ನಲ್ಲ , ಅಮೇರಿಕರಣವನ್ನು . ಜಾಗತೀಕರಣದ ಹೆಸರಿನಲ್ಲಿ ಮಾಹಿತಿ ತಂತ್ರಜ್ಞಾನದ ಭ್ರಮೆಯನ್ನು ಹುಟ್ಟಿಸಲಾಗುತ್ತಿದೆ. ವಿಷಾದದ ಸಂಗತಿಯೆಂದರೆ ಕಂಪ್ಯೂಟರೀಕರಣದಲ್ಲಿ ಇಂಗ್ಲೀಷಿಗೆ ಆದ್ಯತೆ ಕೊಟ್ಟಿದ್ದೇವೆ. ಅಲ್ಲೆಲ್ಲಾ ಕನ್ನಡಕ್ಕೆ ಅನ್ಯಾಯವಾಗಿದೆ ಎಂದು ಬರಗೂರು ವಿಷಾದಿಸಿದರು.
ಕಂಪ್ಯೂಟರ್ ಕ್ಷೇತ್ರದಲ್ಲಿ ಇಂಗ್ಲೀಷಿನ ಬದಲು ಜಪಾನಿ ಭಾಷೆಯನ್ನೆ ಬಳಸುತ್ತಿರುವ ಜಪಾನ್ ಜಾಗತಿಕ ಕಂಪ್ಯೂಟರ್ ಕ್ಷೇತ್ರದಲ್ಲಿ ಮೊದಲ ಸ್ಥಾನದಲ್ಲಿದೆ. ಆದರೆ, ನಾವು ಅನುಸರಿಸ ಹೊರಟಿರುವ ಅಮೇರಿಕ 32 ನೇ ಸ್ಥಾನದಲ್ಲಿದೆ. ವಾಸ್ತವ ಹೀಗಿದ್ದರೂ ನಾವು ಅಮೇರಿಕವನ್ನೇ ಅನುಸರಿಸುತ್ತಿದ್ದೇವೆ. ಕನ್ನಡದಲ್ಲೂ ಕಂಪ್ಯೂಟರ್ ಕಲಿಕೆ ಅಸಾಧ್ಯವೇನಲ್ಲ ಎಂದರು.
ಕನ್ನಡ ಕಲಿಸುವುದೆಂದರೆ ತಮಾಷೆಯಲ್ಲ , ಅದು ಸಮಾಜ ಸೇವೆ : ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬೆಂಗಳೂರು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಎಚ್. ವಿಜಯೇಂದ್ರ ಅವರು, ಕನ್ನಡ ಬಾರದವರಿಗೆ ಕನ್ನಡ ಕಲಿಸುವುದನ್ನು ಸಮಾಜಸೇವೆ ಎಂದು ನಮ್ಮ ವಿದ್ಯಾರ್ಥಿಗಳು ಪರಿಗಣಿಸಬೇಕು. ಇತ್ತೀಚೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯ ಬಗ್ಗೆ ವ್ಯಾಪಕ ಚರ್ಚೆಯಾಗಬೇಕು ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಸುಗಮ ಸಂಗೀತ ಗಾಯಕ ಸಿ. ಅಶ್ವಥ್ ಕನ್ನಡ ಗೀತೆಗಳನ್ನು ಹಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಯೂಜಿನ್ ಲೋಬೊ, ಪ್ರದೀಪ್ ಸಿಕ್ವೇರಾ, ಕನ್ನಡ ಸಂಘದ ಅಧ್ಯಕ್ಷ ಹಿ.ಮ. ಬಸವಯ್ಯ ಹಾಗೂ ಉಪನ್ಯಾಸಕರಾದ ಕೋ.ವೆಂ. ರಾಮಕೃಷ್ಣೇಗೌಡ, ಪ್ರೊ. ಕೆ. ನಾಗರಾಜನ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications