‘ಗದ್ದುಗೆಗಾಗಿ ಸುಲಿಗೆಕೋರರ ಜತೆ ಮಿಲನ : ಇವತ್ತಿನ ರಾಜಕಾರಣ’
ಮೈಸೂರು : ಭಾರತದಲ್ಲಿ 700 ರಾಜಕೀಯ ಪಕ್ಷಗಳಿವೆ. ಒಂದು ಪಕ್ಷ ಯಾವ ಪಕ್ಷದೊಂದಿಗೆ ಬೇಕಾದರೂ ನೆಂಟಸ್ತಿಕೆ ಬೆಳೆಸುತ್ತದೆ. ಈ ನೆಂಟಸ್ತಿಕೆ ಅನುಕೂಲ ಸಿಂಧುತ್ವದ ಫಲಿತಾಂಶವೇ ಹೊರತು ತತ್ತ್ವಗಳ ಮೊತ್ತವಲ್ಲ . ನಮ್ಮ ದೇಶದ ಒಬ್ಬ ಪ್ರಧಾನಿಯನ್ನು ಕೊಂದ ಬಣವೊಂದರ ಸಹೋದರ ಪಕ್ಷದೊಂದಿಗೆ ಯಃಕಶ್ಚಿತ್ ಗದ್ದುಗೆ ಆಸೆಗೆ ನೆಂಟಸ್ತಿಕೆ ಬೆಳೆಸುವುದು ಇವತ್ತಿನ ರಾಜಕಾರಣದಲ್ಲಿ ಬಟಾ ಬೆತ್ತಲು. ತಮಿಳುನಾಡಿನ ಎಐಎಡಿಎಂಕೆ- ಕಾಂಗ್ರೆಸ್ಸು- ಪಾಟ್ಟಾಳಿ ಮಕ್ಕಳ್ ಕಚ್ಚಿ (ಎಲ್ಟಿಟಿಇಗೆ ಅಯ್ಯೋ ಪಾಪ ಅನ್ನುವ ಪಕ್ಷ) ಒಡಂಬಡಿಕೆಯನ್ನು ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್.ಶೇಷನ್ ಉದಾಹರಿಸಿದ್ದು ಹೀಗೆ.
ಶುಕ್ರವಾರ ಮೈಸೂರು ವಿಶ್ವವಿದ್ಯಾಲಯದಲ್ಲಿ ‘ಭಾರತದಲ್ಲಿ ರಾಜಕೀಯದ ಸ್ಥಿತಿ- ಗತಿ’ ಎಂಬ ವಿಷಯದ ಬಗ್ಗೆ ಶೇಷನ್ ನಿರರ್ಗಳವಾಗಿ ಮಾತನಾಡಿದರು...
- ಭಾರತದ ರಾಜಕಾರಣ ತತ್ತ್ವಾದರ್ಶ, ದೇಶಭಕ್ತಿ, ಸಹಿಷ್ಣುತೆಯಿಲ್ಲದ ಸ್ವಾರ್ಥ ರಾಜಕಾರಣಿಗಳಿಂದ ತುಂಬಿಹೋಗಿದೆ. ರಾಜಕಾರಣದಿಂದಾಗಿ ಧರ್ಮ ದಾರಿ ತಪ್ಪಿದೆ
- ಜಮ್ಮು-ಕಾಶ್ಮೀರ ಸಮಸ್ಯೆ, ವಿಶ್ವ ವ್ಯಾಪಾರ ಸಂಸ್ಥೆಯ ಒಡಂಬಡಿಕೆ ಹಾಗೂ ಕೃಷಿಕರ ಸಮಸ್ಯೆ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆಯಾಗಬೇಕು
- ದೇಶ ಎದುರಿಸುತ್ತಿರುವ ಇಂಥ ಗಂಭೀರ ಸಮಸ್ಯೆಗಳನ್ನೂ ರಾಜಕೀಯ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಬ್ರೂಟಸ್ಗಳು ನಮ್ಮಲ್ಲಿದ್ದಾರೆ. ನಾವು ಎಚ್ಚರದಿಂದ ಇರಬೇಕು
- ಪಾಕಿಸ್ತಾನಕ್ಕೆ ಜಮ್ಮು ಅಥವಾ ಕಾಶ್ಮೀರದ ಒಂದೇ ಒಂದು ತುಂಡು ನೆಲ ಕೊಟ್ಟರೂ ಮುಂದೆ ಅದು ಮುಸಲ್ಮಾನ ಬಾಂಧವರಿರುವ ಎಲ್ಲಾ ರಾಜ್ಯಗಳನ್ನೂ ಕೇಳುತ್ತದೆ
- ಅಗತ್ಯವಿರುವೆಡೆಗಳಲ್ಲಿ ಸಂವಿಧಾನ ಪರಾಮರ್ಶೆ ಸ್ವಾಗತಾರ್ಹ. ಆದರೆ ಅದರಲ್ಲಿ ಮುಚ್ಚುಮರೆ ಕೂಡದು
- ಕಾನೂನಿನ ಕಿಂಚಿತ್ತೂ ಭಯವಿಲ್ಲದೆ ದರೋಡೆ ಸುಲಿಗೆ ನಡೆಯುವ ಬಿಹಾರದಂಥ ರಾಜ್ಯವುಳ್ಳ ನಮ್ಮದು ಪ್ರಾಣಿಗಳ ದೇಶ. ಕ್ಷುಲ್ಲಕ ಜನರ ಈ ನಡಾವಳಿ ತಪ್ಪಿಸುವುದಿರಲಿ, ನಿಯಂತ್ರಿಸುವುದು ಜೀವಿ ಶಾಸ್ತ್ರಜ್ಞನಿಂದಲೂ ಸಾಧ್ಯವಿಲ್ಲ
- ನಿಸ್ವಾರ್ಥ, ದೇಶಭಕ್ತಿ , ಧರ್ಮ ಪರಿಪಾಲನೆ, ಅಭಿವೃದ್ಧಿಗೆ ದೀಕ್ಷೆ ಇವುಗಳನ್ನು ಹೊತ್ತ ಯುವಕರು ರಾಜಕೀಯ ಹೊಕ್ಕಿ, ಅದಕ್ಕೆ ಹೊಸ ರಂಗು ಕೊಡಬೇಕು
- ಧಾರ್ಮಿಕ ಪ್ರಜ್ಞೆ ಮುಕ್ತಿಗೊಂದು ಮಾರ್ಗ. ಭಾಷೆ ಅಭಿವ್ಯಕ್ತಿಗೊಂದು ಸೇತುವೆ. ರಾಜಕಾರಣಿಗಳಿಗೆ ಇವೇ ಡಿವೈಡ್ ಅಂಡ್ ರೂಲ್ ಅಸ್ತ್ರ
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications