ಕರಾವಳಿ : ಮಂಜುಗಡ್ಡೆ ತಯಾರಿಕಾ ಘಟಕಗಳ ಮುಷ್ಕರ ವಾಪಸ್ಸು
ಬೆಂಗಳೂರು/ಮಂಗಳೂರು : ಮಂಜುಗಡ್ಡೆ ಕಾರ್ಖಾನೆಗಳು ಬಳಸುವ ವಿದ್ಯುತ್ಗೆ ರಿಯಾಯಿತಿಯನ್ನು ನೀಡಲು ವ್ಯಕ್ತಿ ಶಃ ಒಪ್ಪಿರುವ ಸಣ್ಣ ಕೈಗಾರಿಕಾ ಸಚಿವ ಎಸ್.ಆರ್. ಕಾಶಪ್ಪನವರ್ ಅವರ ಭರವಸೆಯನ್ನು ನಂಬಿ ಕರಾವಳಿ ಪ್ರದೇಶದ ಮಂಜುಗಡ್ಡೆ ತಯಾರಿಕಾ ಘಟಕಗಳು ಎರಡು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ಸು ಪಡೆದಿವೆ ಎಂದು ಕರ್ನಾಟಕ ಕರಾವಳಿ ಮಂಜುಗಡ್ಡೆ ಹಾಗೂ ಶೈತ್ಯಾಗಾರ ಮಾಲೀಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ಸಂಜೆ ಕರಾವಳಿ ಪ್ರದೇಶದ ಮೂರು ಜಿಲ್ಲೆಗಳ ಶಾಸಕರು ಸಭೆ ಸೇರಿ ಪ್ರಕರಣದ ಸಾಧಕ ಭಾದಕಗಳನ್ನು ಚರ್ಚಿಸಿದರು. ವಿದ್ಯುತ್ ದರ ಏರಿಕೆಯಿಂದಾಗಿ ಮತ್ಸ್ಯೋದ್ಯಮ ಹಾಗೂ ಮಂಜುಗಡ್ಡೆ ಉದ್ಯಮ ತೀವ್ರ ಸಂಕಷ್ಟ ಎದುರಿಸುತ್ತಿದೆ. ಆದ್ದರಿಂದ ತೋಟಗಾರಿಕೆಗೆ ನೀಡುವ ವಿದ್ಯುತ್ ಸಬ್ಸಿಡಿಯನ್ನು ಮತ್ಸೋದ್ಯಮಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿಗಳನ್ನು ಕೋರಲು ಸಭೆ ತೀರ್ಮಾನಿಸಿತು. ಸಭೆಯಲ್ಲಿ ಸಚಿವರಾದ ರಮಾನಾಥ ರೈ ಹಾಗೂ ವೀರ ಕುಮಾರ್ ಪಾಟೀಲ್ ಭಾಗವಹಿಸಿದ್ದರು.
ಮಂಜುಗಡ್ಡೆ ಕಾರ್ಖಾನೆಗಳು ಬಳಸುವ ಪ್ರತಿ ಯೂನಿಟ್ ವಿದ್ಯುತ್ತಿಗೆ ಒಂದು ರುಪಾಯಿ ರಿಯಾಯಿತಿ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಲಾಗುವುದು ಎಂದು ಸಭೆಯ ನಂತರ ಸಚಿವ ಕಾಶಪ್ಪನವರ್ ಸುದ್ದಿಗಾರರಿಗೆ ತಿಳಿಸಿದರು. ಸಬ್ಸಿಡಿ ಪ್ರಸ್ತಾವನೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ ಅಂದಾಜು 3 ಕೋಟಿ ರುಪಾಯಿ ನಷ್ಟವಾಗುವುದೆಂದು ಅವರು ತಿಳಿಸಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚ-ಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications