ಮಹಾಜನ್ ವರದಿಯ ಶಿಫಾರಸ್ಸಿಗೇ ಕರ್ನಾಟಕ ಬದ್ಧ - ಕೃಷ್ಣ
ಬೆಂಗಳೂರು : ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಬಗೆಹರಿಸಲು ಪ್ರಧಾನಿ ಎ.ಬಿ.ವಾಜಪೇಯಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವ ಅಗತ್ಯತೆಯನ್ನು ಮುಖ್ಯಮಂತ್ರಿ ಕೃಷ್ಣ ತಳ್ಳಿಹಾಕಿದ್ದಾರೆ.
ಅವರು ಶುಕ್ರವಾರ ವಿಧಾನಸಭೆಯಲ್ಲಿ ಮಾತನಾಡುತ್ತಿದ್ದರು. ಇತ್ತೀಚೆಗೆ ಪ್ರಧಾನಿ ಜೊತೆ ಫೋನಿನಲ್ಲಿ ಮಾತನಾಡಿ, ಬಹು ದಿನಗಳ ಈ ಸಮಸ್ಯೆ ನನ್ನ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಮುಖಾಮುಖಿಯಿಂದ ಬಗೆಹರಿಸಲಾಗದು. ಮಹಾಜನ್ ವರದಿಯ ಶಿಫಾರಸುಗಳನ್ನೇ ಜಾರಿಗೆ ತರಬೇಕೆಂಬುದು ಕರ್ನಾಟಕದ ಪಟ್ಟು. ಅದರಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ. ಕೇರಳ ಕೂಡ ಈ ವಿವಾದದ ಒಂದಂಗ. ಶೀಘ್ರವೇ ಈ ಸಮಸ್ಯೆಯನ್ನು ಬಗೆಹರಿಸಿ ಎಂದು ಹೇಳಿದ್ದೇನೆ ಎಂದರು.
ತನ್ನ ಸರ್ಕಾರ (ಎನ್ಡಿಎ) ದ ಪಕ್ಷಗಳಲ್ಲೊಂದಾದ ಶಿವಸೇನೆಗೆ ಸೂಕ್ತ ಮಾರ್ಗದರ್ಶನ ನೀಡಿ, ಕರ್ನಾಟಕದ ಬೆಳಗಾವಿ ಕುರಿತ ಗಡಿ ವಿವಾದಕ್ಕೆ ಪ್ರಧಾನಿ ತೆರೆ ಎಳೆಯುತ್ತಾರೆ ಎಂಬ ವಿಶ್ವಾಸವಿದೆ. ಈ ಹಿಂದೆ ಕಾವೇರಿ ಮತ್ತಿತರ ವಿಷಯದಲ್ಲೂ ಕರ್ನಾಟಕಕ್ಕೆ ಅನ್ಯಾಯವಾಗದ ಹಾಗೆ ಪ್ರಧಾನಿ ತೀರ್ಮಾನಗಳನ್ನು ಕೈಗೊಂಡಿದ್ದಾರೆ. ಸಮ್ಮಿಶ್ರ ಸರ್ಕಾರದ ನಾಜೂಕು ಚುಕ್ಕಾಣಿ ಹಿಡಿದಿರುವ ಪ್ರಧಾನಿ ಸಮತೋಲನ ಕಾಪಿಟ್ಟುಕೊಂಡು, ಎಲ್ಲಾ ರಾಜ್ಯಗಳನ್ನು ಒಂದೇ ದೃಷ್ಟಿಯಿಂದ ನೋಡುವರೆಂಬ ಸಂಪೂರ್ಣ ಭರವಸೆ ನನ್ನದು ಎಂದು ಕೃಷ್ಣ ಹೇಳಿದರು.
ಮನೋಹರ ಜೋಷಿ ವಿವಾದಾತ್ಮಕ ಹೇಳಿಕೆ
ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿ ಶಿವಸೇನೆ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಸಚಿವ ಮನೋಹರ ಜೋಷಿ ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದನ್ನು ಪ್ರಶ್ನೋತ್ತರ ವೇಳೆಯಲ್ಲಿ ಸಂಯುಕ್ತ ಜನತಾ ದಳ ನಾಯಕ ಪಿಜಿಆರ್ ಸಿಂಧ್ಯ ಸಭೆಯ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ಕೃಷ್ಣ ಉತ್ತರ ಕೊಡಮಾಡಿದರು.
ಸಚಿವರು ತಮ್ಮ ಖಾತೆಗಳ ಮಿತಿಯಲ್ಲೇ ಸಾರ್ವಜನಿಕ ಸಭೆಯಲ್ಲಿ ಮಾತನಾಡುವಂತೆ ಪ್ರಧಾನಿ ವಾಜಪೇಯಿ ತಾಕೀತು ಮಾಡಬೇಕು. ಕೇಂದ್ರದ ಮಾಜಿ ಸಚಿವ ರಾಮಕೃಷ್ಣ ಹೆಗಡೆ ಸೇರಿದಂತೆ ಹಲವು ರಾಜಕೀಯ ಮುಖಂಡರು ಮನೋಹರ ಜೋಷಿಯವರ ಹೇಳಿಕೆಯನ್ನು ಪ್ರತಿಭಟಿಸಿ, ಅದನ್ನು ಪ್ರಧಾನಿ ಗಮನಕ್ಕೆ ತಂದಿದ್ದಾರೆ. ಇದನ್ನು ವಾಜಪೇಯಿ ಗಂಭೀರವಾಗಿ ಪರಿಗಣಿಸಬೇಕು ಎಂದು ಕೃಷ್ಣ ಆಗ್ರಹಿಸಿದರು.
ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರನ್ನು ಈ ಹಿಂದೆ ರಾಜ್ಯ ವಿಧಾನಸಭೆಗೆ ಬೆಳಗಾವಿಯ ಕೆಲ ಮಂದಿ ಚುನಾಯಿಸಿದ್ದುಂಟು. ಆದರೆ ಕಳೆದ ಚುನಾವಣೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರನ್ನು ಜನ ತಿರಸ್ಕರಿಸಿದ್ದಾರೆ. ಗಡಿ ವಿವಾದವು ಉಭಯ ರಾಜ್ಯಗಳ ನಡುವಿನ ಸೌಹಾರ್ದಕ್ಕೆ ಧಕ್ಕೆ ತಂದಿಲ್ಲ. ರಾಜ್ಯದಲ್ಲಿ ಅಧಿಕವಾದ ಸಕ್ಕರೆ ಉತ್ಪಾದನೆಯನ್ನು ಮಹಾರಾಷ್ಟ್ರ ಸ್ವೀಕರಿಸಿತು. ಭೀಮಾ ನದಿ ನೀರನ್ನು ಬಿಜಾಪುರ ಹಾಗೂ ಗುಲ್ಬರ್ಗಾ ಮಂದಿಗೆ ಬಿಡಬೇಕೆಂಬ ಕೋರಿಕೆಯನ್ನೂ ಈಡೇರಿಸಿತು ಎಂದು ಕೃಷ್ಣ ತಿಳಿಸಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications