2 ಪ್ರತ್ಯೇಕ ದರೋಡೆಗಳಲ್ಲಿ ಚಿನ್ನಾಭರಣ, 3 ಲಕ್ಷ ರು. ಲೂಟಿ
ಬೆಂಗಳೂರು : ಸಿಎಂಎಚ್ ರಸ್ತೆಯ ಮೀನಾ ಚಿನ್ನಾಭರಣ ಅಂಗಡಿಯಲ್ಲಿ ಸೋಮವಾರ ರಾತ್ರಿ 8.15ರ ಸುಮಾರಿಗೆ ಗ್ರಾಹಕರಂತೆ ನಟಿಸಿದ ದರೋಡೆಕೋರರು ಅಂಗಡಿ ಮಾಲೀಕರ ಪತ್ನಿ ಹಾಗೂ ಪುತ್ರಿಯ ಮೇಲೆ ಹಲ್ಲೆ ನಡೆಸಿ, ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.
ಐವರು ದರೋಡೆಕೋರರು ಅಂಗಡಿ ಹೊಕ್ಕರು. ಅವರ ಪೈಕಿ ಒಬ್ಬ ಅಂಗಡಿ ಮಾಲೀಕರ ಪತ್ನಿ ಮೀನಾ ಹಾಗೂ ಪುತ್ರಿ ಆಶಾ ಮೇಲೆ ಹಲ್ಲೆ ನಡೆಸಿದರು. ಉಳಿದ ನಾಲ್ವರು ಷೋಕೇಸ್ ಒಡೆದು, ಆಭರಣಗಳನ್ನು ತಮ್ಮ ಜೇಬು ಹಾಗೂ ಚೀಲಗಳಿಗೆ ತುಂಬಿಕೊಂಡರು. ಸದ್ದುಗದ್ದಲ ಕೇಳಿ ಜನ ಸೇರಿದರಾದರೂ, ದರೋಡೆಕೋರರು ತಮ್ಮ ಬಳಿ ಇದ್ದ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿದರು. ನಾಡಬಾಂಬ್ ಸ್ಫೋಟಿಸಿ ಜನರನ್ನು ಚದುರಿಸಿದರು.
ಗಸ್ತಿನಲ್ಲಿದ್ದ ಇಂದಿರಾನಗರದ ಪೊಲೀಸರು ಪರಾರಿಯಾಗುತ್ತಿದ್ದ ದರೋಡೆಕೋರರ ಬೆನ್ನಟ್ಟಿದರು. ಆಗಲೂ ದರೋಡೆಕೋರರು ನಾಡಬಾಂಬ್ ಸಿಡಿಸಿದರು. ಈ ಒತ್ತಡದ ನಡುವೆಯೂ ಪೊಲೀಸರು ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾದರು. ಇಬ್ಬರಲ್ಲಿ ಇದ್ದ ಚಿನ್ನಾಭರಣಗಳನ್ನೂ ವಶಪಡಿಸಿಕೊಂಡಿದ್ದಾರೆ. ಉಳಿದ ಮೂವರು ಪರಾರಿಯಾಗಿದ್ದು, ಅವರು ಒಯ್ದಿರುವ ಚಿನ್ನಾಭರಣದ ಮೌಲ್ಯ ಎಷ್ಟೆಂಬುದು ಇನ್ನೂ ತಿಳಿದುಬಂದಿಲ್ಲ. ತನಿಖೆ ಮುಂದುವರೆದಿದೆ.
ಇನ್ನೊಂದು ದರೋಡೆ, 3 ಲಕ್ಷ ರು. ಕಳವು : ಔಷಧಿ ಕಂಪನಿಯ ಉದ್ಯೋಗಿ ರಮೇಶ್ ಕುಮಾರ್ ಎಂಬುವರನ್ನು ಇರಿದು, ಅವರಿಂದ 3 ಲಕ್ಷ ರುಪಾಯಿಯನ್ನು ಸೋಮವಾರ ಹಾಡು ಹಗಲೇ ದೋಚಿರುವ ಘಟನೆ ಸೆಂಟ್ರಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆರ್.ವಿ.ರಸ್ತೆಯಲ್ಲಿನ ಕೆನರಾ ಬ್ಯಾಂಕಿಗೆ ಹಣ ಸಂದಾಯ ಮಾಡಲೆಂದು ಪಾರ್ಶವ ಔಷಧಿ ಕಂಪನಿ ಉದ್ಯೋಗಿ ರಮೇಶ್ ಕುಮಾರ್ ಸೋಮವಾರ ಮಧ್ಯಾಹ್ನ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಹಿಂದಿನಿಂದ ಬಂದ ದುಷ್ಕರ್ಮಿಗಳು, ಭುಜಕ್ಕೆ ಚಾಕು ಇಟ್ಟು ಹೆದರಿಸಿ, ಹಣ ದೋಚಿದ್ದಾರೆ. ಹಣ ಕಸಿಯುತ್ತಿರುವುದನ್ನು ಕಣ್ಣಾರೆ ಕಂಡ ಜನ ನಾಲ್ವರು ದುಷ್ಕರ್ಮಿಗಳನ್ನು ಬೆನ್ನಟ್ಟಿ ಅವರ ಪೈಕಿ ಒಬ್ಬನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಣದ ಚೀಲ ಇಟ್ಟುಕೊಂಡಿದ್ದವನೂ ಸೇರಿದಂತೆ ಉಳಿದ ಮೂವರು ಪರಾರಿಯಾಗಿದ್ದಾರೆ.
ರಮೇಶ್ ಅವರ ತೊಡೆಗೆ ಸ್ವಲ್ಪ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೆಂಟ್ರಲ್ ಠಾಣೆಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications