15 ಸರ್ಕಾರಿ ಸ್ವಾಮ್ಯದ ಉದ್ದಿಮೆಗಳುಪುನಶ್ಚೇತನಕ್ಕೆ ಅರ್ಹವಲ್ಲ : ಕೃಷ್ಣ
ಬೆಂಗಳೂರು : ಸರಕಾರಿ ಸ್ವಾಮ್ಯದ ಬಹುತೇಕ ಉದ್ದಿಮೆಗಳು ನಷ್ಟದಲ್ಲಿದ್ದು, ಅವುಗಳನ್ನು ಮುಚ್ಚುವ ಇಲ್ಲವೆ ಖಾಸಗೀಕರಣ ಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರಿ ಚಿಂತಿಸಿದೆ. ಆದರೆ, ಈ ಉದ್ದಿಮೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಮಾ.13ರಂದು ಧರಣಿ ನಡೆಸುವುದಾಗಿ ಪ್ರಕಟಿಸಿವೆ.
ಈ ಸಂಬಂಧ ವಿಧಾನ ಪರಿಷತ್ತಿನಲ್ಲಿ ವಿಷಯ ಪ್ರಸ್ತಾಪವಾದಾಗ ಉತ್ತರ ನೀಡಿದ ಮುಖ್ಯಮಂತ್ರಿಗಳು ನಷ್ಟದ ಉದ್ದಿಮೆಗಳ ಸ್ಥಿತಿಗತಿಯ ಅಧ್ಯಯನಕ್ಕೆ ಪದ್ಮನಾಭ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಆ ವರದಿ ಬಂದ ಬಳಿಕ, ಉದ್ದಿಮೆಗ ಪುನಶ್ಚೇತನ ಇಲ್ಲವೇ ಖಾಸಗೀಕರಣ ಪ್ರಕ್ರಿಯೆಯ ಯೋಚನೆ ಮಾಡಲಾಗುವುದು ಎಂದು ತಿಳಿಸಿದರು.
ಸ್ವಯಂ ನಿವೃತ್ತಿಗೆ 160 ಕೋಟಿ ಬೇಕು: ರಾಜ್ಯದ 15 ಸಾರ್ವಜನಿಕ ವಲಯದ ಉದ್ದಿಮೆಗಳು ಪುನಶ್ಚೇತನ ಮಾಡುವ ಸ್ಥಿತಿಯಲ್ಲಿ ಇಲ್ಲ ಎಂದೂ ಕೃಷ್ಣ , ಬಿ.ಎಲ್. ಶಂಕರ್ ಅವರ ಪ್ರಶ್ನೆಗೆ ಉತ್ತರಿಸುತ್ತಾ ತಿಳಿಸಿದರು. ಈ ಉದ್ದಿಮೆಗಳಲ್ಲಿ ಸ್ವಯಂ ನಿವೃತ್ತಿ ಯೋಜನೆ ಜಾರಿಗೆ ತರಲು 166 ಕೋಟಿ ರುಪಾಯಿಗಳ ಅಗತ್ಯವಿದೆ. ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಖಾಸಗಿಯವರಿಗೆ ಒಪ್ಪಿಸುವಾಗ ಷೇರು ಮೌಲ್ಯವನ್ನು ಮಾರುಕಟ್ಟೆಯ ದರವನ್ನು ಆಧರಿಸಿ ನಿರ್ಧರಿಸಲಾಗುವುದೂ ಎಂದೂ ಕೃಷ್ಣ ತಿಳಿಸಿದರು.
ನಿರುಪಯುಕ್ತ ಇಲ್ಲವೇ ರೋಗಗ್ರಸ್ಥವಾಗಿರುವ 15 ಸಾರ್ವಜನಿಕ ಉದ್ದಿಮೆಗಳಲ್ಲಿ ಸ್ವಯಂ ನಿವೃತ್ತಿ ಯೋಜನೆ ಜಾರಿಗೆ ತರುವುದು ಅನಿವಾರ್ಯವಾಗಿದೆ ಎಂದೂ ಅವರು ಪರಿಷತ್ತಿನಲ್ಲಿ ತಿಳಿಸಿದರು. ಈ ಸಂಬಂಧ ಸರಕಾರ ಚಿಂತಿಸುತ್ತಿದೆ ಎಂದೂ ಹೇಳಿದರು. ಮಾರ್ಚ್ ಅಂದ್ಯದೊಳಗೇ ಎರಡು ಉದ್ದಿಮೆಗಳನ್ನು ಮುಚ್ಚುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications