ಮಹಾರಾಷ್ಟ್ರ - ಕರ್ನಾಟಕ ಗಡಿ ವಿವಾದಮುಗಿದ ಅಧ್ಯಾಯ - ಹೆಗಡೆ
ಬೆಂಗಳೂರು : ಕೇಂದ್ರ ಸಚಿವ ಮನೋಹರ್ ಜೋಷಿ ಅವರು ಅನಗತ್ಯವಾಗಿ ಎಬ್ಬಿಸಿರುವ ಗಡಿ ವಿವಾದವನ್ನು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಖಂಡಿಸಿದ್ದಾರೆ. ಗಡಿ ವಿವಾದ ಸಂಬಂಧ ಪ್ರಧಾನ ಮಂತ್ರಿಗಳು ಕರೆಯುವ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಪಾಲ್ಗೊಳ್ಳಬಾರದು. ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ ಎಂದೂ ಅವರು ಬಣ್ಣಿಸಿದ್ದಾರೆ.
ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾಜನ್ ವರದಿಯೇ ಅಂತಿಮ. ಈ ಸಂಬಂಧ ಯಾರೇ ಸಭೆ ಕರೆದರೂ ಕೃಷ್ಣ ಅವರು ಬಹಿಷ್ಕರಿಸಬೇಕು ಎಂದು ಹೆಗಡೆ ಹೇಳಿದರು. ಸಾರ್ವತ್ರಿಕವಾಗಿ ಗಡಿ ವಿಷಯದಲ್ಲಿ ಹೇಳಿಕೆ ನೀಡದಂತೆ ಕೂಡ ಕೃಷ್ಣ ಅವರಿಗೆ ಸಲಹೆ ನೀಡಿದರು.
ಕರ್ನಾಟಕ ತನಗೆ ಅನ್ಯಾಯವಾಗಿದ್ದರೂ ಕೂಡ ಮಹಾಜನ್ ವರದಿಯನ್ನು ಒಪ್ಪಿದೆ. ತನ್ನ ಆ ಹಿಂದಿನ ನಿಲುವಿಗೇ ರಾಜ್ಯ ಬದ್ಧವಾಗಿರಬೇಕು ಎಂದು ಕನ್ನಡ ಚಳವಳಿ ಕೇಂದ್ರ ಸಮಿತಿ ನಗರದಲ್ಲಿ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ತಿಳಿಸಿದರು. ಬೆಳಗಾವಿಗೆ ಬಂದು ಸಲ್ಲದ ಹೇಳಿಕೆ ನೀಡಿ ಅನಗತ್ಯ ಗೊಂದಲ ಉಂಟು ಮಾಡಿರುವ ಕೇಂದ್ರ ಸಚಿವ ಮನೋಹರ ಜೋಷಿ ಅವರ ಈ ಅನುಚಿತ ವರ್ತನೆ ಖಂಡಿಸಿ ಉಭಯ ಸದನಗಳಲ್ಲೂ ಗೊತ್ತುವಳಿ ಅಂಗೀಕರಿಸಬೇಕು ಎಂಬ ಸಲಹೆಯನ್ನೂ ಅವರು ನೀಡಿದರು.
ಇಂತಹ ಪ್ರಚೋದನಕಾರಿ ಹೇಳಿಕೆಗಳು ರಾಜ್ಯಗಳ ನಡುವಿನ ಬಾಂಧವ್ಯ ಹಾಗೂ ಸಾಮರಸ್ಯವನ್ನು ಹಾಳುಮಾಡುತ್ತವೆ. ಇಂತಹ ಬೇಜವಾಬ್ದಾರಿ ಹಾಗೂ ಅಧಿಕ ಪ್ರಸಂಗಿತನದಿಂದ ವರ್ತಿಸುವವರು ಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಅನರ್ಹರು ಎಂದೂ ಹೆಗಡೆ ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಸವಾರಾಧ್ಯ, ಕನ್ನಡ ಚಳವಳಿ ಕೇಂದ್ರ ಸಮಿತಿಯ ಜಿ. ನಾರಾಯಣ ಕುಮಾರ್, ಮಾಜಿ ಶಾಸಕ ಪ್ರಭಾಕರ ರೆಡ್ಡಿ ಮೊದಲಾದವರು ಹಾಜರಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications