‘ಶಿಕ್ಷಣ ನಮ್ಮ ಹಕ್ಕು’ ಪಟ್ಟು ಹಿಡಿದು ಕೇಳುವ ಆ ದಿನ ದೂರವಿಲ್ಲ
ಮೈಸೂರು : ಶಿಕ್ಷಣವನ್ನು ಮೂಲಭೂತ ಹಕ್ಕುಗಳ ಪಟ್ಟಿಗೆ ಸೇರಿಸುವ ಸಾಧ್ಯತೆಯಿದೆ ಎಂದು ಸಾರ್ವಜನಿಕ ವಿತರಣಾ ಖಾತೆಯ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್ ಶನಿವಾರ ಹೇಳಿದ್ದಾರೆ.
ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಸ್ವರ್ಣ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಸಚಿವರು, ಶಿಕ್ಷಣ ನಮ್ಮ ಹಕ್ಕು ಎಂದು ಜನ ಹೇಳುವಂತಾಗಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿವೆ, ನಡೆಯುತ್ತಿವೆ. ವಿಶ್ವದ ನಿರಕ್ಷರ ಕುಕ್ಷಿ ದೇಶಗಳ ಯಾದಿಯಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಭಾರತ ಮೊದಲ ಮೂರು ರ್ಯಾಂಕ್ ಪಡೆದಿವೆ. ಸಿರಿವಂತರಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ. ಬಡವರಿಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಎಂಬ ಜನಾಭಿಪ್ರಾಯ ನಮ್ಮಲ್ಲಿ ಬೇರೂರಿದೆ. ಸರ್ಕಾರ ಇದನ್ನು ಸುಳ್ಳಾಗಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಣಾಳಿಕೆಯಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಸಚಿವರು ಕರೆ ಕೊಟ್ಟರು.
ರಮಾದೇವಿ ಉವಾಚ : ಸುವರ್ಣ ಮಹೋತ್ಸವದ ಸ್ಮರಣಾರ್ಥ ನಿರ್ಮಿಸಲಾಗುವ ಸಭಾಂಗಣದ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದ ರಾಜ್ಯಪಾಲರಾದ ವಿ.ಎಸ್.ರಮಾದೇವಿ, ಸಚಿವ ಶ್ರೀನಿವಾಸ ಪ್ರಸಾದ್ ಹೇಳಿಕೆಯನ್ನು ಸಮರ್ಥಿಸಿದರು. ನಮ್ಮ ದೇಶದ ಜನರಿಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಬಗೆಗೆ ಅರಿವೇ ಇಲ್ಲ. ಎಲ್ಲಿಯವರೆಗೆ ನಾಡಾಡಿಗಳಿಗೆ ಮೂಲಭೂತ ವಿಷಯಗಳು ಗೊತ್ತಾಗುವುದಿಲ್ಲ , ಅಲ್ಲಿವರೆಗೆ ದೇಶಕ್ಕೆ ತಾವೇನು ಮಾಡಬಹುದು ಎಂಬುದರ ಅರಿವೂ ಅವರಲ್ಲಿ ಮೂಡದು. ನಮ್ಮ ರಾಜ್ಯದ ಪ್ರತಿಶತ 70 ಶಿಕ್ಷಣ ಸಂಸ್ಥೆಗಳನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರುತ್ತಿರುವ ಮಠಾಧೀಶರಿಗೆ ವಂದನೆಗಳು. ಸರ್ಕಾರಿ ಶಾಲೆಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪವನ್ನು ಶಿಕ್ಷಣ ಸಚಿವರು ಸುಳ್ಳಾಗಿಸಬೇಕು ಎಂದು ಕರೆ ಕೊಟ್ಟರು.
ಗೊತ್ತು ಗುರಿಯಿಲ್ಲದ ಶಿಕ್ಷಣ : ಭಾರತದ ಶಿಕ್ಷಣ ವ್ಯವಸ್ಥೆಗೆ ನಿರ್ದಿಷ್ಟ ಗೊತ್ತು ಗುರಿಯಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ತಾವು ಯಾಕೆ ಓದುತ್ತಿದ್ದೇವೆ ಅನ್ನೋದೇ ಗೊತ್ತಿರುವುದಿಲ್ಲ. ಶಿಕ್ಷಣವನ್ನು ಅರ್ಥಪೂರ್ಣವನ್ನಾಗಿಸಬೇಕು. ವಿದ್ಯಾರ್ಥಿಗಳಿಗೆ ಮೊದಲು ದಿಕ್ಕು- ದಿಸೆ ತೋರಿಸಿ, ನೀವು ಓದಬೇಕಾದ್ದು ಇಂಥದ್ದಕ್ಕೆ ಎಂದು ಮನವರಿಕೆ ಮಾಡಿಸಬೇಕು. ಆಗಲೇ ಶಿಕ್ಷಣ ಕ್ಷೇತ್ರಕ್ಕೆ ಬೀಳುವ ಹಣಕ್ಕೆ ತಕ್ಕ ಫಲ ಸಿಗುತ್ತದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವನಾಥ್ ಹೇಳಿದರು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications