ಎದೆ ಗಟ್ಟಿ ಮಾಡಿಕೊಳ್ಳಿ, ಇಂದು ಕೇಂದ್ರ ಬಜೆಟ್ 2001-2002
ನವದೆಹಲಿ : ಇಂದು ಬುಧವಾರ. ಫೆ. 28. ಕೇಂದ್ರ ಬಜೆಟ್ ಮಂಡನೆಯ ದಿನ. ಗುಜರಾತ್ ಭೂಕಂಪದಿಂದ ಉಂಟಾದ ಭಾರಿ ನಷ್ಟ ಸರಿತೂಗಿಸಲು ಕೇಂದ್ರ ಬಜೆಟ್ ಕಠಿಣವಾಗಿರುತ್ತದೆ ಎಂಬುದು ಎಲ್ಲರ ನಿರೀಕ್ಷೆ. ಡಬ್ಯುಟಿಓ ನೊಂದಿಗಿನ ಒಪ್ಪಂದವೂ ಇದಕ್ಕೆ ಪೂರಕವಾಗಿದ್ದು, ನಾಕರಿಕರ ಮೇಲೆ ಹೆಚ್ಚಿನ ಹೊರೆ ಬೀಳುವ ಸಾಧ್ಯತೆಯೇ ಹೆಚ್ಚು.
ಈಗಾಗಲೇ ಪ್ರಧಾನಿ ವಾಜಪೇಯಿ ಅವರು ಈ ಸಾಲಿನ ಬಜೆಟ್ ಕಠಿಣವಾಗಿರುತ್ತದೆ ಎಂಬ ಸುಳಿವು ನೀಡಿದ್ದಾರೆ. ರೈಲ್ವೆ ಬಜೆಟ್ನಲ್ಲಿ ಕೂಡ ಭಾರಿ ಏರಿಕೆ ನಿರೀಕ್ಷಿಸಲಾಗಿತ್ತು. ಆದರೆ, ಪಶ್ಚಿಮ ಬಂಗಾಳ ಹಾಗೂ ಇನ್ನಿತರ ರಾಜ್ಯಗಳ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡಿರುವ ಕೇಂದ್ರ ಸರಕಾರ ಅಂತಹ ಹೆಚ್ಚಿನ ಹೊರೆಯನ್ನೇನೂ ಜನರ ಮೇಲೆ ಹೊರಿಸಲಿಲ್ಲ.
ಆದರೆ, ಈ ಬಾರಿಯ ರೈಲ್ವೆ ಬಜೆಟ್ ಮಧ್ಯಂತರ ಬಜೆಟ್ನಂತಿದ್ದು, ಚುನಾವಣೆಗಳ ನಂತರ ದರ ಏರಿಸಿ ಹೊಸ ಬಜೆಟ್ ರೂಪುರೇಷೆ ನೀಡುವ ಸಾಧ್ಯತೆ ಹೆಚ್ಚಾಗಿದೆ. ಈ ಸೂಚನೆಯನ್ನು ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಪರೋಕ್ಷವಾಗಿ ಲೋಕಸಭೆಯಲ್ಲಿ ಕೊಟ್ಟಿದ್ದಾರೆ. ಈ ಮಧ್ಯೆ ಬುಧವಾರ ಸಂಸತ್ತಿನಲ್ಲಿ 2001-2002ರ ಸಾಲಿನ ಬಜೆಟ್ ಮಂಡಿಸಲು ವಿತ್ತ ಸಚಿವ ಯಶವಂತ ಸಿನ್ಹ ತೀವ್ರ ಕಸರತ್ತು ನಡೆಸಿದ್ದಾರೆ. ಕತ್ತಿಯ ಅಲುಗಿನ ಮೇಲೆ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ.
ಪ್ರಸ್ತುತ ಪ್ರಕೃತಿ ವಿಕೋಪ, ಕೃಷಿ ಹಾಗೂ ಸೇವಾ ವಲಯಗಳಲ್ಲಿನ ಕಳಪೆ ಸಾಧನೆಯಿಂದ ಉಂಟಾಗಿರುವ ಆರ್ಥಿಕ ಸಂಕಷ್ಟವನ್ನು ಸರಿಪಡಿಸಲು ಹಾಗೂ ಸಂಪನ್ಮೂಲ ಕ್ರೋಡೀಕರಣಕ್ಕೆ ಯಾವ ಯಾವ ಹೆಜ್ಜೆಗಳನ್ನು ಇಡಲಾಗಿದೆ ಎಂಬ ಪ್ರಶ್ನೆಗಳಿಗೆ ಉತ್ತರ ದೊರಕಲಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications