ಐಟಿಗೆ ಆದ್ಯತೆ ನಿಲುವು ಶಿಕ್ಷಣ ಕ್ಷೇತ್ರಕ್ಕೆ ಮರಣದಂಡನೆ - ಅನಂತಮೂರ್ತಿ
ಗುಲ್ಬರ್ಗಾ : ಇತರ ಸಾಮಾಜಿಕ ವಿಜ್ಞಾನಗಳನ್ನು ಕಡೆಗಣಿಸಿ ಮಾಹಿತಿ ಮತ್ತು ತಂತ್ರಜ್ಞಾನಕ್ಕೆ ಶಿಕ್ಷಣದಲ್ಲಿ ವಿಶೇಷ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರದ ನೀತಿಯನ್ನು ಪ್ರಸಿದ್ಧ ಕಥೆಗಾರ ಹಾಗೂ ಜ್ಞಾನಪೀಠ ಪ್ರಶಸ್ತಿ ವಿಜೇತ ಲೇಖಕ ಯು.ಆರ್. ಅನವಂತಮೂರ್ತಿ ಕಟುವಾಗಿ ಟೀಕಿಸಿದ್ದಾರೆ.
ಸರ್ಕಾರದ ಐಟಿ ಪರ ನಿಲುವು ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಮರಣದಂಡನೆಯಾಗಿ ಪರಿಣಮಿಸಿದೆ. ಶಿಕ್ಷಣದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನಕ್ಕೆ ಆದ್ಯತೆ ನೀಡುವ ಸರ್ಕಾರದ ನಿಲುವು ಸರಿಯಾದುದಲ್ಲ . ಇದರಿಂದಾಗಿ ಅತ್ಯುತ್ತಮವಾದ ಜ್ಞಾನವನ್ನು ಬೆನ್ನಟ್ಟಿ ಮಟ್ಟ ಹಾಕಿದಂತಾಗುತ್ತದೆ ಎಂದು ಪ್ರೊ.ಅನಂತಮೂರ್ತಿ ಬಣ್ಣಿಸಿದ್ದಾರೆ. ಅವರು ಗುಲ್ಬರ್ಗಾ ವಿವಿಯಲ್ಲಿ ಮಂಗಳವಾರ ನಡೆದ 'ಇಂಟಿಗ್ರೇಟೆಡ್ ಅಕಾಡೆಮಿಸ್’ ರಾಷ್ಟ್ರೀಯ ಕಮ್ಮಟದಲ್ಲಿ ಸಮಾರೋಪ ಭಾಷಣ ಮಾಡುತ್ತಿದ್ದರು.
ವಿವಿಧ ವಿಷಯಗಳಲ್ಲಿ , ವಿಶೇಷವಾಗಿ ಭೌತಶಾಸ್ತ್ರ , ವೈದ್ಯಕೀಯ ಹಾಗೂ ಐಟಿ ಕ್ಷೇತ್ರಗಳಲ್ಲಿ ವಿಪರೀತವಾದ ವಿಂಗಡಣೆಗಳು ಸಮಾಜಕ್ಕೆ ಒಳಿತಲ್ಲ . ಒಂದು ವಿಷಯದಲ್ಲಿ ಪರಿಣತಿಯನ್ನು ಪಡೆವ ವ್ಯಕ್ತಿ , ತನ್ನ ಪರಿಣತಿಯನ್ನು ವಿಭಿನ್ನ ವಿಷಯಗಳ ಹಿನ್ನೆಲೆಯಲ್ಲಿ ಉತ್ತಮಪಡಿಸಿಕೊಳ್ಳುತ್ತಾನೆ. ಅಂತಹ ವ್ಯಕ್ತಿ ಸಮಾಜಕ್ಕೆ ಉಪಯುಕ್ತ ಎಂದು ಅವರು ಹೇಳಿದರು.
ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿಷಯಗಳಿಗೆ ಪ್ರತ್ಯೇಕ ವಿಶ್ವ ವಿದ್ಯಾಲಯಗಳನ್ನು ಸ್ಥಾಪಿಸಬೇಕೆನ್ನುವ ಅಭಿಪ್ರಾಯದ ಬಗ್ಗೆ ಮಾತನಾಡಿದ ಅನಂತಮೂರ್ತಿ, ವಿಶ್ವ ವಿದ್ಯಾಲಯವೊಂದು ಏಕ ಛತ್ರಿಯಡಿ ವಿವಿಧ ವಿಷಯಗಳನ್ನು ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಿದೆ ಹಾಗೂ ವಿಭಿನ್ನ ವಿಷಯಗಳ ವಿಭಾಗಗಳ ನಡುವೆ ಅತ್ಯುತ್ತಮ ಸಂವಹನ ಸಾಧಿಸಲೂ ಸಾಧ್ಯವಿದೆ ಎಂದರು.
(ಯುಎನ್ಐ)
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications