ಬೆಂಗಳೂರಿನಲ್ಲಿ ಕರುಳುಬೇನೆ : ಕ್ಲೋರಿನ್ ಮಾತ್ರೆ ವಿತರಣೆ
ಬೆಂಗಳೂರು : ನಗರದ ಅಲಸೂರಿನಲ್ಲಿ ಶುಕ್ರವಾರ ಕರುಳುಬೇನೆಗೆ ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ಇಂದಿರಾನಗರ ಪ್ರದೇಶದಲ್ಲಿ ಕಲುಷಿತ ನೀರು ಕುಡಿದ ನೂರಾರು ಮಂದಿ ಆಸ್ಪತ್ರೆ ಸೇರಿದ ಪ್ರಕರಣ ಬೆಂಗಳೂರು ಮಹಾನಗರ ಪಾಲಿಕೆ ಕಣ್ಣು ತೆರೆಸಿದೆ. ನಗರದ ಹಲವು ಪ್ರದೇಶಗಳಲ್ಲಿ ಕರುಳು ಬೇನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ಲೋರಿನ್ ಮಾತ್ರೆಗಳನ್ನು ವಿತರಿಸಲು ಪಾಲಿಕೆ ಕ್ರಮ ಕೈಗೊಂಡಿದೆ.
ನೀರಿಗೆ ಮಿಶ್ರ ಮಾಡುವ ಕ್ಲೋರಿನ್ ಮಾತ್ರೆಗಳನ್ನು ಮನೆಮನೆಗೇ ತೆರಳಿ ವಿತರಿಸುವ ವ್ಯವಸ್ಥೆಯನ್ನು ಬೆಂಗಳೂರು ಮಹಾ ನಗರ ಪಾಲಿಕೆ ಆರಂಭಿಸಿದೆ. ನೀರಿಗೆ ಕ್ಲೋರಿನ್ ಹಾಕುವಂತೆ ಬೆಂಗಳೂರು ಜಲ ಮಂಡಳಿಗೂ ಸೂಚಿಸಲಾಗಿದೆ. ನೀರಿನ ಕೊಳವೆಗಳು ಒಡೆದು, ಕಲುಷಿತ ನೀರು ಸೇರುತ್ತಿರುವ ಎಲ್ಲ ನೀರಿನ ಕೊಳವೆಗಳನ್ನೂ ತತ್ಕ್ಷಣವೇ ದುರಸ್ತಿ ಮಾಡುವಂತೆ ಆದೇಶಿಸಲಾಗಿದೆ.
ಆದಾಗ್ಯೂ, ಜನರು ಶೇಖರಿಸಿಟ್ಟುಕೊಳ್ಳುವ ನೀರು ಕಲುಷಿತಗೊಂಡು ರೋಗ ಹರಡುವ ಭೀತಿ ಇರುವುದರಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಮನೆಮನೆಗೇ ತೆರಳಿ ಕ್ಲೋರಿನ್ ಮಾತ್ರೆ ಹಂಚುವ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಮುನಿವೆಂಕಟಪ್ಪ ಗಾರ್ಡನ್, ಜಯರಾಜ್ ನಗರ, ಮರ್ಫಿಟೌನ್, ಕದಿರಯ್ಯನ ಪಾಳ್ಯ, ಜೋಗುಪಾಳ್ಯ, ಸರಸ್ವತಿ ಪುರ, ಲಿಂಗಯ್ಯನ ಪಾಳ್ಯ, ಬಯ್ಯಪ್ಪನ ಹಳ್ಳಿ, ಆಂಧ್ರಕಾಲೋನಿ ಸೇರಿದಂತೆ ಇನ್ನಿತರ ಪ್ರದೇಶಗಳ ನಿವಾಸಿಗಳಿಗೆ ಕ್ಲೋರಿನ್ ಮಾತ್ರೆ ಹಂಚಲಾಗುತ್ತಿದೆ. ತಾವು ಶೇಖರಿಸಿಟ್ಟುಕೊಂಡ ನೀರಿಗೆ ಕ್ಲೋರಿನ್ ಬೆರೆಸುವಂತೆ ನಾಕರಿಕರಲ್ಲಿ ಕೋರಲಾಗಿದೆ.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications