ಶಿಕ್ಷಕರು ಪಾಠ ಹೇಳಿ ಕೊಡಬಹುದು, ಹೊಡೆಯುವುದು ಅಪರಾಧ !
ನವದೆಹಲಿ : ಶಾಲೆಗೆ ಮಕ್ಕಳನ್ನು ಕಳುಹಿಸುವ ಪೋಷಕರು ಹಾಗೂ ಶಿಕ್ಷಕರು ಈ ಸುದ್ದಿಯನ್ನು ಯಾವ ರೀತಿ ಸ್ವೀಕರಿಸುತ್ತಾರೋ ಈಗಲೇ ಹೇಳುವುದು ಕಷ್ಟ . ಆದರೆ, ಮುಂದಿನ ದಿನಗಳಲ್ಲಿ ಪ್ರತಿದಿನವೂ ಶಾಲೆಯಾಂದು ಪಂಚಾಯ್ತಿ ಕಟ್ಟೆಯಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಂತೂ ಇದೆ.
ಸುದ್ದಿ ಇಷ್ಟೇ - ಶಾಲೆಗಳಲ್ಲಿ ಮಕ್ಕಳನ್ನು ಥಳಿಸುವುದು ಅಪರಾಧವೆನ್ನುವ ನೀತಿ ಸದ್ಯದಲ್ಲಿಯೇ ಜಾರಿಗೊಳ್ಳಲಿದೆ. ಈ ವಿಷಯವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವ ಮುರುಳಿ ಮನೋಹರ ಜೋಷಿ ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಕಟಿಸಿದರು. ಈ ಸಂಬಂಧ ಕೇಂದ್ರ ಸರ್ಕಾರ ಆಯೋಗವೊಂದನ್ನು ರಚಿಸುವುದು ಎಂದು ಜ್ಞಾನೇಶ್ವರ್ ಮಿಶ್ರಾ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು ತಿಳಿಸಿದರು.
ಮಕ್ಕಳನ್ನು ದಾರುಣವಾಗಿ ಶಿಕ್ಷಿಸಿದ ಅನೇಕ ಉದಾಹರಣೆಗಳು ರಾಜಧಾನಿಯಲ್ಲೇ ವರದಿಯಾಗಿವೆ. ಶಿಕ್ಷಕರು ನೀಡಿದ ಶಿಕ್ಷೆಯಿಂದಾಗಿ ಮಕ್ಕಳು ಕಣ್ಣು ಕಳೆದುಕೊಂಡಿರುವುದೂ ಉಂಟು. ಇಂಥಾ ಪ್ರಕರಣಗಳಿಗೆ ತಡೆಹಾಕುವ ಉದ್ದೇಶದಿಂದ ಶಿಕ್ಷಕರ ಶಿಕ್ಷೆಗೆ ತಡೆ ಹಾಕಲು ನೀತಿಯನ್ನು ರೂಪಿಸುತ್ತಿರುವುದಾಗಿ ಜೋಶಿ ಹೇಳಿದರು.
ಹದಿಮೂರು ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣದ ಸೌಲಭ್ಯಗಳನ್ನು ಕಲ್ಪಿಸುವ 9 ನೇ ಪಂಚವಾರ್ಷಿಕ ಯೋಜನೆಯಲ್ಲಿನ ಕಾರ್ಯಕ್ರಮ 10 ನೇ ಪಂಚವಾರ್ಷಿಕ ಯೋಜನೆಯಲ್ಲಿಯೂ ಮುಂದುವರಿಯುವುದು. ಕುರುಡು ಮಕ್ಕಳಿಗೆ ಯೋಜನೆಯಾಂದನ್ನು ರೂಪಿಸಲು ರಾಜ್ಯಸರ್ಕಾರಗಳನ್ನು ಕೇಳಲಾಗಿದ್ದು , ಆ ಯೋಜನೆಯನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳುವುದು. ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನದ ಮೊತ್ತವನ್ನು ಸಾವಿರ ರುಪಾಯಿಗೆ ಹೆಚ್ಚಿಸಲಾಗುವುದು ಎಂದು ಸಚಿವರು ಹೇಳಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications