ರಾಜ್ಯಕ್ಕೆ ವಿದ್ಯುತ್ ಕ್ಷಾಮದ ಭೀತಿ, ಮಿತ ಬಳಕೆಗೆ ಮನವಿ
ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಮುಂಬರುವ ಸುಡು ಬೇಸಿಗೆಯ ದಿನಗಳಲ್ಲಿ ರಾಜ್ಯವು ವಿದ್ಯುತ್ ಸರಬರಾಜಿನಲ್ಲಿ ಸಂಕಷ್ಟದ ದಿನಗಳನ್ನು ಎದುರಿಸಲೇ ಬೇಕಾಗುತ್ತದೆ. ಈ ವಿಷಯವನ್ನು ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಶುಕ್ರವಾರ ವಿಧಾನಸಭೆಯಲ್ಲೇ ತಿಳಿಸಿದ್ದಾರೆ.
ಕಳೆದ ವರ್ಷ ಇದೇ ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ 86 ಮಿಲಿಯನ್ ಯುನಿಟ್ಗಳಷ್ಟು ವಿದ್ಯುತ್ ಬಳಸುತ್ತಿದ್ದೆವು. ಈದರೆ, ಈ ವರ್ಷ ವಿದ್ಯುತ್ ಬಳಕೆ 98 ಮಿಲಿಯನ್ ಯುನಿಟ್ ದಾಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಭಾರಿ ಸಂಕಷ್ಟ ಎದುರಿಸಬೇಕಾಗಿ ಬರುತ್ತದೆ ಎಂಬ ಸುಳಿವು ನೀಡಿದರು.
ಹಾಲಿ ಉತ್ಪಾದಿಸಲಾಗುತ್ತಿರುವ ವಿದ್ಯುತ್ಗೂ, ಬಳಕೆಯಾಗುತ್ತಿರುವ ವಿದ್ಯುತ್ಗೂ ತಾಳೆ ಆಗುತ್ತಿಲ್ಲ. ಬೇಸಿಗೆಯಲ್ಲಿ ವಿದ್ಯುತ್ ಬಳಕೆ ಸಹಜವಾಗೇ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ನಮ್ಮ ವಿದ್ಯುತ್ ಗ್ರಿಡ್ಗಳನ್ನು ಮತ್ತಷ್ಟು ಶಕ್ತಿಯುತ ಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಒಪ್ಪಂದವೊಂದಕ್ಕೆ ಸಹಿ ಮಾಡಿದೆ ಎಂದರು.
ವಿದ್ಯುತ್ ಪ್ರಸರಣ ಮಂಡಳಿಗಳಿಗೆ ಹಿಡಿದಿರುವ ಗ್ರಹಚಾರ ಬಿಡಿಸಿ, ಅದನ್ನು ಕೈಹಿಡಿದು ಮೇಲೆತ್ತುವ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರಾದ್ಯಂತ ಒಮ್ಮತ ಮೂಡಿದೆ ಎಂದ ಅವರು ವಿದ್ಯುತ್ ಕ್ಷಾಮ ತಲೆದೋರದಂತೆ ತಡೆಯಲು ಹಿತ ಮಿತವಾಗಿ ವಿದ್ಯುತ್ ಬಳಸುವಂತೆ ಕರೆ ತಿಳಿಸಿದರು.
ಕಗ್ಗತ್ತಲಲ್ಲಿ ರಾಜ್ಯ : ಕೆ.ಪಿ.ಟಿ.ಸಿ.ಎಲ್. ತತ್ಕ್ಷಣದಿಂದ ಜಾರಿಗೆ ಬರುವಂತೆ ಅನಿಯಮಿತ ಲೋಡ್ಷೆಡ್ಡಿಂಗ್ ಮಾಡುವುದಾಗಿ ತಿಳಿಸಿದೆ. ನಾಗಝರಿ, ಕೈಗಾ ಹಾಗೂ ರಾಯಚೂರು ವಿದ್ಯುತ್ ಘಟಕದಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆಯ ಪರಿಣಾಮವಾಗಿ ಕೇಂದ್ರ ವಿದ್ಯುತ್ ಜಾಲದಿಂದ ವಿದ್ಯುತ್ ಸರಬರಾಜು ಆಗುವ ಮೂರು ಮಾರ್ಗಗಳಲ್ಲಿ ಸಂಪರ್ಕ ಕಡಿದು, ಬೆಂಗಳೂರಿನ ಕೆಲವು ಬಡಾವಣೆಗಳೂ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳು ಶುಕ್ರವಾರ ರಾತ್ರಿ ಕಗ್ಗತ್ತಲಲ್ಲಿ ಮುಳುಗಿದ್ದವು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications