ಇನ್ನಿಂಗ್ಸ್ ಸೋಲು ತಪ್ಪಿಸಿಕೊಳ್ಳಲು ಭಾರತದ ಹೋರಾಟ
ಕೋಲ್ಕತಾ: ಆಸ್ಟ್ರೇಲಿಯಾ ನಿರೀಕ್ಷೆಯಂತೆ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. ಭಾರತ ಫಾಲೋಆನ್ ತಪ್ಪಿಸಿಕೊಳ್ಳುವಲ್ಲಿ ವಿಫಲವಾಗಿದೆ. ದಿನದ ವಿಶೇಷ ವಿ.ವಿ.ಎಸ್. ಲಕ್ಷ್ಮಣ್ ಅವರ ಅರ್ಧ ಶತಕ. ಇದೊಂದೇ ಭಾರತ ಕ್ರಿಕೆಟ್ ಅಭಿಮಾನಿಗಳಿಗೆ ಕೊಂಚ ನೆಮ್ಮದಿ ತಂದ ವಿಷಯ.
ಫಾಲೋಆನ್ ದವಡೆಯಿಂದ ಭಾರತವನ್ನು ಪಾರುಮಾಡಲು ಲಕ್ಷ್ಮಣ್ ನಡೆಸಿದ ಪ್ರಯತ್ನವೆಲ್ಲವೂ ವಿಫಲವಾಯಿತು. ಮಂಗಳವಾರ ಬೆಳಗ್ಗೆ ಬಹುಬೇಗನೇ ವೆಂಕಟಪತಿ ರಾಜು ಅವರ ವಿಕೆಟ್ ಕಳೆದುಕೊಂಡಾಗಲೇ ಭಾರತ ಫಾಲೋಆನ್ ತಪ್ಪಿಸಿಕೊಳ್ಳುವುದು ಸಾಧ್ಯವೇ ಇಲ್ಲ ಎಂಬುದು ವೇದ್ಯವಾಯಿತು. ಆದರೆ, ಲಕ್ಷ್ಮಣ್ ಆಕರ್ಷಕ ಬೌಂಡರಿಗಳನ್ನು ಬಾರಿಸಿ ಕೊಂಚ ಆಸೆ ಹುಟ್ಟಿಸಿದರು. ಅಂತಿಮವಾಗಿ ಲಕ್ಷ್ಮಣ್ ಔಟಾಗುವ ಮೂಲಕ ಭಾರತದ ಹೋರಾಟಕ್ಕೆ ತೆರೆಬಿತ್ತು. ಭಾರತ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 171 ರನ್ ಮಾತ್ರ ಗಳಿಸುವಲ್ಲಿ ಯಶಸ್ವಿಯಾಯಿತು.
ಆನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಉತ್ತಮ ಆರಂಭ ದೊರಕಿತು. ಭೋಜನ ವಿರಾಮಕ್ಕೆ ಭಾರತ ವಿಕೆಟ್ ನಷ್ಟವಿಲ್ಲದೆ 45ರನ್ ಮಾಡಿತ್ತು. ಮೊದಲ ಇನ್ನಿಂಗ್ಸ್ನಲ್ಲಿ ಕೆಟ್ಟ ಹೊಡೆತ ಬಾರಿಸಿ ಔಟಾಗಿದ್ದ ಶಡಗೋಪನ್ ರಮೇಶ್ ಎರಡನೇ ಇನ್ನಿಂಗ್ಸ್ನಲ್ಲಿ 33 ಚೆಂಡುಗಳನ್ನು ಎದುರಿಸಿ 30 ರನ್ ಗಳಿಸಿದ್ದರು. ದಾಸ್ ಎದುರಿಸಿದ 39 ಚೆಂಡುಗಳಿಂದ 14 ರನ್ ಮಾಡಿ ಆಡುತ್ತಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications