ರಾಜ್ಯ ವಿದ್ಯುತ್ ಮಂಡಳಿ ಕಾಯಕಲ್ಪಕ್ಕೆ ತಜ್ಞರ ಸಮಿತಿ ರಚನೆ : ಕೃಷ್ಣ
ಮೈಸೂರು : ಕರ್ನಾಟಕ ರಾಜ್ಯ ವಿದ್ಯುತ್ ಮಂಡಳಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಿ ಸಲಹೆ - ಮಾರ್ಗದರ್ಶನ ಸೂಚಿಸಲು ತಜ್ಞರ ಸಮಿತಿಯಾಂದನ್ನು ರಚಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ತಿಳಿಸಿದ್ದಾರೆ.
ಮೈಸೂರಿನಲ್ಲಿ ಕೇರಳ ಮೂಲದ ಮಾತಾ ಅಮೃತಾನಂದಮಯಿ ಮಠದ ಕಂಪ್ಯೂಟರ್ ಅಕಾಡಮಿ ಮತ್ತು ದತ್ತಿ ಆಸ್ಪತ್ರೆಯ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಈ ಸಮಿತಿಯು ರಾಜ್ಯ ವಿದ್ಯುತ್ ಮಂಡಳಿಗೆ ಕಾಯಕಲ್ಪ ನೀಡುವ ಬಗ್ಗೆ ಕೂಡ ಅಧ್ಯಯನ ಮಾಡಲಿದೆ ಎಂದರು.
ವಿದ್ಯುತ್ ಕ್ಷೇತ್ರದಲ್ಲಿ ಅದರಲ್ಲೂ ಕೃಷಿಗೆ ಒದಗಿಸುವ ವಿದ್ಯುತ್ಗೆ ಹಾಗೂ ಸಬ್ಸಿಡಿ ಕಡಿತಗೊಳಿಸುವ ಸಂಬಂಧ ರಾಷ್ಟ್ರೀಯ ಒಮ್ಮತ ಮೂಡುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.
ಶನಿವಾರ ದೆಹಲಿಯಲ್ಲಿ ನಡೆದ ಸಭೆಯ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಏಕರೂಪದ ವಿದ್ಯುತ್ ದರ ವಿಧಿಸುವ ಅಭಿಪ್ರಾಯ ಮೂಡಿತೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಎಲ್ಲ ವಿಷಯಗಳೂ ತಜ್ಞರ ಸಮಿತಿಯ ಅಧ್ಯಯನದಲ್ಲಿ ಅಡಕವಾಗಿರುತ್ತವೆ. ಕುಸಿಯುತ್ತಿರುವ ರಾಜ್ಯ ವಿದ್ಯುತ್ ಮಂಡಳಿಯನ್ನು ಕೈಹಿಡಿದು ಮೇಲೆತ್ತುವುದು ಹೇಗೆ ಎಂಬುದೇ ಈಗ ನಮ್ಮ ಮುಂದಿರುವ ಪ್ರಮುಖ ಪ್ರಶ್ನೆ ಎಂದರು.
ಇದಕ್ಕೂ ಮುನ್ನ ಶಿಲಾನ್ಯಾಸ ಸಂದರ್ಭದಲ್ಲಿ ಮಾತನಾಡಿದ ಅವರು ಕೆಳವರ್ಗದ ಹಾಗೂ ಶೋಷಿತ ಜನರ ಜೀವನಮಟ್ಟ ಸುಧಾರಿಸಲು ಶ್ರಮಿಸುವ ಸಂಸ್ಥೆಗಳಿಗೆ ನೆರವಾಗಲು ರಾಜ್ಯ ಸರಕಾರ ಬದ್ಧವಾಗಿದೆ ಎಂದರು. ಫಲಾನುಭವಿಗಳಿಗೆ ಅಮೃತ ಕುಟೀರಂನ ಬೀಗದ ಕೈಗಳನ್ನು ಅವರು ಈ ಸಂದರ್ಭದಲ್ಲಿ ವಿತರಿಸಿದರು.
ಮಾತಾ ಅಮೃತಾನಂದಮಯಿ ಸಂಸ್ಥೆಯು ಪ್ರಥಮ ಹಂತದಲ್ಲಿ ಇಂತಹ 1000 ಮನೆಗಳು ಹಾಗೂ ಅತ್ಯಾಧುನಿಕ ಆಸ್ಪತ್ರೆಯನ್ನು ನಿರ್ಮಿಸುವ ಯೋಜನೆ ರೂಪಿಸಿದೆ. ಈಗಾಗಲೇ 300 ಮನೆಗಳನ್ನು ನಿರ್ಮಿಸಿ ಹಿಂದುಳಿದ ವರ್ಗದ ಜನರಿಗೆ ದಾನವಾಗಿ ನೀಡಿದೆ.
ಬೇಸಿಗೆಯಲ್ಲಿ ವಿದ್ಯುತ್ ಕಡಿತ: ಪ್ರಸಕ್ತ ಬೇಸಿಗೆಯಲ್ಲಿ ವಿದ್ಯುತ್ ಕಡಿತ ಮಾಡುವ ಸೂಚನೆಯನ್ನೂ ಮುಖ್ಯಮಂತ್ರಿ ಕೃಷ್ಣ ಈ ಸಂದರ್ಭದಲ್ಲಿ ನೀಡಿದರು. ರಾಜ್ಯದ ವಿವಿಧ ವಿದ್ಯುತ್ ಉತ್ಪಾದನೆ ಕೇಂದ್ರಗಳಲ್ಲಿ ಉತ್ಪಾದನಾ ಪ್ರಮಾಣ ಹಾಗೂ ಪೂರೈಕೆಯಲ್ಲಿ ಏರಿಳಿತ ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗುತ್ತದೆ ಎಂದೂ ಅವರು ಹೇಳಿದರು. (ಯು.ಎನ್.ಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications