ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಯಚೂರಲ್ಲಿ ಗರಿಷ್ಠ, ಬೆಂಗಳೂರಲ್ಲಿ ಕನಿಷ್ಠ ಉಷ್ಣಾಂಶ

By Staff
|
Google Oneindia Kannada News

ಬೆಂಗಳೂರು : ಸಿಯಾಟಲ್‌ ಸುತ್ತಮುತ್ತ ಗುರುವಾರ ಬೆಳಗ್ಗೆ ಭೂಮಿ ನಡುಗಿದೆ. ಕೆಲವು ಮನೆಗಳು ನೆಲಕಚ್ಚಿವೆ, 12 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಹೇಳಿದೆ. ಜನವರಿ 26ರ ಗುಜರಾತ್‌ ಭೂಕಂಪದ ನಂತರವಂತೂ ವಿಶ್ವಾದ್ಯಂತ ಅದೆಷ್ಟು ಬಾರಿ ಭೂಮಿ ನಡುಗಿತೋ ಲೆಕ್ಕ ಇಟ್ಟವರಿಲ್ಲ.

ಇತ್ತ ರಾಜ್ಯದಲ್ಲಿ ಗರಿಷ್ಠ ತಾಪಮಾನ ಏರುತ್ತಾ ಸಾಗಿದೆ. ಉತ್ತರ ಒಳನಾಡಿನ ಕೆಲವೆಡೆಗಳಲ್ಲಿ ಕನಿಷ್ಠ ತಾಪಮಾನ ಅತಿ ಹೆಚ್ಚಾಗಿತ್ತು. ದಕ್ಷಿಣ ಒಳನಾಡಿನಲ್ಲಿ ತಾಪಮಾನ ಸಾಮಾನ್ಯ ಮಟ್ಟದಲ್ಲಿ ಏರಿತ್ತು. ಕರಾವಳಿಯಲ್ಲಿ ಅದು ಸಾಮಾನ್ಯ ಮಟ್ಟದಲ್ಲಿತ್ತು.

ರಾಜ್ಯದ ಅತಿ ಕನಿಷ್ಠ ಉಷ್ಣಾಂಶ ರಾಜಧಾನಿ ಬೆಂಗಳೂರಿನಲ್ಲಿ (16 ಡಿಗ್ರಿ ಸೆಲ್ಸಿಯಸ್‌) ದಾಖಲಾಗಿದ್ದರೆ, ಗರಿಷ್ಠ ತಾಪಮಾನ ರಾಯಚೂರಿನಲ್ಲಿತ್ತು. ಅಲ್ಲಿ 39 ಡಿಗ್ರಿ ಸೆಲ್ಸಿಯಸ್‌ ಇತ್ತು. ಮುನ್ಸೂಚನೆಯಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಿರ್ಮಲ ಆಕಾಶ ಇದ್ದು, ಗರಿಷ್ಠ ತಾಪಮಾನ 32 ಹಾಗೂ ಕನಿಷ್ಠ ತಾಪಮಾನ 16 ಡಿಗ್ರಿ ಇರುವ ಸಾಧ್ಯತೆ ಇದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X