ಪಾಂಡವಪುರ ಸಕ್ಕರೆ ಕಾರ್ಖಾನೆಯಲ್ಲಿಬೆಂಕಿ : 4 ಕೋಟಿ ರು. ಸಕ್ಕರೆ ಭಸ್ಮ
ಮೈಸೂರು : ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ರಾತ್ರಿ 8-30ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನಾಲ್ಕು ಕೋಟಿ ರೂಪಾಯಿ ಮೌಲ್ಯದ ಸುಮಾರು 35 ಸಾವಿರ ಸಕ್ಕರೆ ಚೀಲಗಳು ಭಸ್ಮವಾಗಿವೆ. ಯಾವುದೇ ಜೀವ ಹಾನಿಯಾಗಿರುವ ವರದಿಯಾಗಿಲ್ಲ. ಆದರೆ, ನಷ್ಟದ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.
ಶಾರ್ಟ್ ಸರ್ಕ್ಯುಟ್ನಿಂದ ಈ ಬೆಂಕಿ ಆಕಸ್ಮಿಕ ಸಂಭವಿಸಿದೆ ಎಂದು ಶಂಕಿಸಲಾಗಿದ್ದರೂ, ಸರಿಯಾದ ಕಾರಣ ತಿಳಿದುಬಂದಿಲ್ಲ. ಪೊಲೀಸ್ ಇನ್ಸ್ಪೆಕ್ಟರ್ ಎಂ. ಕೆ. ಶ್ರೀವಾಸ್ತವ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಐದು ಅಗ್ನಿ ಶಾಮಕ ವಾಹನಗಳು ಕೂಡಲೇ ಸ್ಥಳಕ್ಕೆ ಧಾವಿಸಿ, ಸತತ ಐದು ಗಂಟೆಗಳ ಕಾಲ ಶ್ರಮಪಟ್ಟರೂ ಬೆಂಕಿ ಪೂರ್ತಿಯಾಗಿ ಆರಿಲ್ಲ . ಸಕ್ಕರೆ ಮೂಟೆಗಳ ಒಳಗೆ ಇನ್ನೂ ಬೆಂಕಿ ಹೊಗೆಯಾಡುತ್ತಿದೆ ಎಂದು ಶಂಕಿಸಲಾಗಿದೆ. ಯಂತ್ರೋಪಕರಣಳಿಗೆ ಆಗಿರುವ ನಷ್ಟದ ಪ್ರಮಾಣ ಇನ್ನೂ ತಿಳಿದು ಬಂದಿಲ್ಲ. ಇತ್ತೀಚೆಗಷ್ಟೇ ಕಾರ್ಖಾನೆಯು ವಿಸ್ತರಣೆಗೊಂಡಿತ್ತು.
1959ರಲ್ಲಿ ಸ್ಥಾಪನೆಯಾದ ಪಾಂಡವಪುರ ಸಕ್ಕರೆ ಕಾರ್ಖಾನೆ ಪ್ರಸ್ತುತ 54 ಕೋಟಿ ರೂಪಾಯಿ ಸಾಲದ ಹೊರೆಯನ್ನು ಹೊತ್ತು ಕೊಂಡಿದೆ. ಆರಂಭದ ದಿನಗಳಲ್ಲಿ 800 ಟನ್ ಕಬ್ಬು ಅರೆಯುತ್ತಿದ್ದ ಕಾರ್ಖಾನೆಯ ಸಾಮರ್ಥ್ಯ ಇತ್ತೀಚೆಗೆ 3.35 ಲಕ್ಷ ಟನ್ಗೇರಿದೆ. ನಷ್ಟದಲ್ಲಿ ನಡೆಯುತ್ತಿರುವ ಕಾರ್ಖಾನೆಯಲ್ಲಿ ಪ್ರತಿ ದಿನ ಒಂದಲ್ಲ ಒಂದು ಕಾರಣಕ್ಕಾಗಿ ಮುಷ್ಕರಗಳು ನಡೆಯುತ್ತಲೇ ಇರುತ್ತದೆ. ಕಾರ್ಖಾನೆಯ ಗೋದಾಮಿನಲ್ಲಿ 40 ಕೋಟಿ ರೂಪಾಯಿ ಮೌಲ್ಯದ ಸಕ್ಕರೆ ದಾಸ್ತಾನಿತ್ತು.
(ಮೈಸೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications