ದುರುಗಮ್ಮ ಜಾತ್ರೆಯಲ್ಲಿ ಉರುಳಿದ ಕೋಣ, ಕುರಿ, ಕೋಳಿಯ ತಲೆ
ಕೊಪ್ಪಳ : ಬಲಿ ಜಾತ್ರೆ ಎಂದು ಖ್ಯಾತವಾದ ಕುಷ್ಟಗಿಯ ದೊಣ್ಣೆಗುಡ್ಡದ ದುರ್ಗಮ್ಮನ ಜಾತ್ರೆಯಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಭಕ್ತಾದಿಗಳು ನೂರಾರು ಕೋಳಿ, ಕುರಿ ಹಾಗೂ ಹತ್ತಕ್ಕೂ ಹೆಚ್ಚು ಕೋಣಗಳನ್ನು ಬಲಿಕೊಟ್ಟ ವರದಿಗಳು ನಗರವನ್ನು ತಲುಪಿವೆ.
ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ದುರ್ಗಾದೇವಿಯ ಜಾತ್ರೆಯಲ್ಲಿ ಪ್ರಾಣಿಬಲಿ ವರ್ಷೇ ವರ್ಷೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಪ್ರಾಣಿಬಲಿ ನೀಡುವುದನ್ನು ಕಟ್ಟು ನಿಟ್ಟಾಗಿ ತಡೆಗಟ್ಟಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿತ್ತು. ಇದಕ್ಕಾಗಿಯೇ ನೂರಾರು ಪೊಲೀಸರನ್ನು ಈ ಗ್ರಾಮದಲ್ಲಿ ನಿಯೋಜಿಸಲಾಗಿತ್ತು.
ಫೆ.23ರಿಂದ 26ರವರೆಗೆ ದೊಣ್ಣೆಗುಡ್ಡದಲ್ಲಿ ನಡೆದ ಮೂರು ದಿನಗಳ ಜಾತ್ರೆ ಸಂದರ್ಭದಲ್ಲಿ ಪ್ರಾಣಿಗಳನ್ನು ದೇವರಿಗೆ ಬಲಿ ನೀಡದಂತೆ ಗ್ರಾಮಸ್ಥರ ಮನವೊಲಿಸಲು ಗ್ರಾಮಸಭೆಯನ್ನೂ ನಡೆಸಲಾಗಿತ್ತು. ಊರಿನ ತುಂಬೆಲ್ಲಾ ‘ದಯಯೇ ಧರ್ಮದ ಮೂಲವಯ್ಯ’ ಎಂಬ ಬ್ಯಾನರ್ಗಳನ್ನು ಕಟ್ಟಲಾಗಿತ್ತು. ಕರಪತ್ರ ಹಂಚಲಾಗಿತ್ತು. ಸರಕಾರದ ಆದೇಶ ಮೀರಿ ಪ್ರಾಣಿಬಲಿ ನೀಡಿದರೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಲಾಗಿತ್ತು.
ಈ ಎಲ್ಲದರ ನಡುವೆಯೂ ಭಕ್ತಾದಿಗಳು ಮೂರು ದಿನದ ಅವಧಿಯಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಹತ್ತು ಕೋಣ, ನೂರಾರು ಕೋಳಿ, ಕುರಿಗಳನ್ನು ಕಡಿದು ತಮ್ಮ ಹರಕೆ ತೀರಿಸಿದರು. ದೇವರಿಗೆ ಬಲಿ ನೀಡದಂತೆ ತಡೆದರೆ, ತಮಗೂ ಪಾಪ ಸುತ್ತಿಕೊಳ್ಳುತ್ತದೆ ಎಂದು ಕೆಲವರು ಪೊಲೀಸರು ಕಂಡೂ ಕಾಣದಂತೆ ಸುಮ್ಮನಿದ್ದರು ಎಂದೂ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಜಾತ್ರೆಯ ಹಿಂದಿನ ದಿನ ಅಮಾವಾಸ್ಯೆಯ ಕತ್ತಲಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಣಿಬಲಿ ನೀಡಿದರು. ಪ್ರಾಣಿದಯಾ ಸಂಘದ ಸದಸ್ಯರು ತಿಂಗಳುಗಳ ಹಿಂದೆಯೇ ಜಿಲ್ಲಾಧಿಕಾರಿಗಳಿಗೆ ಪ್ರಾಣಿಬಲಿ ತಡೆಯುವಂತೆ ಮನವಿ ಮಾಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಅಯಾಚಿತ್ ಅವರು ಗ್ರಾಮದ ಹಿರಿಯರೊಂದಿಗೆ ಸಮಾಲೋಚನೆ ನಡೆಸಿ, ಪೊಲೀಸ್ ತುಕಡಿಯನ್ನು ನಿಯೋಜಿಸಿದ್ದರು.
(ಕೊಪ್ಪಳ ಪ್ರತಿನಿಧಿಯಿಂದ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications