ವಿಧವೆ-ವಿಧುರರಿಗೆ ಪರಿವರ್ತನದಿಂದ ಬಳ್ಳಾರಿಯಲ್ಲೊಂದು ಸ್ವಯಂವರ
ಬಳ್ಳಾರಿ : ಮಾರ್ಚ್ ಹನ್ನೊಂದರ ಭಾನುವಾರ ಮರು ಮದುವೆಯಾಗಬಯಸುವ ವಿಧವೆಯರು ಮತ್ತು ವಿಧುರರು ತಮ್ಮ ಬಾಳಸಂಗಾತಿಯನ್ನು ಆರಿಸಿಕೊಳ್ಳಲು ಅನುಕೂಲವಾಗುವಂತೆ ಕಾರ್ಯಕ್ರಮವೊಂದನ್ನು ಇಲ್ಲಿನ ವಾಸವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಹಿಂದಿರುವ ವ್ಯಕ್ತಿ ಪರಿವರ್ತನ ಸಂಘಟನೆಯ ಟ್ರಸ್ಟೀ ನಾಡಹಳ್ಳಿ ಶ್ರೀಪಾದ ರಾವ್. ವಿಧವಾ ವಿವಾಹಕ್ಕೆ ಸಂಬಂಧಿಸಿದಂತೆ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಶ್ರೀಪಾದ ರಾವ್ ಹೇಳಿದರು.
ಹೂಮಳೆ ಚಿತ್ರ ಶ್ರೀಪಾದ ರಾವ್ ಅವರ ಹೊಸ ಬದುಕು ಕಾದಂಬರಿ ಆಧಾರಿತ ಚಿತ್ರ. ಭಾನುವಾರದ ಕಾರ್ಯಕ್ರಮಕ್ಕೆ ಪೂರಕವಾಗುವಂತೆ ಇಲ್ಲಿನ ನಟರಾಜ ಚಿತ್ರಮಂದಿರದಲ್ಲಿ ವಿಧವಾ ವಿವಾಹವನ್ನು ಎತ್ತಿ ಹಿಡಿಯುವ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಹೂಮಳೆ ಚಲನ ಚಿತ್ರವನ್ನು ಪ್ರದರ್ಶಿಸಲಾಗುವುದು.
ವಿಧವಾ ವಿವಾಹಕ್ಕೆ ಪರಿವರ್ತನ ಸಂಸ್ಥೆ ಪ್ರೋತ್ಸಾಹ ನೀಡುತ್ತಿದ್ದು, ಸದ್ಯದಲ್ಲಿಯೇ ವಿಧವೆಯರ ಪುನರ್ವಸತಿ ಕೇಂದ್ರವನ್ನು ತೆರೆಯಲಿದೆ ಎಂದು ಶ್ರೀಪಾದ ರಾವ್ ಹೇಳಿದ್ದಾರೆ. ವಿಧವೆಯರ ಏಳಿಗೆಗೆ ಶ್ರಮಿಸುತ್ತಿರುವ ಪರಿವರ್ತನ ಸಂಘಟನೆಗೆ ಸಹಾಯ ಮಾಡಬಯಸುವವರು ಪರಿವರ್ತನ, 303 ‘ಎ’ ಕಸ್ತೂರಿ ಧಾಮಾ ಅಪಾರ್ಟ್ಮೆಂಟ್ಸ್, 9ನೇ ಅಡ್ಡರಸ್ತೆ, 8ನೇ ಮುಖ್ಯ ರಸ್ತೆ, ಮಲ್ಲೇಶ್ವರಂಗೆ ಡಿಡಿ ಅಥವಾ ಚೆಕ್ ಕಳುಹಿಸಬಹುದು. ಈ ಸಹಾಯ ಧನಕ್ಕೆ ಆದಾಯ ತೆರಿಗೆ ವಿನಾಯಿತಿ ಇರುತ್ತದೆ. ಪರಿವರ್ತನ ಸಂಘಟನೆಯ ಬಗ್ಗೆ ತಿಳಿದುಕೊಳ್ಳಬಯಸುವವರು ಈ ವಿಳಾಸವನ್ನೇ ಸಂಪರ್ಕಿಸಬಹುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications